ದಿ. ಅಂಬರೀಷ ಅಂತಿಮ ಸಂಸ್ಕಾರ ವೆಚ್ಚದ ಮಾಹಿತಿ ಸರ್ಕಾರದ ಬಳಿ ಇಲ್ಲ: ಗಡಾದ ಆರೋಪ
Team Udayavani, Jul 13, 2021, 5:23 PM IST
ಬೆಳಗಾವಿ : ಮಾಜಿ ಸಚಿವ ದಿ. ಅಂಬರೀಷ್ ಅವರ ಅಂತಿಮ ಸಂಸ್ಕಾರದ ಸಲುವಾಗಿ ವೆಚ್ಚ ಮಾಡಿರುವ ಹಣ ಎಷ್ಟು ಎಂಬುದು ಸರ್ಕಾರದ ಬಳಿ ಮಾಹಿತಿ ಇಲ್ಲ. ಈ ಮಾಹಿತಿ ಯಾರ ಬಳಿ ಇದೆ ಎಂಬುದೂ ಮುಖ್ಯ ಕಾರ್ಯದರ್ಶಿಯವರ ಕಚೇರಿಯವರಿಗೆ ಗೊತ್ತಿಲ್ಲ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದ್ದಾರೆ.
ಅಂಬರೀಷ್ ಅವರ ವೈದ್ಯಕೀಯ ಉಪಚಾರಕ್ಕಾಗಿ ಸರ್ಕಾರದಿಂದ ವೆಚ್ಚ ಮಾಡಿದ ಹಣ, ಹಾಗೂ ಅಂತಿಮ ಸಂಸ್ಕಾರಕ್ಕೆ ವೆಚ್ಚ ಮಾಡಿರುವುದು ಹಾಗೂ ಅಂಬರೀಷ್ ಅವರ ಸ್ಮಾರಕ ನಿರ್ಮಾಣಕ್ಕೆ ನಿಗದಿ ಪಡಿಸಿದ ಮೊತ್ತದ ಬಗ್ಗೆ ಮಾಹಿತಿ ನಿಡುವಂತೆ ಭೀಮಪ್ಪ ಗಡಾದ ಅವರು 5 ಜನವರಿ 2019 ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಅರ್ಜಿ ಸಲ್ಲಿಸಿದ್ದರು. ವೈದ್ಯಕೀಯ ವೆಚ್ಚದ ಬಗ್ಗೆ ಬೆಂಗಳೂರಿನ ವಿಕ್ರಮ ಆಸ್ಪತ್ರೆ ಹಾಗೂ ಸಿಂಗಾಪುರ ಆಸ್ಪತ್ರೆಯ ವೆಚ್ಚ 1.22 ಕೋಟಿ ರೂ. ಮೊತ್ತವನ್ನು ಸಕಾರವೇ ಭರಿಸಲಾಗಿದೆ ಎಂದು ಮಾಹಿತಿ ಸಿಕ್ಕಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಅಮೀರ್ ಅವರಂತವರಿಂದ ದೇಶದ ಜನಸಂಖ್ಯೆ ಜಾಸ್ತಿ ಆಗ್ತಿದೆ: ಬಿಜೆಪಿ ಸಂಸದ ಸುಧೀರ್
ಅಂಬರೀಷರ ಅಂತಿಮ ಸಂಸ್ಕಾರಕ್ಕೆ ವೆಚ್ಚ ಮಾಡಿದ ಮಾಹಿತಿಯನ್ನು ಮಂಡ್ಯ ಜಿಲ್ಲಾಧಿಕಾರಿ ಬಳಿ ಹಾಗೂ ಸ್ಮಾರಕಕ್ಕೆ ನಿಗದಿಪಡಿಸಿದ ಮೊತ್ತದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪಡೆಯುವಂತೆ ಮುಖ್ಯ ಕಾರ್ಯದರ್ಶಿಯವರ ಕಚೇರಿಯಿಂದ ಅರ್ಜಿ ವರ್ಗಾಯಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಲಿಖಿತ ಉತ್ತರ ನೀಡಿರುವ ಮಂಡ್ಯ ಜಿಲ್ಲಾಧಿಕಾರಿಗಳು ಅಂಬರಿಷ ಅವರ ಅಚಿತಿಮ ಸಂಸ್ಕಾರಕ್ಕೆ ವೆಚ್ಚವಾದ ಹಣದ ಮಾಹಿತಿಯನ್ನು ಮುಖ್ಯ ಕಾರ್ಯದರ್ಶಿಯವರ ಕಚೇರಿಯಿಂದಲೇ ಪಡೆಯುವಂತೆ 5 ನವೆಂಬರ್ 2019ರಂದು ಆದೇಶ ಮಾಡಿದ್ದಾರೆ. ಅಲ್ಲದೇ ಬೆಂಗಳೂರಿನ ಶ್ರೀ ಕಂಠೀರವ ಸ್ಟುಡಿಯೋದವರೂ ಅಂಬರೀಷ್ಗೆ ಸಂಬಂಧಿಸಿದ ಯಾವುದೇ ವೆಚ್ಚ ಭರಿಸಿಲ್ಲ ಎಂದು ತಿಳಿಸಿದ್ದಾರೆ.
ಅಂಬರೀಷರ ಅಂತ್ಯ ಸಂಸ್ಕಾರದ ವೆಚ್ಚದ ಕುರಿತು ಒಬ್ಬರು ಇನ್ನೊಬ್ಬರ ಮೇಲೆ ಬೆರಳು ಮಾಡಿ ತೋರಿಸುತ್ತಿದ್ದಾರೆ. ಇದು ಅನುಮಾನಕ್ಕೆ ಎಡೆ ಮಾಡಿ ಕೊಟ್ಟಿದೆ. ಈ ಮಾಹಿತಿ ಯಾರ ಬಳಿ ಇದೆ. ಅಂತಿಮ ಸಂಸ್ಕಾರಕ್ಕೆ ವೆಚ್ಚವಾದ ಹಣವೆಷ್ಟು ಎಂಬುದೂ ಸರ್ಕಾರ ಮತ್ತು ಅಂಬರೀಷ ಕುಟುಂಬದವರು ಈಗಲಾದರೂ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಕೇರಳಕ್ಕೆ ಮತ್ತೆ ಝೀಕಾ ಆಘಾತ : ಮತ್ತೀರ್ವರಲ್ಲಿ ಹೊಸ ವೈರಸ್ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ