21ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆ


Team Udayavani, Jan 11, 2019, 11:43 AM IST

11-january-25.jpg

ಅಥಣಿ: ಇಲ್ಲಿಯ ಮಿನಿ ವಿಧಾನಸೌಧದಲ್ಲಿ ದಿನಾಂಕ ಜ.21ರಂದು ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಾಗಿ ಉಪ ತಹಶೀಲ್ದಾರರಾದ ರಾಜು ಬುರ್ಲಿ ಹಾಗೂ ಬಿರಾದಾರಪಾಟೀಲ ಅವರ ನೇತೃತ್ವದಲ್ಲಿ ಗಂಗಾಮತ(ತಳವಾರ) ಸಮಾಜದ ತಾಲೂಕಿನ ಹಿರಿಯ ಕಿರಿಯ ಮುಖಂಡರ ಸಭೆ ಜರುಗಿತು.

ತಾಲೂಕಾಡಳಿತದಿಂದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಸರಕಾರದ ನಿರ್ದೇಶನದ ಪ್ರಕಾರ ಆಚರಿಸಲು ನಿರ್ಣಯಿಸಲಾಯಿತು. ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ಜಯಂತಿಗಾಗಿ ಸರಕಾರದಿಂದ ಗಂಗಾಮತ(ತಳವಾರ) ಸಮಾಜಕ್ಕೆ 25 ಸಾವಿರ ರೂ. ನೀಡಲಾಗುವುದು. ಸರಕಾರ ಕಾರ್ಯಕ್ರಮವನ್ನಾಗಿ ಮಿನಿ ವಿಧಾನಸೌಧದಲ್ಲಿ 9.30ಕ್ಕೆ ಆಚರಿಸಲಾಗುವುದು. ಬಸವೇಶ್ವರ(ಅನಂತಪುರ) ವೃತ್ತದಲ್ಲಿ ಕುಂಭಮೇಳ ಉದ್ಘಾಟನೆ ನೆರವೇರಿಸಲಾಗುವುದು. ಚೌಡಯ್ಯನವರ ಭಾವಚಿತ್ರದೊಂದಿಗೆ ಕುಂಭ ಮೇಳ ಹಲ್ಯಾಳ ಮತ್ತು ಅಂಬೇಡ್ಕರ್‌ ವೃತ್ತದ ಮುಖಾಂತರ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಹಾಯ್ದು ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಸಮಾರೋಪಗೊಂಡು ನಂತರ ಪ್ರಮುಖ ಕಾರ್ಯಕ್ರಮವನ್ನು ಗಣ್ಯರಿಂದ ಉದ್ಘಾಟಿಸಲಾಗುವುದು. ಕಾರಣ ತಾಲೂಕಿನ ಎಲ್ಲ ಸಮಾಜದ ಬಾಂಧವರು ಜಯಂತಿಗೆ ಬಂದು ಯಶಸ್ವಿಗೊಳಿಸುವಂತೆ ಕೋರಿ ಸಭೆಯಲ್ಲಿ ಠರಾವ್‌ ಪಾಸ್‌ ಮಾಡಲಾಯಿತು.

ಈ ವೇಳೆ ಗಂಗಾಮತ ಕೋಳಿ ತಳವಾರ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಜು ಜಮಖಂಡಿಕರ ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ನೇರ ದಿಟ್ಟ ವಚನಗಳಿಂದ ಸಮಾಜದಲ್ಲಿರುವ ಅನಿಷ್ಟತೆ ಮತ್ತು ಅಂಕುಡೊಂಕುಗಳನ್ನು ತಿದ್ದುವಂತಾ ಕಾರ್ಯವನ್ನು ಮಾಡಿದರು. ಅಸಂಘಟಿತ ಸಮಾಜವನ್ನು ಒಂದುಗೂಡಿಸಲು ಮಹಾನ್‌ ಪುರುಷರ ಹಾಗೂ ನಾಯಕರ ಜಯಂತಿಗಳು ಸಹಕಾರಿಯಾಗುತ್ತವೆ ಎಂದು ತಿಳಿಸಿದರು. ತಹಶೀಲ್ದಾರರಾದ ರಾಜು ಬುರ್ಲಿ ಹಾಗೂ ಎನ್‌.ಎಂ. ಬಿರಾದಾರಪಾಟೀಲ ಮಾತನಾಡಿ, ಯಾವುದೇ ರೀತಿ ತಾರತಮ್ಯ ಮತ್ತು ವಿವಾದವಿಲ್ಲದೆ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸೋಣ. ಸರಕಾರದಿಂದ ಕೇವಲ 25 ಸಾವಿರ ರೂ. ಧನಸಹಾಯ ಒದಗಿಸಲಾಗುವುದು. ಸಮಾಜದ ಬಾಂಧವರು ಇದಕ್ಕಿಂತ ಹೆಚ್ಚಿನ ವಿಜೃಂಭಣೆ ಬೇಕಾದರೆ ತಮ್ಮ ಶಕ್ತಿಗೆ ಅನುಗುಣವಾಗಿ ಆಚರಿಸಕೊಳ್ಳಬಹುದಾಗಿದೆ ಎಂದು ಸ್ಪಷ್ಟಪಡಿಸಿದರು.

ಬಿ.ಎಸ್‌.ಯಾದವಾಡ, ಸಿ.ಜಿ.ಬಿರಾದಾರ, ಸಂಘರ್ಷ ಸಿದ್ದಾರ್ಥ ಸಿಂಗೆ, ಖಲಾಟೆ, ಗ್ರಾಪಂ ಸದಸ್ಯ ಪ್ರಹ್ಲಾದ ಗಸ್ತಿ, ಬಾಪು ಗಸ್ತಿ, ರಾವಸಾಬ ಕಟಗೇರಿ, ಹನುಮಂತ ಕಾಲವೆ, ಶಿವನಗೌಡ ಚುನಾರ, ಸದಾಶಿವ ತಳವಾರ, ಅಣ್ಣಾಪ್ಪ ಸನದಿ, ಸದಾಶಿವ ಕೋಳಿ, ಪ್ರಕಾಶ ಕೋಳಿ, ಗುಳಪ್ಪ ಕೋಳಿ ಸೇರಿದಂತೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.