ವೈದ್ಯ ವೃತ್ತಿ ಸಮಾಜದ ಅವಿಭಾಜ್ಯ ಅಂಗ: ಡಾ| ಪಾಂಗಿ
Team Udayavani, Jul 3, 2019, 12:43 PM IST
ಬೆಳಗಾವಿ: ಲೋಕಮಾನ್ಯ ಮಲ್ಟಿಪರ್ಪಸ್ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆ ವೈದ್ಯರನ್ನು ಸನ್ಮಾನಿಸಲಾಯಿತು.
ಬೆಳಗಾವಿ: ವೈದ್ಯರು ಸಮಾಜದ ರಕ್ಷಕರಿದ್ದಂತೆ. ಹಗಲಿರುಳು ರೋಗಿಗಳ ಸೇವೆಯಲ್ಲಿಯೇ ತಮ್ಮ ಆಯುಷ್ಯ ಕಳೆಯುತ್ತಾರೆ ಆದ್ದರಿಂದ ವೈದ್ಯರಿಗೆ ಸಾಮಾಜಿಕ ಅತ್ಯುನ್ನತ ಮನ್ನಣೆಯು ಅವಶ್ಯಕ ಎಂದು ಯುಎಸ್ಎಂ ಕೆಎಲ್ಇಯ ನಿಯೋಜಿತ ನಿರ್ದೇಶಕ ಡಾ| ಅಶೋಕ ಪಾಂಗಿ ಹೇಳಿದರು.
ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯಲ್ಲಿ ಲೋಕಮಾನ್ಯ ಮಲ್ಟಿಪರ್ಪಸ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ವೈದ್ಯರ ದಿನದ ಅಂಗವಾಗಿ ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ವೈದ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವೈದ್ಯ ಮತ್ತು ಸಮಾಜ ಬೇರೆ ಬೇರೆಯಾಗಿಲ್ಲ. ವೈದ್ಯ ವೃತ್ತಿಯು ಸಮಾಜದ ಒಂದು ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ವೈದ್ಯರನ್ನು ನಿಮ್ಮಲ್ಲಿ ಒಬ್ಬರಂತೆ ಕಾಣಿರಿ ಎಂದರು.
ಲೋಕಮಾನ್ಯ ಮಲ್ಟಿಪರ್ಪಸ ಕೋ ಆಪರೇಟಿವ್ ಸೊಸೈಟಿಯ ಸಂಯೋಜಕ ವಿನಾಯಕ ಜಾಧವ ಮಾತನಾಡಿ, ವೈದ್ಯರು ತಮ್ಮ ಸ್ವಹಿತಾಸಕ್ತಿ ಮತ್ತು ತಮ್ಮ ಕೌಟುಂಬಿಕ ಜೀವನ ಕಡೆಗಣಿಸಿ ರೋಗಗಳ ಸೇವೆ ಮಾಡುತ್ತಾರೆ. ಆದ್ದರಿಂದ ಅವರು ಸಮಾಜದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ ಎಂದರು.
ಮಾಜಿ ಮೇಯರ ವಿಜಯ ಮೋರೆ ಮಾತನಾಡಿ, ಸಮಾಜದ ರಕ್ಷಣೆ ಮಾಡುತ್ತಿರುವ ವೈದ್ಯರಿಂದ ಪ್ರತಿಯೊಬ್ಬರೂ ರೋಗಗಳಿಂದ ಮುಕ್ತಿ ಪಡೆಯುವದರ ಜಿತೆಗೆ ಆರೋಗ್ಯಕರ ಜೀವನ ಪದ್ಧತಿಯನ್ನು ಅರಿಯುತ್ತಾನೆ ಎಂದರು. ಈ ವೇಳೆ 75 ವೈದ್ಯರನ್ನು ಸನ್ಮಾನಿಸಲಾಯಿತು. ಸಂತೋಷ ಮಮದಾಪುರ, ಸಂಜಯ ಸವ್ವಾಶೇರಿ, ಡಾ| ಬಿ.ಬಿ. ಪುಟ್ಟಿ ಹಾಗೂ ಡಾ| ಪಿ.ಎಸ್. ಅರಳಿಕಟ್ಟಿ ಉಪಸ್ಥಿತರಿದ್ದರು.
ಕೆಎಲ್ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿರ್ದೇಶಕ ಡಾ| ಎಸ್.ಸಿ. ಧಾರವಾಡ ಸ್ವಾಗತಿಸಿದರು. ಸಂತೋಷ ಇತಾಪೆ ನಿರೂಪಿಸಿದರು. ಅರುಣ ನಾಗಣ್ಣವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?