ಅಂಗನವಾಡಿ ಕಾರ್ಯಕರ್ತೆಯರ ಸತ್ಯಾಗ್ರಹ


Team Udayavani, Mar 16, 2021, 3:48 PM IST

ಅಂಗನವಾಡಿ ಕಾರ್ಯಕರ್ತೆಯರ ಸತ್ಯಾಗ್ರಹ

ಚಿಕ್ಕೋಡಿ: ಕೋವಿಡ್ ಸಂದರ್ಭದಲ್ಲಿ ಹಗಲಿರುಳು ಶ್ರಮಿಸಿದ್ದ ಅಂಗನವಾಡಿ ನೌಕರರ ಸಮಸ್ಯೆಗಳನ್ನು ಬಜೆಟ್‌ನಲ್ಲಿ ಬಗೆಹರಿಸದ ಪರಿಣಾಮ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಸಮಿತಿ ಪದಾಧಿಕಾರಿಗಳು ಸೋಮವಾರ ಒಂದು ದಿನ ಇಲ್ಲಿನ ಸಿಡಿಪಿಒ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿ ಸರ್ಕಾರದ ವಿರುದ್ಧ ಹರಿಹಾಯ್ದರು.

ಸರಕಾರ ಸಂಪೂರ್ಣವಾಗಿ ಕಡೆಗಣಿಸಿದ ಹಿನ್ನೆಲೆಯಲ್ಲಿ ಸತ್ಯಾಗ್ರಹದ ಜೊತೆಗೆ ಮಾರ್ಚ 13 ರಿಂದ ಹೆಚ್ಚುವರಿ ಕೆಲಸಗಳಾದ ಇ-ಸರ್ವೇ, ಸಿಎನ್‌ಇ ಸರ್ವೇ, ಬಿಪಿಎಲ್‌ ಕಾರ್ಡ ಸರ್ವೇ, ಆರ್‌ಸಿಎಚ್‌ ಸರ್ವೆ, ಭಾಗ್ಯಲಕ್ಷ್ಮೀ, ಮಾತೃವಂದನಾ, ಮಾತೋಶ್ರೀ, ಸ್ತ್ರಿಶಕ್ತಿ ಮುಂತಾದ ಕೆಲಸಗಳನ್ನು ಬಹಿಷ್ಕರಿಸಲಾಗಿದೆ. ಜೊತೆಗೆ ಅಂಗನವಾಡಿ ನೌಕರರ ಬೇಡಿಕೆ ಈಡೇರಿಸುವಂತೆ ಹಲವು ಹೋರಾಟಗಳು ನಡೆದ ಮೇಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೇವಾ ಜೇಷ್ಠತೆ ಆಧಾರದಲ್ಲಿ 153.23 ಕೋಟಿ ರೂ, ಮಿನಿ ಅಂಗನವಾಡಿ ಕೇಂದ್ರ ಸಹಾಯಕಿ ನೇಮಕಾತಿಗೆ 6.99 ಕೋಟಿ ರೂ., ಅಂಗನವಾಡಿ ಸಹಾಯಕರಿಗೆ ಸಂಬಳದ ವ್ಯತ್ಯಾಸ ಮೊತ್ತ 131.42 ಕೋಟಿ ರೂ., ನಿವೃತ್ತಿ ಸೌಲಭ್ಯಕ್ಕೆ 47.82 ಕೋಟಿ ರೂ. ಶಿಫಾರಸು ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಮೂರು ಶಿಫಾರಸು ಪರಿಗಣಿಸದೇ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಕೋವಿಡ್ ವೇಳೆ ಕಾರ್ಯನಿರ್ವಹಿಸಿ ರಾಜ್ಯದಲ್ಲಿ ಮೃತಪಟ್ಟ 26 ಜನರ ಕುಟುಂಬಗಳಿಗೆ ಇಂದಿಗೂ ಪರಿಹಾರ ದೊರಕಿಲ್ಲ, ಅವರಿಗೆ ಪರಿಹಾರ ನೀಡಬೇಕು. 2016ರಲ್ಲಿ ನಿವೃತ್ತರಾದ ಕಾರ್ಯಕರ್ತರಿಗೆ ಮತ್ತು ಸಹಾಯಕಿಯರಿಗೆ ನೀಡಬೇಕಿದ್ದ ಹಣವನ್ನು ಸಹ ಸರ್ಕಾರ ಕೊಟ್ಟಿಲ್ಲ. ಇಂದಿನಿಂದ ಹೆಚ್ಚುವರಿ ಕೆಲಸಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸಂಘದ ಅಧ್ಯಕ್ಷ ಗುರವ್ವ ಮಡಿವಾಳ, ಕಾರ್ಯದರ್ಶಿ ಭಾರತಿ ಸನದಿ, ಖಜಾಂಚಿ ಸಂಗೀತಾ ಚಿಂಚಣಿ, ಶಿವಲೀಲಾ ಮಠದ, ಶೋಭಾ ಬಾನೆ, ರೇಖಾ ಇಟ್ಟೇಕರ, ಸುರೇಖಾ ಭವಾನಿ, ಶಶಿಕಲಾ ಪೆಂಡಾರೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.