ಅಂಗನವಾಡಿ ವ್ಯವಸ್ಥೆ ಬಲಹೀನ ಮಾಡದಿರಿ

|ಅಂಗನವಾಡಿ ನೌಕರರ ಬೃಹತ್‌ ಪ್ರತಿಭಟನೆ |ಹೊಸ ವ್ಯವಸ್ಥೆ ಜಾರಿ ನ್ಯಾಯಸಮ್ಮತವಲ್ಲ |ನೌಕರರಲ್ಲಿ ಹೆಚ್ಚಿದ ಆತಂಕ

Team Udayavani, May 28, 2019, 11:02 AM IST

belegavi-tdy-2..

ಬೆಳಗಾವಿ: ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ ಹಾಗೂ ಯುಕೆಜಿ ಅರಂಭಿಸಬೇಕು ಎಂದು ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ಬೆಳಗಾವಿ: ರಾಜ್ಯದಲ್ಲಿರುವ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿರುವ ಮಕ್ಕಳನ್ನು ಸರಕಾರಿ ಪ್ರಾಥಮಿಕ ಶಾಲೆಗಳಿಗೆ ವರ್ಗಾಯಿಸಿ ಎಲ್ಕೆಜಿ ಹಾಗೂ ಯುಕೆಜಿ ಪ್ರಾರಂಭ ಮಾಡುವುದಾಗಿ ಹೇಳಿ ಆದೇಶ ಹೊರಡಿಸಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸಿಐಟಿಯು ಹಾಗೂ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅಂಗನವಾಡಿ ನೌಕರರು ಸರಕಾರ ಇಂತ ಕ್ರಮದ ಮೂಲಕ ಸಮಗ್ರ ಬಾಲ ವಿಕಾಸ ಯೋಜನೆಯನ್ನು ಬಲಹೀನ ಮಾಡಲು ಹೊರಟಿದೆ. ಒಂದು ಸಂಸ್ಥೆಯನ್ನು ಸಬಲಗೊಳಿಸಲು ಇನ್ನೊಂದು ಸಂಸ್ಥೆಯನ್ನು ದುರ್ಬಲಗೊಳಿಸುವ ನಿರ್ಧಾರ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

1975 ರಲ್ಲಿ ಪ್ರಾರಂಭವಾದ ಸಮಗ್ರ ಬಾಲವಿಕಾಸ ಯೋಜನೆ ಅಡಿಯಲ್ಲಿ ಕರ್ನಾಟಕ ರಾಜ್ಯದಲ್ಲಿ 65 ಸಾವಿರ ಕೇಂದ್ರಗಳಲ್ಲಿ 1 ಲಕ್ಷ 30 ಸಾವಿರ ಅಂಗನವಾಡಿ ನೌಕರರು ಕಳೆದ 40 ವರ್ಷಗಳಿಂದ 3 ರಿಂದ 6 ವರ್ಷದ ಒಳಗಿನ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಿ, ಪೌಷ್ಟಿ‌ಕ ಆಹಾರ ನೀಡುವ ಮೂಲಕ ಮಕ್ಕಳ ಆರೋಗ್ಯ ಕಾಪಾಡುವ ಕೆಲಸವನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಆದರೆ ಸರಕಾರ ಈಗ ಅಂಗನವಾಡಿಗಳನ್ನೇ ಬಲಹೀನ ಮಾಡಲು ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಗ್ರ ಬಾಲ ವಿಕಾಸ ಯೋಜನೆಯಡಿ ಮಾರ್ಗಸೂಚಿಗಳ ಪ್ರಕಾರ ಈಗಾಗಲೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ. ಈಗಿರುವ ವ್ಯವಸ್ಥೆಯನ್ನು ಬಲಗೊಳಿಸುವುದನ್ನು ಬಿಟ್ಟು ಹೊಸ ವ್ಯವಸ್ಥೆ ಜಾರಿಗೆ ತರುವುದು ನ್ಯಾಯಸಮ್ಮತವಲ್ಲ ಎಂದು ಪ್ರತಿಭಟನಾಕಾರರು ಸರಕಾರದ ವಿರುದ್ಧ ಕಿಡಿಕಾರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ವಿ.ಪಿ.ಕುಲಕರ್ಣಿ ಕಳೆದ 30 ವರ್ಷಗಳಿಂದ ಸಾವಿರಾರು ಅಂಗನವಾಡಿ ನೌಕರರು ಕಡಿಮೆ ವೇತನದಲ್ಲಿ 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ, ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಮೂಲಕ ತಮ್ಮ ಜೀವನವನ್ನೇ ಕಳೆದಿದ್ದಾರೆ. ಹೀಗಿರುವಾಗ ಸರಕಾರ ಈಗ ಅಂಗನವಾಡಿ ಕೇಂದ್ರಗಳಲ್ಲಿರುವ ಮಕ್ಕಳನ್ನು ಸರಕಾರಿ ಪ್ರಾಥಮಿಕ ಶಾಲೆಗಳಿಗೆ ವರ್ಗಾಯಿಸಿ ಎಲ್ಕೆಜಿ ಹಾಗೂ ಯುಕೆಜಿ ಪ್ರಾರಂಭ ಮಾಡುವುದಾಗಿ ಹೇಳಿರುವುದು ನೌಕರರಲ್ಲಿ ಆತಂಕ ಉಂಟುಮಾಡಿದೆ ಎಂದರು.

ಈಗಾಗಲೇ ರಾಜ್ಯದಲ್ಲಿ 16.40 ಲಕ್ಷ ಮಕ್ಕಳು ಅಂಗನವಾಡಿಗಳಿಗೆ ದಾಖಲಾಗಿದ್ದಾರೆ. ಇಮತಹ ಪರಿಸ್ಥಿತಿಯಲ್ಲಿ ಸರಕಾರ ತನ್ನ ಆದೇಶ ಪುನರ್‌ ಪರಿಶೀಲಿಸಬೇಕು. ಎಲ್ಕೆಜಿ-ಯುಕೆಜಿ ಯನ್ನು ಅಂಗನವಾಡಿ ಕೇಂದ್ರಲ್ಲಿಯೇ ಪ್ರಾರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಗೌರವ ಅಧ್ಯಕ್ಷ ಜಿ.ಎಂ. ಜೈನೆಖಾನ್‌, ಅಧ್ಯಕ್ಷ ದೊಡ್ಡವ್ವ ಪೂಜಾರಿ, ಕಾರ್ಯದರ್ಶಿ ಗೋದಾವರಿ ರಾಜಾಪುರೆ, ಟಿ ಎ ಭಭಗೌಡ, ವಿ ಎನ್‌ ಕಂಪ್ಲಿ, ಸರಸ್ವತಿ ಮಾಳಶೆಟ್ಟಿ, ಪಿ.ವಿ. ಸಾಲಿಮಠ, ವಿದ್ಯಾ ಕುಂಬಾರ, ಮುನೀರಾ ಮುಲ್ಲಾ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.