ಭಯೋತ್ಪಾದನಾ ವಿರೋಧಿ ದಿನಾಚರಣೆ
Team Udayavani, May 22, 2019, 8:04 AM IST
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಜ್ಞಾನ ಸಂಗಮದಲ್ಲಿ ಭಯೋತ್ಪಾದನಾ ವಿರೋಧಿ ದಿನದಂದು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಜ್ಞಾನ ಸಂಗಮದಲ್ಲಿ ಭಯೋತ್ಪಾದನೆ ದುಷ್ಪರಿಣಾಮಗಳ ಬಗ್ಗೆ ಯುವ ಜನಾಂಗದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಭಯೋತ್ಪಾದನಾ ವಿರೋಧಿ ದಿನ ಮಂಗಳವಾರ ಆಚರಿಸಲಾಯಿತು.
ವಿಶ್ವವಿದ್ಯಾಲಯ ಕುಲಪತಿ ಡಾ| ಕರಿಸಿದ್ದಪ್ಪ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಜನಸಾಮಾನ್ಯರನ್ನು ವಿಶೇಷವಾಗಿ ಯುವಕರ ಮನಸ್ಥಿತಿ ತಪ್ಪು ಮಾರ್ಗದರ್ಶನ ಮಾಡುವ ಮೂಲಕ ಭಯೋತ್ಪಾದನೆ ಹುಟ್ಟು ಹಾಕಲಾಗುತ್ತಿದೆ. ಇದನ್ನು ಹೋಗಲಾಡಿಸಲು ನಾಗರಿಕರಲ್ಲಿ ಸಮಗ್ರತೆ ಹಾಗೂ ಸಹೋದರತ್ವ ಮನೋಭಾವನೆ ಬೆಳೆಸಬೇಕಾದ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.
ವಿಟಿಯು ಪರೀಕ್ಷಾ ವಿಭಾಗದ ಕುಲಸಚಿವ ಹಾಗೂ ಪ್ರಭಾರಿ ಕುಲಸಚಿವ ಡಾ| ಸತೀಶ ಅಣ್ಣಿಗೇರಿ, ಹಣಕಾಸು ಅಧಿಕಾರಿ ಎಂ.ಎ. ಸಪ್ನಾ, ಸ್ಥಾನಿಕ ಅಭಿಯಂತ ಹೇಮಂತಕುಮಾರ, ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕರು, ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ