ಕಬ್ಬು ಬೆಳೆಗಾರರಿಗೆ ಮಹಾ ಆತಂಕ


Team Udayavani, Oct 26, 2019, 12:20 PM IST

bg-tdy-1

ಚಿಕ್ಕೋಡಿ: ರಾಜ್ಯದ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳು ಹೆಚ್ಚಿನ ದರ ನೀಡುವುದರಿಂದ ರಾಜ್ಯದ ರೈತರು ಕಬ್ಬನ್ನು ಮಹಾರಾಷ್ಟ್ರ ಸಕ್ಕರೆ ಕಾರ್ಖಾನೆಗಳಿಗೆ ಕಳಿಸುತ್ತಾರೆ. ಆದರೆ ಪ್ರಸಕ್ತ ಹಂಗಾಮಿನಲ್ಲಿ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗೆ ರಾಜ್ಯದ ಕಬ್ಬು ಹೋಗದಂತೆ ರಾಜ್ಯ ಸರ್ಕಾರ ನಿರ್ಬಂಧ ಹೇರಬಹುದೇ? ಎಂಬ ಚಿಂತೆ ರೈತರನ್ನು ಕಾಡುತ್ತಿದೆ. ಕಳೆದ ಆಗಸ್ಟ್‌ ತಿಂಗಳಲ್ಲಿ ಉಂಟಾದ ಭೀಕರ ಪ್ರವಾಹ ಮತ್ತು ಅತೀಯಾದ ಮಳೆಯಿಂದ ರಾಜ್ಯದ ಗಡಿ ಭಾಗದ ಲಕ್ಷಾಂತರ ಹೆಕ್ಟೇರ್‌ ಕಬ್ಬು ಬೆಳೆ ನಾಶವಾಗಿದೆ. ಇದರಿಂದ ಇತ್ತೀಚೆಗೆ ಬೆಳಗಾವಿಯಲ್ಲಿ ಸಕ್ಕರೆ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಕೆ ನಿರ್ಬಂಧಿ ಸುವ ಕುರಿತು ಸುದೀರ್ಘ‌ ಚರ್ಚೆಯಾಗಿತ್ತು.

ಆದರೆ ಪ್ರಸಕ್ತ ಹಂಗಾಮಿನಲ್ಲಿ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳಿಗೆ ರಾಜ್ಯದ ಕಬ್ಬು ಹೋಗದಂತೆ ಸಕ್ಕರೆ ಉದ್ಯಮಿಗಳು ಸರ್ಕಾರದ ಮೇಲೆ ಒತ್ತಡ ಹಾಕುತ್ತಿರುವುದು ರೈತರ ಸಿಟ್ಟಿಗೆ ಕಾರಣವಾಗಿದೆ. ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಲು ನಿರ್ಬಂಧ ಹೇರುವ ಬದಲು ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬಿಗೆ ಬೆಲೆ ನೀಡಬೇಕೆಂದು ರೈತ ಸಂಘಟನೆಗಳ ಒತ್ತಾಯವಾಗಿದೆ.

ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ನಿಪ್ಪಾಣಿ, ಚಿಕ್ಕೋಡಿ, ಕಾಗವಾಡ, ರಾಯಬಾಗ ಮತ್ತು ಅಥಣಿ ತಾಲೂಕಿನ ರೈತರು ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳಿಗೆ ಪ್ರತಿ ವರ್ಷ ಕಬ್ಬು ಪೂರೈಕೆ ಮಾಡುವುದು ಸರ್ವೇ ಸಾಮಾನ್ಯ. ಅಲ್ಲಿನ ಬಹುತೇಕ ಸಕ್ಕರೆ ಕಾರ್ಖಾನೆಗಳು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗಿಂತ ಪ್ರತಿ ಟನ್‌ ಕಬ್ಬಿಗೆ 400 ರಿಂದ 500 ರೂ. ಹೆಚ್ಚುವರಿ ಬೆಲೆ ನೀಡುತ್ತವೆ. ಪ್ರಸಕ್ತ ಹಂಗಾಮಿನಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಲಕ್ಷಾಂತರ ಹೆಕ್ಟೇರ್‌ ಕಬ್ಬು ಬೆಳೆ ನಾಶವಾಗಿ ಹೋಗಿದೆ. ಚೆನ್ನಾಗಿರುವ ಕಬ್ಬು ಮಹಾರಾಷ್ಟ್ರ ಸಕ್ಕರೆ ಕಾರ್ಖಾನೆಗೆ ಪೂರೈಕೆಯಾದರೇ ರಾಜ್ಯದ ಸಕ್ಕರೆ ಕಾರ್ಖಾನೆಗಳು ಸಂಕಷ್ಟಕ್ಕೆ ಒಳಗಾಗುತ್ತವೆ. ಹೀಗಾಗಿ ಮಹಾರಾಷ್ಟ್ರ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಕೆಯನ್ನು ರಾಜ್ಯ ಸರ್ಕಾರ ನಿಲ್ಲಿಸಬಹುದು ಎಂಬ ಆತಂಕ ರೈತರಲ್ಲಿ ಮೂಡಿದೆ.

ರಾಜ್ಯದ ಗಡಿ ಭಾಗ ಮತ್ತು ಮಹಾರಾಷ್ಟ್ರದ ಬಹುತೇಕ ಸಕ್ಕರೆ ಕಾರ್ಖಾನೆಗಳು ಬಹುರಾಜ್ಯ ಕಾಯ್ದೆಯಡಿ ನೋಂದಾಯಿತವಾಗಿವೆ. ಕಾರ್ಖಾನೆಯ ಸದಸ್ಯತ್ವ ಹೊಂದಿದ್ದ ರೈತರಿಗೆ ಯಾವುದೇ ರೀತಿ ತೊಂದರೆಯಾಗದೇ ಇರಬಹುದು. ಆದರೆ ಸದಸ್ಯತ್ವ ಹೊಂದದೇ ಇರುವ ರೈತರಿಗೆ ತೊಂದರೆಯಾಗಿ ಸಂಕಷ್ಟ ಅನುಭವಿಸಬೇಕಾಗುತ್ತದೆ. ರಾಜ್ಯದ ಗಡಿ ಭಾಗದ ಶೇ.50ರಷ್ಟು ಕಬ್ಬು ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗೆ ಪೂರೈಕೆ ಆಗುವುದರಿಂದ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಳ್ಳಬಹುದು ಎನ್ನಲಾಗುತ್ತಿದೆ.

ಈ ವರ್ಷದ ಬೇಸಿಗೆಯಲ್ಲಿ ಕೃಷ್ಣಾ, ದೂಧಗಂಗಾ ಮತ್ತು ವೇಧಗಂಗಾ ನದಿಗಳು ನೀರಿಲ್ಲದೇ ಬತ್ತಿ ಹೋಗಿ ಎರಡು ತಿಂಗಳುಗಳ ಕಾಲ ರೈತರು ಭಾರಿ ಸಂಕಷ್ಟ ಅನುಭವಿಸಿದ್ದರು. ನಂತರ ಮುಂಗಾರು ಹಂಗಾಮಿನಲ್ಲಿ ಮಳೆ ಆರಂಭವಾಗಿ ಆಗಸ್ಟ್‌ ತಿಂಗಳಲ್ಲಿ ನದಿಗಳ ಭೀಕರ ಪ್ರವಾಹ ಉಂಟಾಗಿ ಚಿಕ್ಕೋಡಿ ಉಪವಿಭಾಗದ 1.5 ಲಕ್ಷ ಹೆಕ್ಟೇರ್‌ ಕಬ್ಬು ಬೆಳೆ ನಾಶವಾಗಿದೆ. ಇದರಿಂದ ಬೇಸಿಗೆಯಲ್ಲಿ ನೀರು ಇಲ್ಲದೆ ಸಂಕಷ್ಟ ಅನುಭವಿಸಿದ ರೈತ ಮತ್ತೆ ನೆರೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾನೆ. ಜಮೀನುಗಳಲ್ಲಿ ಈಗಿರುವ ಕಬ್ಬಿಗೆ ಯೋಗ್ಯಬೆಲೆ ಕೊಡುವ ಕಾರ್ಖಾನೆಗೆ ರೈತರು ಕಬ್ಬು ಕಳಿಸುತ್ತಾರೆ. ಆದರೆ ಮಹಾರಾಷ್ಟ್ರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಕಳಿಸದಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಕ್ರಮ ಖಂಡನೀಯ ಎಂದು ಸ್ವಾಭಿಮಾನಿ ಶೇತಕರಿ ಸಂಘಟನೆ ಮುಖಂಡ ರಾಜು ಕಿಚಡೆ ಅಸಮಾಧಾನ ವ್ಯಕ್ತಪಡಿಸಿದರು.

 

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.