ಮರೆಗುದ್ದಿ ಏತ ನೀರಾವರಿ ಯೋಜನೆಗೆ ಶೀಘ್ರ ಅನುಮೋದನೆ: ಗೋವಿಂದ ಕಾರಜೋಳ


Team Udayavani, Dec 20, 2022, 2:40 PM IST

ಮರೆಗುದ್ದಿ ಏತ ನೀರಾವರಿ ಯೋಜನೆಗೆ ಶೀಘ್ರ ಅನುಮೋದನೆ: ಗೋವಿಂದ ಕಾರಜೋಳ

ಬೆಳಗಾವಿ: ಮರೆಗುದ್ದಿ ಏತ ನೀರಾವರಿ ಯೋಜನೆಗೆ 2018-19ನೇ ಸಾಲಿನ ಬಜೆಟ್‌ ಭಾಷಣದಲ್ಲಿ 100 ಕೋಟಿ ರೂ. ಘೋಷಿಸಲಾಗಿತ್ತು. ಆದರೆ, ಆಯವ್ಯಯದಲ್ಲಿ ಅನುದಾನವನ್ನು ಹಂಚಿಕೆ ಮಾಡಿಲ್ಲ. ಮುಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚಸಿ, ಅನುಮೋದನೆ ತೆಗೆದುಕೊಳ್ಳುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಜಮಖಂಡಿ ಶಾಸಕ ಆನಂದ್‌ ಸಿದ್ದು ನ್ಯಾಮಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್‌ ಈ ವಿಚಾರವಾಗಿ ಪ್ರತಿ ನಿತ್ಯ ನನ್ನ ಬೆನ್ನತ್ತಿದ್ದಾರೆ. ಅವರ ಸೊಸೆ ಮರೆಗುದ್ದಿಯಲ್ಲಿದ್ದು, ಅವರ ಬೀಗರೂರಿಗೆ ಯೋಜನೆಯನ್ನು ಮಾಡಬೇಕೆಂದು ಹೇಳುತ್ತಿದ್ದಾರೆ. ಆದ್ದರಿಂದ ಮುಂದಿನ ಸಭೆಯಲ್ಲಿ ಮಂಡಳಿ ಮುಂದೆ ತೆಗೆದುಕೊಂಡು ಬಂದು ಯೋಜನೆಗೆ ಅನುಮೋದನೆ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ತಪ್ಪು ಉತ್ತರ ನೀಡಿದ್ದಾರೆ ಎಂಬ ಈಶ್ವರ್‌ ಖಂಡ್ರೆ ಆರೋಪಕ್ಕೆ ಪ್ರತಿಕ್ರಿಯಿಸಿ, ಎಲ್ಲ ಉತ್ತರವನ್ನು ಸರಿಯಾಗಿಯೇ ನೀಡಿದ್ದೇವೆ. ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಏಕಂದರೆ ಸರ್ಕಾರದ ಕಚೇರಿಯಲ್ಲಿರುವ ದಾಖಲೆಗಳನ್ನು ನೋಡಿಯೇ ಉತ್ತರ ನೀಡಿದ್ದೇವೆ. ಕೊಂಗ್ಣಿ ನೀರಾವರಿ ಯೋಜನೆಯನ್ನು ಒಂದು ತಿಂಗಳು ಮುಗಿಸಿ, ನಿಮ್ಮನ್ನು ಕರೆದು ಉದ್ಘಾಟನೆ ಮಾಡಿಸುತ್ತೇನೆ. ಮಾಣಿಕೇಶ್ವರ ಮತ್ತು ಹಾರ್ನಳ್ಳಿ ಯೋಜನೆ ಪ್ರಗತಿಯಲ್ಲಿದ್ದು, ಅದರ ಕಾರ್ಯವನ್ನು ವೇಗಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.

ಇದನ್ನೂ ಓದಿ:ಅಧಿಕಾರದಲ್ಲಿ ಮುಂದುವರಿಯಲು ಬಿಜೆಪಿ ಅರ್ಹತೆ ಕಳೆದುಕೊಂಡಿದೆ: ರಣದೀಪ್ ಸುರ್ಜೇವಾಲಾ

ಮೇಕರ್‌ ಮತ್ತು ಬಸವಕಲ್ಯಾಣ ಏತ ನೀರಾವರಿ ಯೋಜನೆಯಲ್ಲಿ 1.5 ಟಿಎಂಸಿ ನೀರನ್ನು ಬಳಸಲು ಈಗಾಗಲೇ ಅದಕ್ಕಾಗಿ ಯೋಜನೆ ರೂಪಿಸಿದ್ದು, ಅದಕ್ಕೆ ತಕ್ಷಣ ಆಡಳಿತಾತ್ಮಕ ಅನುಮೋದನೇ ನೀಡಿ, ಕೆಲಸ ಪ್ರಾರಂಭಿಸಲು ಸೂಚನೆ ನೀಡುತ್ತೇನೆ ಎಂದು ಹೇಳಿದರು. ಇನ್ನು, ಅವರ ಕ್ಷೇತ್ರದ 4 ಬ್ಯಾರೇಜ್‌ಗಳಿಗೆ ನೀರು ಹೋಗುತ್ತಿಲ್ಲ ಎಂದು ಖಂಡ್ರೆ ಹೇಳಿದ್ದಾರೆ. ಅದರ ಬಗ್ಗೆ ನಮ್ಮ ಅಧಿಕಾರಿಗಳ ಜೊತೆ ಸಭೆ ನಡೆಸಿ ನೀರು ಹೋಗುವಂತೆ ಮಾಡುತ್ತೇವೆ ಎಂದರು.

ಗೋದಾವರಿ ಬೇಸಿನ್‌ನ ನೀರು ಬಳಕೆ

ಬಂಡೆಪ್ಪ ಖಾಶೆಂಪುರ್‌ ಅವರು ಗೋದಾವರಿ ಬೇಸಿನ್‌ ನಲ್ಲಿ ನಮ್ಮ ಪಾಲಿನ 22.37 ಟಿಎಂಸಿ ನೀರನ್ನು ನಾವು ಬಳಕೆ ಮಾಡಿಕೊಳ್ತಿಲ್ಲ ಎಂದು ಹೇಳಿದ್ದಾರೆ. ಆದರೆ, ನಾವು ನೀರನ್ನು ಬಳಸಿಕೊಳ್ಳುತ್ತಿದ್ದೇವೆ. ವಿವಿಧ ಯೋಜನೆಗಳನ್ನು ಅನುಮೋದನೆ ಮಾಡಿದ್ದೇವೆ. ಕೆಲವು ಯೋಜನೆಗಳು ಪೂರ್ಣಗೊಂಡಿವೆ, ಕೆಲವು ಯೋಜನೆಗಳು ಪ್ರಗತಿಯಲ್ಲಿವೆ. ಖಂಡಿತವಾಗಿಯೂ ಗೋದಾವರಿ ಬೇಸಿನ್‌ನಲ್ಲಿ ಬಂದಿರುವ ನೀರನ್ನು ಬಳಸಿಕೊಳ್ತೀವಿ ಎಂದು ಹೇಳಿದರು.

ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡರು ಕೆರೆ ತುಂಬಿಸುವ ವಿಚಾರದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಾಣಾವರ ಕೆರೆ ಸೇರಿ 7 ಕೆರೆಗಳನ್ನು ಕೆರೆ ತುಂಬುವ ಯೋಜನೆಗೆ ಸೇರ್ಪಡೆ ಮಾಡುತ್ತೇವೆ ಎಂದು ಹೇಳಿದರು. ಇನ್ನು, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಗೂ ಕಿತ್ತೂರು ಶಾಸಕ ದೊಡ್ಡನಗೌಡರ್‌ ಮಹಾಂತೇಶ್‌ ಬಸವಂತರಾಯ್‌ ಅವರ ಪ್ರಶ್ನೆಗಳಿಗೆ ಇದೇ ವೇಳೆ ಉತ್ತರಿಸಿ ಅವರು ಪ್ರಸ್ತಾಪಿಸಿದ ವಿಚಾರಗಳನ್ನು ಆದಷ್ಟು ಶೀಘ್ರ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.