ಬಿಜೆಪಿಗೇ ಅರವಿಂದ ಪಾಟೀಲ ತಿರುಗುಬಾಣ

ನಂದಗಡ ಎಪಿಎಂಸಿ ಅಧ್ಯಕ್ಷ ಸ್ಥಾನ ಕಳೆದುಕೊಂಡ ಬಿಜೆಪಿ ! ­ಡಿಸಿಸಿ ಬ್ಯಾಂಕ್‌ ಚುನಾವಣೆ ಎಫೆಕ್ಟ್

Team Udayavani, Feb 6, 2021, 7:09 PM IST

khanapura

ಖಾನಾಪುರ: ಡಿಸಿಎಂ ಲಕ್ಮಣ ಸವದಿ ಮಾಜಿ ಶಾಸಕ, ಎಂಇಎಸ್‌ನ ಅರವಿಂದ ಪಾಟೀಲರನ್ನು ಬಿಜೆಪಿಗೆ ಕರೆತರುವ ಮಾತನಾಡುತ್ತಿದ್ದರೆ ಅಲ್ಲಿ ಮಾಜಿ ಶಾಸಕ ಅರವಿಂದ ಪಾಟೀಲ ನಂದಗಡ ಎಪಿಎಂಸಿಯ ಬಿಜೆಪಿ ಅಧ್ಯಕ್ಷರನ್ನು ಕುರ್ಚಿಯಿಂದ ಕೆಳಗಿಳಿಸಿ ಎಂಇಎಸ್‌ಗೆ ಗದ್ದುಗೆಯ ದಾರಿ ಸುಗಮಗೊಳಿಸಿದ್ದಾರೆ.

ನಂದಗಡ ಎಪಿಎಂಸಿ ಅಧ್ಯಕ್ಷ, ಬಿಜೆಪಿಯ ಹಣಮಂತ ಪಾಟೀಲ ವಿರುದ್ಧ ಶುಕ್ರವಾರ ಎಪಿಎಂಸಿ ಸಭಾಂಗಣದಲ್ಲಿ ನಡೆದ ಅವಿಶ್ವಾಸ ಗೊತ್ತುವಳಿ ಯಶಸ್ವಿಯಾಯಿತು. ಮಾಜಿ ಶಾಸಕ ಅರವಿಂದ ಪಾಟೀಲ ನೇತೃತ್ವದಲ್ಲಿ 12 ಸದಸ್ಯರಲ್ಲಿ ಅವಿಶ್ವಾಸ ನಿರ್ಣಯದ ಪರವಾಗಿ 10 ಜನ ಸದಸ್ಯರು ಮತ ಚಲಾಯಿಸಿದರು. ಹಣಮಂತ ಪಾಟೀಲ ಒಳಗೊಂಡಂತೆ ಬಿಜೆಪಿ ಇನ್ನೊರ್ವ ಸದಸ್ಯ ಮಾತ್ರ ಗೊತ್ತುವಳಿ ವಿರೋಧಿಸಿದರು.

ಮಾಜಿ ಶಾಸಕ ಅರವಿಂದ ಪಾಟೀಲ ಅವಿಶ್ವಾಸ ಗೊತ್ತುವಳಿ ಮಂಡಿಸುವಲ್ಲಿ ಉತ್ಸಾಹ ತೋರಿದ್ದರಿಂದ ಮತ್ತೆ ಎಂಇಎಸ್‌ ಅಧ್ಯಕ್ಷ ಸ್ಥಾನ ಅಲಂಕರಿಸಲು ಸಜ್ಜಾದಂತಾಗಿದೆ. ಬಿಜೆಪಿಗೆ ಸೇರಿದ ಮೂವರು ಸದಸ್ಯರಲ್ಲಿ ಸುಭಾಷ ಪಾಟೀಲ ಅವಿಶ್ವಾಸ ಮಂಡನೆಗೆ ಪ್ರಮುಖವಾಗಿ ಒತ್ತಾಯಿಸಿದ್ದರು.

ಮಾಜಿ ಶಾಸಕ ಅರವಿಂದ ಪಾಟೀಲ ಬಿಜೆಪಿ ಪಕ್ಷದ ಸದಸ್ಯರೊಬ್ಬರನ್ನು ಒಡೆದು ಬಿಜೆಪಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡಿಸಲು ತಂತ್ರ ರೂಪಿಸಿದ್ದರು. ಬಿಜೆಪಿ ಬ್ಲಾಕ್‌ ಅಧ್ಯಕ್ಷ ಸಂಜಯ ಕುಬಲ್‌, ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೊಚೇರಿ, ಗುಂಡು ತೋಪಿನಕಟ್ಟಿ, ಪ್ರಕಾಶ ನಿಲಜಕರ, ತಾಪಂ ಸದಸ್ಯ ಶ್ರೀಕಾಂತ ಇಟಗಿ, ತಾಪಂ ಸದಸ್ಯ ಬಸವರಾಜ ಸಾಣಿಕೊಪ್ಪ, ಆನಂದ ಪಾಟೀಲ ಮುಂತಾದವರು ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನಿಸಿದರೂ ಫಲ ನೀಡಲಿಲ್ಲ. ಅವಿಶ್ವಾಸ ಮಂಡನೆಗೆ ಮೊದಲು ಬಿಜೆಪಿ ಸದಸ್ಯ ಸುಭಾಷ ಪಾಟೀಲರನ್ನು ಹೊರಗೆ ಕರೆ ತರಲು ಬಿಜೆಪಿ ಮುಖಂಡರು ಪ್ರಯತ್ನಿಸಿದಾಗ ಮಾಜಿ ಶಾಸಕ ಅರವಿಂದ ಪಾಟೀಲ ಇದಕ್ಕೆ ಅಡ್ಡಿಪಡಿಸಿದರು.

ಇದನ್ನೂ ಓದಿ :ಪಂಚಮಸಾಲಿ ಸಮಾಜ 2ಎ ಸೇರ್ಪಡೆಗೆ ಆಗ್ರಹಿಸಿ ಮನವಿ

ನೀವು ಹೊರಗೆ ತೆರಳಿ ಎಂದು ಮಾಜಿ ಶಾಸಕರು ಹೇಳಿದ್ದು, ಬಿಜೆಪಿ ನಾಯಕರನ್ನು ಕೆರಳಿಸಿತು. ಬಿಜೆಪಿ ಮುಖಂಡರು ಮತ್ತು ಮಾಜಿ ಶಾಸಕರ ಮಧ್ಯೆ ಮಾತಿನ ಘರ್ಷಣೆ ಕೂಡ ನಡೆಯಿತು. ಆದರೆ ಸುಭಾಷ ಪಾಟೀಲ ಮಾತ್ರ ಸಭಾಂಗಣದಿಂದ ಹೊರಗೆ ಬರಲಿಲ್ಲ. ಬಿಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಹಣಮಂತ ಪಾಟೀಲ ತಮಗೆ ಮತ ಹಾಕಬೇಕು ಎಂದು ಮಾಜಿ ಶಾಸಕ ಅರವಿಂದ ಪಾಟೀಲ ಎಂಇಎಸ್‌ಗೆ ಸಂಖ್ಯಾಬಲವಿದ್ದರೂ ಬಿಜೆಪಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿದ್ದರು. ಆದರೆ ಬಿಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಹಣಮಂತ ಪಾಟೀಲ ತಮ್ಮ ಪರವಾಗಿ ನಿಲ್ಲಲಿಲ್ಲ ಎಂದು ಈಗ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿ, ಅವರನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.