ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಆಗಲು ಬಿಡುವುದಿಲ್ಲ: ಅರುಣ್ ಸಿಂಗ್


Team Udayavani, Apr 12, 2022, 11:24 AM IST

ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಆಗಲು ಬಿಡುವುದಿಲ್ಲ: ಅರುಣ್ ಸಿಂಗ್

ಬೆಳಗಾವಿ: ದೇಶ ಮತ್ತು ರಾಜ್ಯದಲ್ಲಿ ನಾಯಕತ್ವ ರಹಿತ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಟೀಕಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜಸ್ಥಾನ ಹಾಗೂ ಛತ್ತೀಸ್ ಗಡಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರ ಹೊಂದಿದೆ. ಉಳಿದ ಎಲ್ಲ ರಾಜ್ಯಗಳಲ್ಲೂ ತನ್ನ ಅಸ್ತಿತ್ವಕ್ಕಾಗಿ ಪರದಾಡುತ್ತಿದೆ ಎಂದರು.

‘ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ನಲುಗುತ್ತಿದೆ. ಈ ಪಕ್ಷದಲ್ಲಿ ಸಂಪೂರ್ಣ ಗೊಂದಲಮಯ ಸ್ಥಿತಿ ಇದೆ. ನಾಯಕತ್ವದ ವಿಷಯದಲ್ಲಿ ಸ್ಪಷ್ಟತೆ‌ ಇಲ್ಲ. ಅದೊಂದು ಒಡೆದ ಮನೆಯಾಗಿದೆ. ಅವರಿಗೆ ನಮ್ಮ ಸರ್ಕಾರದ ಬಗ್ಗೆ ಮಾತನಾಡಲು ಯಾವುದೇ ವಿಷಯಗಳಿಲ್ಲ ಹಾಗೂ ನೈತಿಕತೆಯೂ ಇಲ್ಲ. ಕರ್ನಾಟಕದಲ್ಲೂ ಸಂಪೂರ್ಣ ನೆಲ ಕಚ್ಚಿದೆ’ ಎಂದು ವಾಗ್ದಾಳಿ ನಡೆಸಿದರು.

‘ಅಧಿಕಾರದಲ್ಲಿದ್ದಾಗ ಕರ್ನಾಟಕವನ್ನು ಕಾಂಗ್ರೆಸ್‌ನವರು ಎಟಿಎಂನಂತೆ ಬಳಸಿಕೊಂಡಿದ್ದರು. ಈಗ ಮತ್ತದೇ ಗುಂಗಿನಲ್ಲಿದ್ದಾರೆ. ಅಧಿಕಾರಕ್ಕಾಗಿ ‌ಹವಣಿಸುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ನಾವು ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಆಗಲು ಬಿಡುವುದಿಲ್ಲ’ ಎಂದು ಗುಡುಗಿದರು.

ಇದನ್ನೂ ಓದಿ:ಈ ಬಾರಿ ಯಾವ ಪಕ್ಷದ ಜೊತೆಯೂ ಹೊಂದಾಣಿಕೆಯಿಲ್ಲ, ಪೂರ್ಣಪ್ರಮಾಣದ ಸರ್ಕಾರಕ್ಕೆ ಹೋರಾಟ; ಎಚ್ ಡಿಕೆ

‘ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ದೊಡ್ಡ ನಾಯಕತ್ವದ ಪಡೆಯೇ ಇದೆ. ಆದರೆ, ಕಾಂಗ್ರೆಸ್‌ನಲ್ಲಿ ಹೇಳಿಕೊಳ್ಳುವಂತಹ ನಾಯಕರೇ ಇಲ್ಲ’ ಎಂದು ಟೀಕಿಸಿದರು.

‘ಕಾಂಗ್ರೆಸ್, ಎನ್‌ಸಿಪಿ, ಸಮಾಜವಾದಿ ಪಕ್ಷ ಸೇರಿದಂತೆ ಬಹುತೇಕ ಪಕ್ಷಗಳಲ್ಲಿ ಪರಿವಾರದ ನಾಯಕತ್ವದ ಹಾಗೂ ಅವರಿಗೆ ಮಣೆ ಹಾಕುವ ಸಂಪ್ರದಾಯವಿದೆ. ಆದರೆ ಬಿಜೆಪಿಯಲ್ಲಿ ಅಂತಹ ಯಾವುದೇ ಪರಿವಾರ ಸಂಪ್ರದಾಯ‌ ಇಲ್ಲ’ ಎಂದರು.

‘ಕಾಂಗ್ರೆಸ್ ಬಗ್ಗೆ ಜನರಿಗೆ ವಿಶ್ವಾಸ ಇಲ್ಲ. ಎಲ್ಲ ರಾಜ್ಯಗಳಲ್ಲೂ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಉತ್ತರ ಪ್ರದೇಶದ ಚುನಾವಣೆಯಲ್ಲಿ ಆ ಪಕ್ಷದ ಬಹುತೇಕ. ಅಭ್ಯರ್ಥಿಗಳು‌ ಠೇವಣಿ ಕಳೆದುಕೊಂಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಐದು ವಿಧಾನಸಭೆ ಚುನಾವಣೆಯಲ್ಲಿ ನಾಲ್ಕರಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ಇದೇ ರೀತಿ ಕರ್ನಾಟಕದಲ್ಲೂ ಆಗಲಿದೆ. 150ಕ್ಕೂ ಹೆಚ್ಚಿನ‌ ಸ್ಥಾನಗಳನ್ನು ಗೆದ್ದು ಮರಳಿ ಅಧಿಕಾರ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಕರ್ನಾಟಕದ ನಾಲ್ಕೂ ದಿಕ್ಕುಗಳಲ್ಲಿ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆದಿವೆ. ಜನರು ಅವುಗಳನ್ನು ಮೆಚ್ಚಿಕೊಂಡಿದ್ದಾರೆ. ಡಬಲ್ ಎಂಜಿನ್ ಸರ್ಕಾರಗಳ ಬಗ್ಗೆ ಉತ್ತಮ ಅಭಿಪ್ರಾಯವಿದೆ. ಇಲ್ಲಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮೊದಲಾದವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ನೆಲ ಕಚ್ಚುವಂತೆ ಮಾಡುತ್ತೇವೆ’ ಎಂದರು.

‘ಕರ್ನಾಟಕದಲ್ಲಿ ಯಾವುದೇ ಪರ್ಸಂಟೇಜ್ ಸರ್ಕಾರವಿಲ್ಲ. ಆರೋಪಗಳು ನಿರಾಧಾರವಾದವು. ಬಿಜೆಪಿಯ ನಾಯಕರು ಪ್ರಾಮಾಣಿಕರು. ಅವರ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ. ಶುದ್ಧ ಆಡಳಿತವನ್ನು ನಮ್ಮ ಸರ್ಕಾರ ಕೊಡುತ್ತಿದೆ’ ಎಂದು ಸಮರ್ಥಿಸಿಕೊಂಡರು.

‘ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಬಸವರಾಜ ಬೊಮ್ಮಾಯಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದರು.

‘ಕಾಂಗ್ರೆಸ್ ಪಕ್ಷವು ಜಾತಿ- ಧರ್ಮವನ್ನು ಒಡೆಯುವ ಕಾರ್ಯದಲ್ಲಿ ತೊಡಗಿದೆ. ಹಿಜಾಬ್ ವಿವಾದವನ್ನು ಬೆಂಬಲಿಸಿದವರೇ ಕಾಂಗ್ರೆಸ್ಸಿಗರು.‌ ಸಿದ್ದರಾಮಯ್ಯ ಸೇರಿದಂತೆ ಅನೇಕ ನಾಯಕರು ಎಸ್‌ಡಿಪಿಐ, ಪಿಎಫ್ಐ ಮೊದಲಾದ ಸಂಘಟನೆಗಳಿಗೆ ಬೆಂಬಲ‌ ಕೊಡುತ್ತಾ ಬಂದಿದ್ದಾರೆ’ ಎಂದು ಆರೋಪಿಸಿದರು.

‘ನಮ್ಮ ಸರ್ಕಾರ ಸೂಕ್ಷ್ಮ ವಿಷಯಗಳನ್ನು ಕಾನೂನು ಚೌಕಟ್ಟಿನಲ್ಲಿ ಸಮರ್ಥವಾಗಿ ನಿಭಾಯಿಸಿದೆ’ ಎಂದು ಪ್ರತಿಕ್ರಿಯಿಸಿದರು.

‘ಮಹದಾಯಿ ವಿವಾದ ಅಂತಾರಾಜ್ಯ ಹಾಗೂ ದೊಡ್ಡ ವಿಷಯ ಆಗಿರುವುದರಿಂದ ಅದನ್ನು ಸೂಕ್ಷ್ಮವಾಗಿ ನಿಭಾಯಿಸಲಾಗುತ್ತಿದೆ. ಆದಷ್ಟು ಬೇಗ ವಿವಾದಕ್ಕೆ ಪರಿಹಾರ ಸಿಗಲಿದೆ. ಚಿಂತಿಸಬೇಡಿ’ ಎಂದು ಹೇಳಿದರು.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.