ಉಮೇಶ್ ಕತ್ತಿ ಜೀವನದ ಕುರಿತು ಪುಸ್ತಕ ಹೊರತರಬೇಕು: ಅರುಣ್ ಸಿಂಗ್
Team Udayavani, Sep 8, 2022, 2:58 PM IST
ಬೆಳಗಾವಿ: ಅರಣ್ಯ ಸಚಿವರಾಗಿದ್ದ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಡಾ. ಕೆ. ಸುಧಾಕರ್, ಮುನಿರತ್ನ ಭೈರತಿ ಬಸವರಾಜ ಸೇರಿದಂತೆ ಹಲವು ಗಣ್ಯರು ಬೆಲ್ಲದ ಬಾಗೇವಾಡಿಯ ಅವರ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ಉಮೇಶ್ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಗಣ್ಯರು, ಉಮೇಶ್ ಕತ್ತಿ ಅವರ ಪತ್ನಿ ಶೀಲಾ, ಪುತ್ರ ನಿಖಿಲ್, ಸಹೋದರ ರಮೇಶ್ ಕತ್ತಿ ಇವರ ಮಕ್ಕಳಾದ ಪೃಥ್ವಿ ಮತ್ತು ಪವನ್ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಭೇಟಿ ಬಳಿಕ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಾತನಾಡಿ, ಸಚಿವ ಉಮೇಶ ಕತ್ತಿ ನನ್ನ ವೈಯಕ್ತಿಕ ಮಿತ್ರ. ಬೆಳಗಾವಿ, ಬೆಂಗಳೂರು, ದೆಹಲಿಯಲ್ಲಿ ಅನೇಕ ಸಲ ಚರ್ಚೆ ಮಾಡಿದ್ದೇವೆ. ರಾಜ್ಯದ ಅಭಿವೃದ್ಧಿ, ಪಕ್ಷ ಕಟ್ಟುವ ಬಗ್ಗೆ ಅನೇಕ ಸಲಹೆ ನೀಡುತ್ತಿದ್ದರು. ಉಮೇಶ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಪಕ್ಷ, ರಾಜ್ಯಕ್ಕೆ ಉಮೇಶ ಕತ್ತಿ ಅಗಲಿಕೆಯಿಂದ ನಷ ಆಗಿದೆ. 40 ವರ್ಷಗಳ ಕಾಲ ಜನ ಆಶೀರ್ವಾದ ಮಾಡಿದ್ದಾರೆ. 40 ವರ್ಷಗಳ ರಾಜಕೀಯ ಜೀವನದ ಕುರಿತು ಪುಸ್ತಕದ ರೂಪದಲ್ಲಿ ಹೊರ ಬರಬೇಕು ಎಂದರು.
ಒಬ್ಬ ರಾಜಕೀಯ ನಾಯಕ 40 ವರ್ಷಗಳ ಶಾಸಕನಾಗಿ ಮಾಡಿದ ಕೆಲಸ, ಅವರ ದೂರದೃಷ್ಟಿ ಅವರ ಆಲೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ. ಈ ನಿಟ್ಟಿನಲ್ಲಿ ಒಂದು ಸಮಗ್ರ ಪುಸ್ತಕ ಬಿಡುಗಡೆ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ