ಮುಸ್ಲಿಂ ನಾಯಕರ ಬೆಳವಣಿಗೆ ಬಯಸದ ಕಾಂಗ್ರೆಸ್ : ಅಸಾದುದ್ದೀನ್ ಓವೈಸಿ
Team Udayavani, Aug 31, 2021, 1:30 PM IST
ಬೆಳಗಾವಿ: ಮುಸ್ಲಿಂ ನಾಯಕರು ಬೆಳೆಯಬಾರದು ಅಂತ ಕಾಂಗ್ರೆಸ್ ಬಯಸುತ್ತಿದೆ. ಭಾರತದ ಪ್ರಜಾಪ್ರಭುತ್ವದಲ್ಲಿ ಮುಸ್ಲಿಂರಿಗೆ ಅಧಿಕಾರದ ಹಕ್ಕು ಸಿಗಬೇಕು. ಅದಕ್ಕಾಗಿ ಚುನಾವಣೆ ಎದುರಿಸಿ ಗೆಲ್ಲಬೇಕು ಎಂದು ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಂಸತ್ನಲ್ಲಿ ಬಹಳಷ್ಟು ಕಾನೂನುಗಳಿಗೆ ಕಾಂಗ್ರೆಸ್ ಬೆಂಬಲಿಸುತ್ತದೆ. ಬಿಜೆಪಿಗೆ ಪ್ರತಿಯೊಂದು ಕಾನೂನು ರಚಿಸಲು ಕಾಂಗ್ರೆಸ್ ಪರೋಕ್ಷವಾಗಿ ಸಾಥ್ ಕೊಡುತ್ತಿದೆ. ಸಂಸತ್ನಲ್ಲಿ ಅನೇಕ ಸಲ ವಿರೋಧಿಸಿದ್ದೇನೆ. ಧ್ವನಿ ಎತ್ತುವುದು ಪ್ರಜಾಪ್ರಭುತ್ವದ ಹಕ್ಕಿದೆ. ಬೆಲೆ ಏರಿಕೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಸ್ಲಿಂರು ರಾಜಕೀಯ ಹಕ್ಕು ಪಡೆದಾಗ ದೇಶ ಶಕ್ತಿಶಾಲಿಯಾಗಲಿದೆ. ದೇಶದಲ್ಲಿ ಮುಸ್ಲಿಂ ನಾಯಕರು ಯಾರಿದ್ದಾರೆ ಹೇಳಲಿ, ನಾನಂತೂ ಗಲ್ಲಿ ಲೀಡರ್. ನಾನು ಬೇಡ, ನನ್ನ ಬಿಟ್ಟು ಬೇರೆ ಯಾರು ಇದ್ದಾರೆ ಹೇಳಲಿ. ಮುಸ್ಲಿಂರನ್ನು ಹೊರತು ಪಡಿಸಿ ಎಲ್ಲ ಜಾತಿಯ ನಾಯಕರು ಇದ್ದಾರೆ. ಸಿದ್ದರಾಮಯ್ಯ ಕುರುಬ, ಯಡಿಯೂರಪ್ಪ ಲಿಂಗಾಯತ, ಡಿ.ಕೆ. ಶಿಕುಮಾರ ಒಕ್ಕಲಿಗ ಸಮುದಾಯದ ನಾಯಕರು ಇದ್ದಾರೆ. ಯಾಕೆ ಮುಸ್ಲಿಂ ಸಮುದಾಯದವರು ಇಲ್ಲ ಎಂದರು.
ಅಜಮ್ ಖಾನ್ ಆದಷ್ಟು ಬೇಗ ಬಿಡುಗಡೆ ಆಗಲಿ. ಅವರ ಎಲ್ಲಾ ಸಂಕಷ್ಟಗಳು ಬೇಗ ಪರಿಹಾರವಾಗಲಿ. ದೇಶದಲ್ಲಿ ಮುಸ್ಲಿಂರ ಪರಿಸ್ಥಿತಿ ಬ್ಯಾಂಡ್ ಬಾಜಾ ಅವರಂತೆ ಆಗಿದೆ. ಮದುಮಗ ಒಳಗೆ ಹೋಗುವವರೆಗೆ ಬ್ಯಾಂಡ್ ಬಾಜಾದವರು ಬರುತ್ತಾರೆ. ಮದುಮಗ ಒಳಗೆ ಹೋದರೆ ಬ್ಯಾಂಡ್ ಬಾಜಾದವರು ಹೊರಗೆ ಸೆ„ಡ್ನಲ್ಲಿ ಉಳಿದು ಬಿಡುತ್ತಾರೆ ಎಂದರು.
ನನ್ನ ಮೇಲೆ, ನಮ್ಮ ಪಕ್ಷದ ಮೇಲೆ ನಂಬಿಕೆ ಇಟ್ಟು ಮತ ಹಾಕಬೇಕು. ಬೆಳಗಾವಿ ಪಾಲಿಕೆ ಗೆಲ್ಲುವುದೇ ನಮ್ಮ ರಣತಂತ್ರ ಜನರ ವಿಶ್ವಾಸ, ಪ್ರೀತಿ ಗಳಿಸುವುದಾಗಿದೆ. ತಳಮಟ್ಟದಲ್ಲಿ ಪಕ್ಷ ಗಟ್ಟಿ ಮಾಡುವುದೇ ನಮ್ಮ ಅಜೆಂಡಾ ಇದೆ ಎಂದರು.
ಜೆಡಿಎಸ್ ಜತೆಗೆ ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವು. ಹೀಗಾಗಿ ನಾವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ. ಜೆಡಿಎಸ್-ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಮಾಡಿಕೊಂಡು ತಪ್ಪು ಮಾಡಿದ್ದು, ಆನಂತರ ನಮಗೆ ಮನವರಿಕೆ ಆಯಿತು. ಆಗ ಕುಮಾರಸ್ವಾಮಿ ನನಗೆ ಕರೆ ಮಾಡಿ ಪ್ರಮಾಣ ವಚನಕ್ಕೆ ಬರಲು ಆಹ್ವಾನಿಸಿದ್ದರು. ನೀವು ಬಹಳ ದೊಡ್ಡ ತಪ್ಪು ಮಾಡಿದ್ದೀರಿ ಅಂತ ಆಗಲೇ ತಿರುಗೇಟು ನೀಡಿದ್ದೇನೆ. ಹೀಗಾಗಿಯೇ ನಾವು ಪಾಲಿಕೆಯಲ್ಲಿ ಜೆಡಿಎಸ್ ಜತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದರು.
ಒವೈಸಿ ಬಿಜೆಪಿಯ ಬಿ ಟೀಮ್ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಓವೈಸಿ, ರಾಹುಲ್ ಗಾಂಧಿಯನ್ನು ಅಮೇಥಿ ಕ್ಷೇತ್ರದಲ್ಲಿ ನಾನೇ ಸೋಲಿಸಿದೆ. ಆ ಬಳಿಕ ರಾಹುಲ್ ಗಾಂಧಿ ವೈನಾಡಿನಲ್ಲಿ ಗೆದ್ದರು. ಕಾಂಗ್ರೆಸ್ನ ಶಾಸಕರು ಹೋಗಿ ಬಿಜೆಪಿ ತೊಡೆ ಮೇಲೆ ಕುಳಿತರೆ ಇದಕ್ಕೂ ನಾನೇ ಕಾರಣನಾ ಎಂದು ಪ್ರಶ್ನಿಸಿದರು. ಅಫ್ಘಾನಿಸ್ತಾನ ತಾಲಿಬಾನ್ ವಶವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, ನನಗೂ ಅಫ್ಘಾನಿಸ್ತಾನಕ್ಕೆ ಸಂಬಂಧವೇ ಇಲ್ಲ. ಅಫ್ಘಾನಿಸ್ತಾನದಲ್ಲಿ ಏನಾಗುತ್ತಿದೆ ಎನ್ನುವುದನ್ನು ಮೋದಿಯವರನ್ನು ಕೇಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ