ಕೋವಿಡ್ ಲಸಿಕೆ ಪಡೆದಿದ್ದ ಆಶಾ ಕಾರ್ಯಕರ್ತೆ ಸಾವು! ಮೆದುಳು ಕಾಯಿಲೆ ಎಂದ ವೈದ್ಯರು
Team Udayavani, Feb 6, 2021, 11:37 AM IST
ಬೆಳಗಾವಿ: ಕಳೆದ ತಿಂಗಳು ಕೋವಿಡ್ ಲಸಿಕೆ ಪಡೆದಿದ್ದ ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮದ ಆಶಾ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ. ಆದರೆ ಅವರಿಗೆ ಮೆದುಳಿಗೆ ಸಂಬಂಧಪಟ್ಟ ಕಾಯಿಲೆ ಇತ್ತು. ಕೋವಿಡ್ ಲಸಿಕೆಯಿಂದ ಮೃತಪಟ್ಟಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ ಎಸ್ ವಿ ಮುನ್ಯಾಳ ಸ್ಪಷ್ಟಪಡಿಸಿದ್ದಾರೆ.
ಕಳೆದ ಜನವರಿ 22 ರಂದು ಕೋವಿಡ್ ಲಸಿಕೆ ಪಡೆದಿದ್ದ ಆಶಾ ಕಾರ್ಯಕರ್ತೆಗೆ ಮೊದಲಿಂದಲೂ ತಲೆನೋವು ಮೊದಲಾದ ಕಾಯಿಲೆಗಳಿದ್ದವು. ಜನವರಿ 30 ರಂದು ಸತತವಾಗಿ ವಾಂತಿಯಾಗಿದೆ. ನಂತರ ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಫೆ.3 ರಂದು ಮೃತಪಟ್ಟಿದ್ದಾರೆ. ಮೆದುಳಿನಲ್ಲಿ ರಕ್ತದ ಸಂಚಾರ ಸರಿಯಾಗಿರಲಿಲ್ಲ ಎಂದು ಡಾ ಎಸ್.ವಿ ಮುನ್ಯಾಳ ‘ಉದಯವಾಣಿ’ ಗೆ ತಿಳಿಸಿದರು.
ಇದನ್ನೂ ಓದಿ:ದೇವದಾಸಿ ಕುಟುಂಬದ ಹನಮವ್ವಳಿಗೆ ನಾಟಕ ಅಕಾಡೆಮಿಯ ಪ್ರಶಸ್ತಿ
33 ವರ್ಷದ ಆಶಾ ಕಾರ್ಯಕರ್ತೆಯ ಸಾವಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಇದರ ಬಗ್ಗೆ ಇಲಾಖೆಯ ಮುಖ್ಯಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ