ಬೆಳಗಾವಿ: ಟ್ರಕ್ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ
Team Udayavani, Feb 6, 2021, 8:32 PM IST
ಬೆಳಗಾವಿ: ಕರ್ನಾಟಕದ ಟ್ರಕ್ ಚಾಲಕನ ಮೇಲೆ ಮಹಾರಾಷ್ಟ್ರದ ಸಾತಾರಾ ಬಳಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ.
ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ಮೂಲದ ಟ್ರಕ್ ಚಾಲಕ ಗೋವಿಂದರಾಜು ಅವರ ಮೇಲೆ ಮಹಾರಾಷ್ಟ್ರದ ಸಾತಾರಾ ಟೋಲ್ ಬಳಿ ಶುಕ್ರವಾರ ರಾತ್ರಿ 8 ಗಂಟೆಗೆ ಹಲ್ಲೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಭೂಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ನಾಲ್ಕು ಜನರನ್ನು ಶನಿವಾರ ಸಂಜೆ ಬಂಧಿಸಲಾಗಿದೆ.
ಇದನ್ನೂ ಓದಿ:ವೀಳ್ಯದೆಲೆ ತಟ್ಟೆಯಲ್ಲಿದ್ದ ಅಡಿಕೆ ನುಂಗಿ ಮಗು ಸಾವು: ಪೋಷಕರೇ ಎಚ್ಚರ!
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಕೈಗೊಂಡ ಕ್ರಮದ ಹಿನ್ನೆಲೆಯಲ್ಲಿ ಚಾಲಕನ ಜೊತೆಗೆ ಕರ್ನಾಟಕದ ಪಿ.ಎಸ್.ಐ ಒಬ್ಬರನ್ನು ಶನಿವಾರ ಮರಳಿ ಸಾತಾರಾಕ್ಕೆ ಕರೆದೊಯ್ದು ಪರಿಶೀಲನೆ ನಡೆಸಿ. ಭೂಂಜ್ ಪೊಲೀಸರಿಗೆ ದೂರು ನೀಡಲಾಯಿತು. ಚಾಲಕನ ದೂರಿನ ಮೇರೆಗೆ ನಾಲ್ಕು ಜನರನ್ನು ಶನಿವಾರ ಸಂಜೆ ಬಂಧಿಸಲಾಗಿದೆ.