ಕಾರ್ಮಿಕರ ಮೇಲೆ ಹಲ್ಲೆಗೆ ಖಂಡನೆ
•ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿದ ಪೌರ ಕಾರ್ಮಿಕರು•ಅಥಣಿ ಪುರಸಭೆ ಎದುರು ಧರಣಿ
Team Udayavani, Jun 3, 2019, 10:32 AM IST
ಅಥಣಿ: ಪುರಸಭೆ ಕಾರ್ಮಿಕರ ಮೇಲಿನ ಹಲ್ಲೆ ಖಂಡಿಸಿ ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದ ಪೌರ ಕಾರ್ಮಿಕರು.
ಅಥಣಿ: ಪುರಸಭೆ ಮಾಜಿ ಉಪಾಧ್ಯಕ್ಷೆ ಹಾಗೂ ಮಾಜಿ ಸದಸ್ಯನ ಮಕ್ಕಳು ಪುರಸಭೆ ಕಾರ್ಮಿಕ ಮತ್ತು ಜಿಲ್ಲಾ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಬಸವರಾಜ ಕಾಂಬಳೆ ಮತ್ತು ಆನಂದ ಕಾಂಬಳೆ ಎಂಬುವರ ಮೇಲೆ ಹಲ್ಲೆ ಮಾಡಿ ಜೀವ ಬೇದರಿಕೆ ಹಾಕಿದ್ದನ್ನು ಖಂಡಿಸಿದ ಕಾರ್ಮಿಕರು, ಪಟ್ಟಣದ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಅಥಣಿ ಪುರಸಭೆ ಕಚೇರಿ ಎದುರು ಪ್ರತಿಭಟಿಸಿದರು.
ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಹರೀಶ ನಾಯಿಕ ಮಾತನಾಡಿ, ನಿರಂತರವಾಗಿ ಪೌರ ಕಾರ್ಮಿಕರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಪುರಸಭೆ ಮಾಜಿ ಉಪಾಧ್ಯಕ್ಷ ಮತ್ತು ಮಾಜಿ ಸದಸ್ಯನ ಮಕ್ಕಳು ಬೀದಿ ದೀಪ ನಿರ್ವಹಣೆಯ ಕಾರ್ಮಿಕ ಆನಂದ ಕಾಂಬಳೆ ಹಾಗೂ ಪೌರ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಬಸವರಾಜ ಕಾಂಬಳೆ ಮೇಲೆ ಹಲ್ಲೆ ಅತ್ಯಂತ ಖಂಡನಾರ್ಹವಾಗಿದೆ. ಇದರಿಂದ ಪೌರ ಕಾರ್ಮಿಕರು ಮಾನಸಿಕವಾಗಿ ನೊಂದಿದ್ದಾರೆ. ಇಂತಹ ಘಟನೆಗಳು ಮರುಕಳಿಸಿದರೆ ರಾಜ್ಯಾದ್ಯಂತ ಪೌರ ಕಾರ್ಮಿಕರ ಪ್ರತಿಭಟನೆ ನಡೆಸಬೇಕಾದಿತು ಎಂದು ಎಚ್ಚರಿಸಿದರು.
ಹಲ್ಲೆಗೊಳಗಾದ ಪೌರ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಕಾಂಬಳೆ ಮಾತನಾಡಿ, ಅಥಣಿ ಪುರಸಭೆಯಲ್ಲಿ ಸುಮಾರು 15 ವರ್ಷಗಳಿಂದ ಅತಿ ಕಡಿಮೆ ಸಂಬಳದಲ್ಲಿ ಕೆಲಸ ಮಾಡುತ್ತಾ ಬಂದಿರುವ ಪೌರ ಕಾರ್ಮಿಕರು ಇಂದು ಯಾವ ತಪ್ಪುಗಳನ್ನು ಮಾಡದೇ ತಮ್ಮ ಕಾರ್ಯ ಮಾಡುತ್ತಿದ್ದಾರೆ. ಕಾರ್ಮಿಕರ ಮೇಲೆ ವಿನಾಕಾರಣ ದಬ್ಟಾಳಿಕೆ ಮಾಡಿ ಜೀವ ಬೇದರಿಕೆ ಹಾಕಿದ್ದಾರೆ ಎಂದು ಆಪಾದಿಸಿದರು.
ಅನಿಲ ಕಾಂಬಳೆ, ರವಿ ಬಜಂತ್ರಿ, ಅಣ್ಣಪ್ಪ ಕಾಂಬಳೆ ಸೇರಿದಂತೆ ಶೇಡಬಾಳ, ಕುಡಚಿ, ಉಗಾರ, ಐನಾಪುರ, ಹಾರೂಗೇರಿ, ಮುಗಳಖೋಡ ಸೇರಿದಂತೆ ಇನ್ನಿತರ ಕಡೆಯ ಪುರಸಭೆ ಮತ್ತು ಪಪಂ ಪೌರ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ