ಮೀಸಲು ಹೆಚ್ಚಳ: ಮಸೂದೆ ಮಂಡನೆ ನಿರ್ಧಾರ
ಮೂರು ಪ್ರಮುಖ ಮಸೂದೆ ಈ ವಾರದಲ್ಲೇ ಮಂಡಿಸಲು ಕಲಾಪ ಸಲಹಾ ಸಮಿತಿ ಸಭೆ ತೀರ್ಮಾನ
Team Udayavani, Dec 20, 2022, 6:35 AM IST
ಬೆಳಗಾವಿ ಎಸ್ಸಿ- ಎಸ್ಟಿ ಸಮುದಾಯಗಳಿಗೆ ಮೀಸ ಲಾತಿ ಪ್ರಮಾಣ ಹೆಚ್ಚಳಕ್ಕೆ ಸರಕಾರಿ ಆದೇಶದ ಬಳಿಕ ಈಗ ಉಭಯ ಸದನಗಳಲ್ಲಿ ಮಸೂದೆ ಮಂಡಿಸಲು ಸರಕಾರ ಮುಂದಾಗಿದೆ.
ಸೋಮವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಂಡಿದ್ದು, ಎಸ್ಸಿ-ಎಸ್ಟಿ ಮೀಸಲಾತಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಸಹಿತ ಮೂರು ಪ್ರಮುಖ ಮಸೂದೆಗಳನ್ನು ಈ ವಾರದಲ್ಲೇ ಮಂಡಿಸಲು ನಿರ್ಧರಿಸಲಾಗಿದೆ.
ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಮೊದಲ ವಾರದಲ್ಲೇ ಅವಕಾಶ ಕೊಟ್ಟು ಸರಕಾರದ ಪರವಾಗಿ ಉತ್ತರ ನೀಡಲೂ ಸಭೆಯಲ್ಲಿ ತೀರ್ಮಾನಿಸಲಾಯಿತು ಎನ್ನಲಾಗಿದೆ.
ಕಾಂಗ್ರೆಸ್ ಬಹಿಷ್ಕಾರ
ಕಲಾಪ ಸಲಹಾ ಸಮಿತಿಗೆ ಕಾಂಗ್ರೆಸ್ ಬಹಿಷ್ಕಾರ ಹಾಕಿತ್ತು. ಜೆಡಿಎಸ್ ಪರವಾಗಿ ಉಪ ನಾಯಕ ಬಂಡೆಪ್ಪ ಕಾಶೆಂಪುರ್ ಭಾಗವಹಿಸಿದ್ದರು. ಸದನದಲ್ಲಿ ಮಹನೀಯರ ಭಾವ ಚಿತ್ರ ಅನಾವರಣ ವಿಚಾರದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ. ಇದೊಂದು ಸಂಭ್ರಮದ ಕಾರ್ಯಕ್ರಮ ಆಗ ಬೇಕಿತ್ತು. ಆದರೆ ಕದ್ದು ಮುಚ್ಚಿ ಮಾಡಲಾಗಿದೆ. ಸದನಕ್ಕೂ ಇದರಿಂದ ಗೌರವ ಬರುವುದಿಲ್ಲ . ಹೀಗಾಗಿ ನಾವು ಕಲಾಪ ಸಲಹಾ ಸಮಿತಿ ಬಹಿಷ್ಕರಿಸಿದ್ದೇವೆ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ತಿಳಿಸಿದರು.
ಭಾವಚಿತ್ರ ಸದ ನದ ಆಸ್ತಿ. ಯಾರ್ಯಾರ ಚಿತ್ರ ಅನಾವರಣ ಮಾಡಬೇಕು ಎಂಬ ಬಗ್ಗೆ ಕಲಾಪ ಸಲಹಾ ಸಮಿತಿಯಲ್ಲಿ ಚರ್ಚೆ ಆಗಿ ಬಳಿಕ ದಿನಾಂಕ ನಿಗದಿ ಮಾಡಿ ಕಾರ್ಯ ಕ್ರಮ ಮಾಡಬೇಕಿತ್ತು. ಇದ್ಯಾವುದೂ ಮಾಡದೆ ಏಕಾಏಕಿ ಅನಾವರಣ ಮಾಡಿದ್ದು ಯಾಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ