ಆಟೋ ಸ್ಥಗಿತ: ವಿದ್ಯಾರ್ಥಿಗಳು-ಪಾಲಕರ ಪರದಾಟ

•ಕಮೀಷನರ್‌ ಆದೇಶಕ್ಕೆ ವಿರೋಧ •ಬೈಕ್‌-ಕಾರಿನಲ್ಲಿಯೇ ತೆರಳಿದ ವಿದ್ಯಾರ್ಥಿಗಳು •ಇಂದು, ನಾಳೆಯೂ ಶಾಲಾ ಆಟೋ ಸಂಚಾರವಿಲ್ಲ

Team Udayavani, Jun 28, 2019, 10:30 AM IST

bg-tdy-3..

ಬೆಳಗಾವಿ: ಆಟೋ ರಿಕ್ಷಾದಲ್ಲಿ ಗರಿಷ್ಠ ಆರು ವಿದ್ಯಾರ್ಥಿಗಳನ್ನು ಕರೆದೊಯ್ಯುವಂತೆ ಪೊಲೀಸ್‌ ಕಮೀಷನರ್‌ ಹೊರಡಿಸಿರುವ ಆದೇಶ ವಿರೋಧಿಸಿ ಚಾಲಕರು ಗುರುವಾರದಿಂದ ಮೂರು ದಿನಗಳ ಕಾಲ ಆಟೋ ರಿಕ್ಷಾ ಸಂಚಾರ ಸ್ಥಗಿತಗೊಳಿಸಿದ್ದು, ಇದರಿಂದ ವಿದ್ಯಾರ್ಥಿಗಳು, ಪಾಲಕರು ಪರದಾಡುವಂತಾಯಿತು.

ಆಟೊರಿಕ್ಷಾಗಳನ್ನು ಬಂದ್‌ ಮಾಡಿ ಹೋರಾಟಕ್ಕಿಳಿದಿರುವ ಚಾಲಕರಿಂದಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರು ಗುರುವಾರ ಪರದಾಡಿದರು. ನಗರದಲ್ಲಿರುವ ಎಲ್ಲ ಶಾಲೆಗಳ ಮುಂದೆ ಖಾಸಗಿ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು. ಆಟೋಗಳಿಲ್ಲದೇ ಕೆಲ ವಿದ್ಯಾರ್ಥಿಗಳು ನಡೆದುಕೊಂಡೇ ಹೋಗಬೇಕಾದ ಅನಿವಾರ್ಯತೆ ಒದಗಿತು.

ಪಾಲಕರು ತಮ್ಮ ಕೆಲಸ ಕಾರ್ಯ ಬಿಟ್ಟು ವಿದ್ಯಾರ್ಥಿಗಳು ದ್ವಿಚಕ್ರ ವಾಹನ, ಕಾರಿನಲ್ಲಿ, ಸೈಕಲ್ ಮೇಲೆ ಕರೆದುಕೊಂಡು ಹೋಗುತ್ತಿರುವುದು ಕಂಡು ಬಂತು. ಶಾಲೆಗಳ ಸುತ್ತಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ದ್ವಿಚಕ್ರ ವಾಹನಗಳು, ಕಾರುಗಳು ಧಾವಿಸಿದ್ದರಿಂದ ಕೆಲಹೊತ್ತು ಸಂಚಾರ ದಟ್ಟಣೆ ಆಗಿತ್ತು.

ಶಾಲೆ ಬಿಡುವ ಸಮಯದಲ್ಲಿ ಶಾಲೆಯ ಸುತ್ತಲೂ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದವು. ಸೇಂಟ್ ಮೇರಿ, ಸೇಂಟ್ ಕ್ಸೇವಿಯರ್‌, ಸೇಂಟ್ ಪಾಲ್, ಬಿ.ಕೆ. ಮಾಡೆಲ್ ಶಾಲೆ, ಉಷಾತಾಯಿ ಗೋಗಟೆ ಶಾಲೆ ಸೇರಿದಂತೆ ಅನೇಕ ಶಾಲೆಗಳ ಸುತ್ತಲೂ ವಾಹನಗಳು ಜಮಾವಣೆಗೊಂಡಿದ್ದವು. ಮಕ್ಕಳನ್ನು ಹತ್ತಿಸಿಕೊಂಡು ಮನೆ ಸೇರುವಷ್ಟರಲ್ಲಿಯೇ ವಿದ್ಯಾರ್ಥಿಗಳು ಹಾಗೂ ಪಾಲಕರು ಹೈರಾಣಾಗಿದ್ದರು.

ಕ್ಯಾಂಪ್‌ ಪ್ರದೇಶ ಬುಡಾಪಾ ಘರ್‌, ಗ್ಲೋಬ್‌ ಸರ್ಕಲ್, ರೈಲ್ವೆ ಓವರ್‌ ಬ್ರಿಡ್ಜ್ದಿಂದ ಆರ್‌ಪಿಡಿ ಕ್ರಾಸ್‌ವರೆಗೆ ಟ್ರಾಫಿಕ್‌ ಜಾಮ್‌ ಆಗಿತ್ತು. ಕಾಂಗ್ರೆಸ್‌ ರಸ್ತೆಯಲ್ಲಿ ಒಂದು ಕಡೆಗೆ ಸ್ಮಾರ್ಟ್‌ ಸಿಟಿ ಯೋಜನೆಯಡಿ ರಸ್ತೆ ನಿರ್ಮಾಣ ಆಗುತ್ತಿರುವುದರಿಂದ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗಿತ್ತು. ಕಾಲೇಜು ರಸ್ತೆ, ಚನ್ನಮ್ಮ ವೃತ್ತ, ಬೋಗಾರ್‌ವೇಸ್‌, ಆರ್‌ಟಿಒ ಸರ್ಕಲ್ನಲ್ಲಿಯೂ ದಟ್ಟಣೆ ಹೆಚ್ಚಾಗಿತ್ತು.

ಆದೇಶ ಹಿಂಪಡೆಯುವಂತೆ ಚಾಲಕರ ಒತ್ತಾಯ:

6ಕ್ಕಿಂತ ಹೆಚ್ಚು ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಹಾಕದಂತೆ ಪೊಲೀಸರು ಹಾಕಿರುವ ಆದೇಶದಿಂದಾಗಿ ಚಾಲಕರು ಆಕ್ರೋಶಗೊಂಡಿದ್ದಾರೆ. ಇಷ್ಟು ಹಣದಲ್ಲಿ ನಮ್ಮ ಉಪಜೀವನ ನಡೆಯುವುದಿಲ್ಲ. ಮೊದಲೇ ಪಾಲಕರು ಕಡಿಮೆ ಶುಲ್ಕ ನೀಡುವುದರಿಂದ ತಿಂಗಳು ಖರ್ಚು ಸಾಗಿಸುವುದು ಕಷ್ಟಕರವಾಗಿದೆ. ಹೆಚ್ಚಿನ ಮೊತ್ತ ಕೊಡುವಂತೆ ಪಾಲಕರಿಗೆ ಹೇಳಿದರೆ ಕೇಳುವುದಿಲ್ಲ. ಈ ಮುಂಚೆ 8-10 ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಬಿಡುವುದಾದರೆ ಲಾಭ ಆಗುತ್ತಿತ್ತು. ಈಗ 6 ವಿದ್ಯಾರ್ಥಿಗಳನ್ನು ಮಾತ್ರ ಹಾಕುವಂತೆ ಹೇಳಿರುವ ಆದೇಶ ಚಾಲಕರ ಹೊಟ್ಟೆಯ ಮೇಲೆ ಬಡಿದಂತಾಗುತ್ತದೆ. ಕೂಡಲೇ ಈ ಆದೇಶ ಹಿಂಪಡೆಯುವಂತೆ ಆಟೋ ರಿಕ್ಷಾ ಚಾಲಕರು ಆಗ್ರಹಿಸಿದ್ದಾರೆ.
ಪೊಲೀಸರು-ಚಾಲಕರ ಮಧ್ಯೆ ಪಾಲಕರು ಹೈರಾಣ:

ಒಂದೆಡೆ ಪೊಲೀಸರು ಆದೇಶ ಹೊರಡಿಸಿದ್ದು, ಇನ್ನೊಂದೆಡೆ ಈ ಆದೇಶದ ವಿರುದ್ಧ ಆಟೋ ರಿಕ್ಷಾ ಚಾಲಕರು ಹೋರಾಟ ನಡೆಸುತ್ತಿದ್ದಾರೆ. ಈ ಇಬ್ಬರ ಮಧ್ಯೆ ನಡೆದ ಮುಸುಕಿನ ಗುದ್ದಾಟದಿಂದ ಪಾಲಕರು ಹೈರಾಣಾಗುವಂತಾಗಿದೆ. ಶಾಲೆಗೆ ಹೋಗಿ, ಮನೆಗೆ ವಾಪಸ್ಸು ಕರೆ ತರಲು ಶುಲ್ಕ ನಿಗದಿ ಮಾಡಿ ಚಾಲಕರಿಗೆ ಕೊಡಲಾಗುತ್ತಿದೆ. ಇನ್ನು ಮುಂದೆ ಬಾಡಿಗೆ ಮೊತ್ತ ಹೆಚ್ಚು ಮಾಡುವಂತೆ ಹೇಳಿದರೆ ಎಲ್ಲಿಂದ ಕೊಡುವುದು. ನಮ್ಮ ಬಾಡಿಗೆ ಮಾತ್ರ ನಾವು ಹೆಚ್ಚಿಗೆ ಮಾಡುವುದಿಲ್ಲ ಎನ್ನುತ್ತಾರೆ ಪಾಲಕರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.