ಹಿಂದೂಗಳ ಸಂಘಟನೆಗಾಗಿ ಜಾಗೃತಿ ಅಗತ್ಯ; ಮುತಾಲಿಕ್
ನಮ್ಮ ಹಿಂದೂಗಳನ್ನೆ ಕೊಲ್ಲುವ ಕೆಲಸ ಮಾಡಿ ತಮ್ಮ ಸಾಮ್ರಾಜ್ಯ ವಿಸ್ತರಿಸುವ ಕೆಲಸ ನಡೆಸುತ್ತಿತ್ತು
Team Udayavani, Sep 10, 2022, 6:17 PM IST
ರಾಮದುರ್ಗ: ದೇಶದಲ್ಲಿರುವ ಎಲ್ಲ ಹಿಂದೂಗಳು ಒಟ್ಟಾಗಿ ಮೊಘಲ್ರು ಹಾಗೂ ಬಾಬರ್ ಸಂತತಿಯ ವಿರುದ್ಧ ಹೋರಾಟ ನಡೆಸಿ ದೇಶವನ್ನು ಉಳಿಸಬೇಕಾದ ಅನಿವಾರ್ಯತೆ ಬಂದಿದ್ದು, ಅದಕ್ಕಾಗಿ ದೇಶದುದ್ದಕ್ಕೂ ಹಿಂದೂ ಸಂಘಟನೆಯ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು.
ತಾಲೂಕಿನ ಗೊಡಚಿ ಗ್ರಾಮದ ವೀರಭದ್ರೇಶ್ವರ ಮೈದಾನದಲ್ಲಿ ಅಲ್ಲಿನ ಗಜಾನನ ಯಂಗ್ ಸ್ಟಾರ್ ಕಮೀಟಿಯಿಂದ ಹಮ್ಮಿಕೊಂಡ ಹಿಂದೂ ಪರ ಸಂಘಟನೆ ಮತ್ತು ಬೃಹತ್ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಾವು ಸುಭಾಶ್ಚಂದ್ರ ಬೋಸ್, ಭಗತಸಿಂಗ್, ವೀರ ಸಾವರಕರ, ವೀರರಾಣಿ ಕಿತ್ತೂರ ಚೆನ್ನಮ್ಮ, ಝಾನ್ಸಿರಾಣಿ ಲಕ್ಷ್ಮಿಬಾಯಿ ಸೇರಿದಂತೆ ಅನೇಕ ಮಹನೀಯರ ತ್ಯಾಗ ಬಲಿದಾನದಿಂದ ದೊರೆತ ಸ್ವಾತಂತ್ರ್ಯದ ಸಂತಸದಲ್ಲಿದ್ದರೆ, ದೇಶದಲ್ಲಿರುವ ದುಷ್ಟ ಶಕ್ತಿಗಳು ಇಸ್ಲಾಂ ರಾಷ್ಟ್ರದ ಕನಸು ಕಾಣುವ ಕೆಲಸ ಮಾಡುತ್ತಿದ್ದಾರೆ. ಇಂತಹ ದುಷ್ಟ ಶಕ್ತಿಗಳ ದಮನ ಮಾಡಲು ನಾವೆಲ್ಲಾ ಹೋರಾಟ ನಡೆಸಬೇಕಾದ ಅವಶ್ಯಕತೆ ಇದೆ ಎಂದು ಕರೆ ನೀಡಿದರು.
200 ವರ್ಷಗಳ ಕಾಲ ದೇಶವನ್ನಾಳಿದ ಕ್ರಿಶ್ಚಿಯನ್ನರು ಹಾಗೂ ಮೊಘಲ್ರು ಇಡೀ ದೇಶದಲ್ಲಿ ತಮ್ಮ ಧರ್ಮದ ಪ್ರಚಾರಕ್ಕಾಗಿ ಏನು ಬೇಕು ಆ ರೀತಿಯಲ್ಲಿ ವ್ಯವಸ್ಥೆ ಮಾಡಿ ಇಂದು ಸಹ ಆ ಕೆಲಸವನ್ನು ನಿರಂತರಗೊಳಿಸುವ ಕಾರ್ಯದಲ್ಲಿದ್ದಾರೆ. ಅಂತಹ ಮತಾಂಧ ಶಕ್ತಿಗಳಿಗೆ ತಕ್ಕ ಪಾಠ ಕಲಿಸುವಲ್ಲಿ ನಾವೆಲ್ಲಾ ಗುದ್ದಾಡಬೇಕಾಗಿದೆ ಎಂದು ಹೇಳಿದರು.
ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾ ದಾಗಿನಿಂದ ಪಾಕಿಸ್ಥಾನ ಬಾಲ ಮುದಿರಿಕೊಂಡು ಕುಳಿತುಕೊಳ್ಳುವಂತಾಗಿದೆ. ಸದಾ ದೇಶದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಿ ನಮ್ಮ ಹಿಂದೂಗಳನ್ನೆ ಕೊಲ್ಲುವ ಕೆಲಸ ಮಾಡಿ ತಮ್ಮ ಸಾಮ್ರಾಜ್ಯ ವಿಸ್ತರಿಸುವ ಕೆಲಸ ನಡೆಸುತ್ತಿತ್ತು. ಇನ್ನು ಇಂತಹ ಕುತಂತ್ರ ನಡೆಯುವುದಿಲ್ಲ. ದೇಶದಲ್ಲಿರುವ ಹಿಂದೂಗಳು ಶಾಂತಿಗೂ ಸಿದ್ದ-ಸಮರಕ್ಕೂ ಸಿದ್ಧ ಎಂಬುದನ್ನು ತೋರಿಸಿದ್ದಾರೆ ಎಂದರು.
ಶಾಸಕ ಮಹಾದೇವಪ್ಪ ಯಾದವಾಡ ಮಾತನಾಡಿ, ನಾಡಿನ ಹಿಂದೂಗಳ ರಕ್ಷಣೆಗಾಗಿ ಪ್ರಮೋದ ಮುತಾಲಿಕ್ ಅವರು ಹಿಂದೂ ಸಂಘಟನೆಯ ಮೂಲಕ ಸಾಕಷ್ಟು ಹೋರಾಟ ನಡೆಸಿದ್ದಾರೆ. ಅವರ ಹೋರಾಟಕ್ಕೆ ನಾವೆಲ್ಲಾ ಕೈಜೋಡಿಸಲು ಮುಂದಾಗಬೇಕಿದೆ ಎಂದು ಹೇಳಿದರು. ಚಡಚಣದ ಬಾಲವಾಗ್ಮೀ ಭಾಗ್ಯಶ್ರೀ ಬಿರಾದಾರ ಮಾತನಾಡಿ, ನಮ್ಮ ಧರ್ಮದ ರಕ್ಷಣೆ ನಮ್ಮೆಲ್ಲರ ಹೊಣೆ. ಅದಕ್ಕಾಗಿ ನಾವೆಲ್ಲಾ ತಲ್ವಾರ್ ಹಿಡಿದು ಹೋರಾಡಲು ಸಹ ಸಿದ್ದರಾಗಬೇಕಿದೆ ಎಂದು ಕರೆ ನೀಡಿದರು.
ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಮಾತನಾಡಿದರು. ಸಂಜಯಸಿಂಹ ಶಿಂದೆ ಮಹಾರಾಜರು, ಜಿ.ಪಂ ಮಾಜಿ ಸದಸ್ಯ ಮಾರುತಿ ತುಪ್ಪದ, ಬಿಜೆಪಿ ತಾಲೂಕಾಧ್ಯಕ್ಷ ರಾಜೇಶ ಬೀಳಗಿ, ಮುಪ್ಪಯು ಹಿರೇಮಠ, ರಮೇಶ ಪಾಕನಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಸಿದ್ದು ಪೂಜಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಚನ್ನಯ್ಯ ಪೂಜಾರ ಸ್ವಾಗತಿಸಿ, ನಿರೂಪಿಸಿದರು. ಪ್ರವೀಣ ಜಾಮದಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ