ಪೌರತ್ವ ತಿದ್ದುಪಡಿ ಕಾಯ್ದೆ ಜನ ಜಾಗೃತಿ ಅಭಿಯಾನ
Team Udayavani, Jan 29, 2020, 1:13 PM IST
ಬೆಳಗಾವಿ: ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಯಾವ ಸಮುದಾಯಕ್ಕೂ ತೊಂದರೆ ಇಲ್ಲ. ಭಾರತೀಯ ಮುಸ್ಲಿಮರಿಗೂ ಯಾವುದೇ ಸಮಸ್ಯೆ ಇಲ್ಲ. ಬದಲಾಗಿ ಭಾರತವನ್ನು ಗಟ್ಟಿಗೊಳಿಸಲು ಪೌರತ್ವ ಕಾಯ್ದೆ ಅಗತ್ಯವಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.
ನಗರದ ಶೆಟ್ಟಿಗಲ್ಲಿ ಜೈನಮಂದಿರದ ಸಭಾಂಗಣದಲ್ಲಿ ಮಂಗಳವಾರ ಗಣರಾಜ್ಯೋತ್ಸವದ ಅಂಗವಾಗಿ ಬಿಜೆಪಿ ಮಹಾನಗರ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯಿದೆ ಜನಜಾಗೃತಿ ಅಭಿಯಾನ ಉದ್ಧೇಶಿಸಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಪ್ರತಿಭಟನೆ ಮೂಲಕ ಶಾಂತಿ ಕದಡುವ ಪ್ರಯತ್ನ ಮಾಡಿವೆ. ಸಾರ್ವಜನಿಕರ ಆಸ್ತಿಯನ್ನು ಹಾಳು ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ರಾಜು ಚಿಕ್ಕನಗೌಡರ್, ಜಿಲ್ಲಾ ಮಹಾನಗರ ಮಹಿಳಾ ಮೋರ್ಚಾ ಅಧ್ಯಕ್ಷ ಸವಿತಾ ಗುಡಾಕಾಯಿ, ಪ್ರಧಾನ ಕಾರ್ಯದರ್ಶಿ ಕಾಂಚನ್ ಕೋಪರಡೆ. ಶಶಿ ಪಾಟೀಲ್, ಕಾರ್ಯದರ್ಶಿ ಸೀಮಾ ಪವಾರ್, ಸವಿತಾ ಹೆಬ್ಟಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ