ಹೆಬ್ಬಾಳಕರ ಕುಟುಂಬ ರಾಜಕಾರಣದ ವಿರುದ್ಧ ಬ್ಯಾನರ್: ಮುಗಿಬಿದ್ದ ಕಾಂಗ್ರೆಸ್
Team Udayavani, Mar 15, 2024, 6:08 PM IST
ಉದಯವಾಣಿ ಸಮಾಚಾರ
ಬೆಳಗಾವಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿಯಲ್ಲಿ ಕುಟುಂಬ ರಾಜಕಾರಣ ಯುದ್ಧ ಶುರುವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಕುಟುಂಬ ರಾಜಕಾರಣ ವಾಕ್ಸಮರ ಜೋರಾಗಿದೆ.
ಬೆಳಗಾವಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನಿಂದ ಮೃಣಾಲ್ ಹೆಬ್ಬಾಳಕರ್ ಗೆ ಟಿಕೆಟ್ ನೀಡಲು ತಯಾರಿ ಶುರುವಾದ
ಬೆನ್ನಲ್ಲೇ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ ಅವರು ಹೆಬ್ಟಾಳಕರ ಕುಟುಂಬ
ರಾಜಕಾರಣದ ವಿರುದ್ಧ ಹರಿಹಾಯ್ದ ಬ್ಯಾನರ್ ಅಳವಡಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳಕರ ಸಚಿವರಾದರೆ, ಸಹೋದರ ಚನ್ನರಾಜ ಹಟ್ಟಿಹೊಳಿ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಈಗ ಅವರ ಮಗ ಮೃಣಾಲ್ ಸಂಸದರಾಗಬೇಕೆಂದರೆ ಉಳಿದ ಕಾಂಗ್ರೆಸ್ ಕಾರ್ಯಕರ್ತರು ಭಜನೆ ಮಾಡಬೇಕಾ ಎಂದು ಪ್ರಶ್ನಿಸುವ ಬ್ಯಾನರ್ ಧನಂಜಯ ಜಾಧವ ಅಳವಡಿಸಿದ್ದು ಕಾಂಗ್ರೆಸ್ನ ಕೆಂಗಣ್ಣಿಗೆ ಗುರಿಯಾಗಿದೆ.
ಈ ಬಗ್ಗೆ ತೀಕ್ಷಣವಾಗಿ ಪ್ರತಿಕ್ರಿಯಿಸಿರುವ ತಾಪಂ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಶಂಕರಗೌಡ ಪಾಟೀಲ, ಬಿಜೆಪಿಯವರು
ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವುದೆಂದರೆ ಭೂತದ ಬಾಯಲ್ಲಿ ಭಗವದ್ಗೀತೆ ಉಲಿದಂತೆ.
ಹಳ್ಳಿಯಿಂದ ದಿಲ್ಲಿವರೆಗೂ ಕುಟುಂಬ ರಾಜಕಾರಣವನ್ನೇ ಮಾಡಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಈ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ. ಯಡಿಯೂರಪ್ಪ, ಈಶ್ವರಪ್ಪ, ಬೊಮ್ಮಾಯಿ, ಉದಾಸಿ, ಸಿ.ಎಂ. ಸಿದ್ದೇಶ್ವರ, ಕತ್ತಿ, ಜಾರಕಿಹೊಳಿ, ಜೊಲ್ಲೆ ಅವರದ್ದು ಕುಟುಂಬ ರಾಜಕಾರಣವಲ್ಲವೇ? ಕುಟುಂಬ ರಾಜಕಾರಣವನ್ನೇ ಹೊದ್ದು ಮಲಗಿರುವ ಜೆಡಿಎಸ್ ಜತೆ ಚುನಾವಣೆ
ಎದುರಿಸುತ್ತಿರುವ ಬಿಜೆಪಿಯವರು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದಾರೆ. ಕೇವಲ ಅಪ್ಪ, ಅಮ್ಮ, ಅಣ್ಣನ ಹೆಸರಲ್ಲಿ, ಕುಟುಂಬದವರ ಹೆಸರಿನ ಮೇಲೆ ಬೇರೆ ಬೇರೆ ಹುದ್ದೆಗಳನ್ನು ಪಡೆಯುವ ಸಾವಿರಾರು ಉದಾಹರಣೆಗಳು ಬಿಜೆಪಿಯ ರಾಷ್ಟ್ರ ರಾಜಕಾರಣದಲ್ಲಿರುವಾಗ ಇಂತಹ ಬ್ಯಾನರ್, ಫ್ಲೆಕ್ಸ್ ಅಳವಡಿಸಿ ಬಿಜೆಪಿ ಅಪಹಾಸ್ಯಕ್ಕೀಡಾಗುತ್ತಿದೆ ಎಂದು
ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ