“ಬಂಟ್ವಾಳದ ನೀರಾ ಘಟಕ ಶೀಘ್ರ ಪುನರಾರಂಭ’:ಸಚಿವ ಮುನಿರತ್ನ
Team Udayavani, Dec 24, 2022, 12:02 AM IST
ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ತುಂಬೆಯಲ್ಲಿ ತೋಟಗಾರಿಕೆ ಇಲಾಖೆಯ ನೀರಾ ಘಟಕವನ್ನು ಪುನಾರಾರಂಭ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತೋಟಗಾರಿಕೆ ಸಚಿವ ಮುನಿರತ್ನ ಹೇಳಿದರು.
ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ನ ಹರೀಶ್ ಕುಮಾರ್ ಆವರ ಪ್ರಶ್ನೆಗೆ ಉತ್ತರಿಸಿದ ಅವರು, ತುಂಬೆ ನೀರಾ ಘಟಕ ಪುನಃಶ್ಚೇತನಗೊಳಿಸಲು ಕೇರಳದ ಪಾಲಾಕ್ಕಾಡ್ ತೆಂಗು ಉತ್ಪಾದಕ ಕಂಪೆನಿ ಜತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರ ಉತ್ಪನ್ನ ಮಾರಾಟದಲ್ಲಿ ತೊಂದರೆಯಾಗಿ ನೀರಾ ಉತ್ಪಾದನೆ ನಿಂತಿದೆ. ಇದೀತ ರೈತ ಉತ್ಪಾದಕ ಕೇಂದ್ರಗಳಿಗೆ ಇದನ್ನು ವಹಿಸಿಕೊಡಲು ಚಿಂತಿಸಲಾಗಿದೆ. ಇದಕ್ಕೆ ಡಿಪಿಆರ್ ಸಿದ್ದಪಡಿಸುತ್ತಿದ್ದು, ಬರುವ ಮಂಗಳವಾರ ಈ ಕುರಿತು ಸಭೆ ನಡೆಸಿ ಇದನ್ನು ಮತ್ತೆ ಪುನರಾಂಭಿಸಲಾಗುವುದು ಎಂದು ಭರವಸೆ ನೀಡಿದರು.
“ಭಾಗ್ಯಲಕ್ಷ್ಮೀ ಯೋಜನೆ ವಿಳಂಬವಾಗದು’
ಬೆಳಗಾವಿ: ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ವಿಳಂಬವಿಲ್ಲದೆ ಸೌಲಭ್ಯ ನೀಡಲಾಗುತ್ತಿದೆ. ಬಂಟ್ವಾಳದಲ್ಲಿ 561 ಫಲಾನುಭವಿಗಳಿಗೆ ಸಿಗದೇ ಇರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ಬಿಜೆಪಿಯ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರು ಪ್ರಶ್ನೆಗೆ ಉತ್ತರಿಸಿದ ಸಚಿವರು, ಭಾಗ್ಯಲಕ್ಷ್ಮೀ ಯೋಜನೆಯ ಅರ್ಹ ಫಲಾನುಭವಿಗಳಿಗೆ ವಿಳಂಬ ಇಲ್ಲದೆ ಸೌಲಭ್ಯ ಸಿಗುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ನೀಡಲಾಗಿದೆ. 2020-21, 2021-22ನೇ ಸಾಲಿನಿಂದ 561 ಮಂದಿಗೆ ಸೌಲಭ್ಯ ಸಿಗದೆ ಇರುವ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
“ಸುರತ್ಕಲ್ ಮಾರುಕಟ್ಟೆ ಕಾಮಗಾರಿ ಶೀಘ್ರ’
ಬೆಳಗಾವಿ: ಸುರತ್ಕಲ್ ಮಾರುಕಟ್ಟೆಯ ಕಾಮಗಾರಿಗೆ 82 ಕೋ.ರೂ. ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.
ಬಿಜೆಪಿಯ ಡಾ| ಭರತ್ ಶೆಟ್ಟಿಯವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 6 ಮಹಡಿಯ ಸಂಕೀರ್ಣ ಇದಾಗಿದ್ದು, 3.5 ಎಕರೆ ಜಾಗದಲ್ಲಿ ನಿರ್ಮಾಣವಾಗಲಿದೆ. ಜಾಗದ ಅಲಭ್ಯತೆ ಹಾಗೂ ತಾಂತ್ರಿಕ ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ಕೂಡಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಾಮಗಾರಿ ನಡೆಸಲಾಗುವುದು ಎಂದರು. 2018ರಲ್ಲಿ ಕಾರ್ಯಾದೇಶವಾಗಿದ್ದರೂ, ಮಾರುಕಟ್ಟೆ ಸಂಕೀರ್ಣದ ಕಾಮಗಾರಿ ಶುರುವಾಗಿಲ್ಲ. ಯಾವಾಗ ಕಾಮಗಾರಿ ಶುರುವಾಗಲಿದೆ ಎಂದು ಡಾ| ಭರತ್ ಶೆಟ್ಟಿ ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ