ಕಾಯಕ ನಿಷ್ಠೆಯುಳ್ಳವರ ಬದುಕು ಬೆಳಗುತ್ತೆ; ಡಾ| ವಿಜಯ ಸಂಕೇಶ್ವರ

ಪ್ರತಿಯೊಬ್ಬರಲ್ಲಿ ದುಡಿದು ಬದುಕುವ ಸಂಸ್ಕೃತಿ ಇರಬೇಕು

Team Udayavani, Feb 6, 2023, 5:32 PM IST

ಕಾಯಕ ನಿಷ್ಠೆಯುಳ್ಳವರ ಬದುಕು ಬೆಳಗುತ್ತೆ; ಡಾ| ವಿಜಯ ಸಂಕೇಶ್ವರ

ಮುಂಡರಗಿ: 12ನೇ ಶತಮಾನದ ಜಗಜ್ಯೋತಿ ಬಸವಣ್ಣನವರ ಕಾಯಕ ಹಾಗೂ ದಾಸೋಹ ಸೇವೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಅಳವಡಿಸಿಕೊಂಡು ಬದುಕಿದವರು ಮಾತ್ರ ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಬಹುದು. ಕಾಯಕದಲ್ಲಿ ನಿಷ್ಠೆಯುಳ್ಳವರು ಬದುಕಿನಲ್ಲಿ ಬೆಳೆಯಲು ಸಾಧ್ಯ ಎಂದು ವಿಆರ್‌ಎಲ್‌ ಸಮೂಹ ಸಂಸ್ಥೆ ಮುಖ್ಯಸ್ಥ ಡಾ| ವಿಜಯ ಸಂಕೇಶ್ವರ ಹೇಳಿದರು.

ಪಟ್ಟಣದ ಜ| ಅನ್ನದಾನೀಶ್ವರ ಸಂಸ್ಥಾನಮಠ 153ನೇ ಜಾತ್ರಾ ಮಹೋತ್ಸವದಲ್ಲಿ ನಾಡೋಜ ಡಾ|ಅನ್ನದಾನೀಶ್ವರ ಮಹಾಶಿವಯೋಗಿಗಳವರಿಂದ “ಜಗದ್ಗುರು ಅನ್ನದಾನೀಶ್ವರ ಪ್ರತಿಷ್ಠಾನ ಪುರಸ್ಕಾರ’ ಹಾಗೂ ಚಿನ್ನದ ಉಂಗುರುವನ್ನು ಭಕ್ತಿಪೂರ್ವಕವಾಗಿ ಸ್ವೀಕರಿಸಿ ಅವರು ಮಾತನಾಡಿದರು.

ಇಂದಿನ ಯುವಕರಲ್ಲಿ ಕಾಯಕ ವೃತ್ತಿ ಕಡಿಮೆಯಾಗುತ್ತಿರುವುದಕ್ಕೆ ಬೇಸರವಾಗುತ್ತಿದೆ. ನಮ್ಮ ಸಂಸ್ಥೆಯ ನೌಕರರ ಪ್ರಾಮಾಣಿಕ ಸೇವೆಯೇ ವಿಆರ್‌ಎಲ್‌ ಸಮೂಹ ಸಂಸ್ಥೆ ಬೆಳೆಯಲು ಕಾರಣವಾಗಿದೆ. ಎಲ್ಲರೂ ಕಾಯಕ ನಿಷ್ಠೆಯಿಂದ ಸೇವೆ ಮಾಡಬೇಕೆಂದರು. ನಿವೃತ್ತ ಪ್ರಾಚಾರ್ಯ ಪಂಚಾಕ್ಷರಯ್ಯ ಮಾತನಾಡಿ, ಗುರುವಿನ ಪ್ರೇರಣೆ ಇದ್ದರೆ ಬದುಕು ಸಾರ್ಥಕಗೊಳ್ಳುತ್ತದೆ. ಪ್ರತಿಯೊಬ್ಬರಲ್ಲಿ ದುಡಿದು ಬದುಕುವ ಸಂಸ್ಕೃತಿ ಇರಬೇಕು. ಭಾರತದಲ್ಲಿ ರಸಾಯನಿಕ ಗೊಬ್ಬರ ಹೊಲಗಳಲ್ಲಿ ಉಪಯೋಗ ಮಾಡುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ
ಎಂದರು.

ಪುರಸಭೆ ಅಧ್ಯಕ್ಷೆ ಕವಿತಾ ಎ. ಉಳ್ಳಾಗಡ್ಡಿ ಮಾತನಾಡಿ, ಎಲ್ಲರೂ ಧರ್ಮ, ಸಂಸ್ಕೃತಿಯಿಂದ ಸಂಸ್ಕಾರವಂತರಾಗಬೇಕು. ವಿಜ್ಞಾನ ಭವನಕ್ಕೆ ಪುರಸಭೆ ಮುಂಗಡ ಪತ್ರದಲ್ಲಿ 10 ಲಕ್ಷ ರೂ. ಅನುದಾನ ಮೀಸಲಿ ಡಲಾಗುವುದು ಎಂದರು. ಸಾನ್ನಿಧ್ಯ ವಹಿಸಿದ್ದ ನಾಡೋಜ ಜಗದ್ಗುರು ಡಾ| ಅನ್ನದಾನೀಶ್ವರ ಮಹಾಶಿವಯೋಗಿಗಳವರು, ಶ್ರೀಮಠದ ಧಾರ್ಮಿಕ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಡಾ|ಚನ್ನಮಲ್ಲ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಮಹಾಂತೇಶ ಶಾಸ್ತ್ರೀಗಳು ಮಾತನಾಡಿದರು. ಶಿವಕುಮಾರ ದೇವರು ಆಶಯ ನುಡಿಗಳನ್ನಾಡಿದರು. ಜ.ಅ. ವಿದ್ಯಾ ಸಮಿತಿ ಆಡಳಿತಾಧಿಕಾರಿ ಡಾ|ಬಿ.ಜಿ.ಜವಳಿ ಅವರು ಡಾ| ವಿಜಯ ಸಂಕೇಶ್ವರ ಅವರ ಸೇವೆ ಪರಿಚಯಿಸಿದರು.

ಶ್ರೀ ಗುರುಸಿದ್ಧ ಮಹಾಸ್ವಾಮೀಜಿ, ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳನ್ನು ಸನ್ಮಾನಿಸಲಾಯಿತು. ಪಂ| ರಾಜಗುರು ಗುರುಸ್ವಾಮಿ ಕಲಕೇರಿ ಗವಾಯಿಗಳಿಂದ ಸಂಗೀತ ಕಾರ್ಯಕ್ರಮ ಜರುಗಿತು. ಶ್ರೀಮಠದ ಉತ್ತರಾಧಿಕಾರಿಗಳಾದ ಡಾ|ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಶ್ರೀ ಶಿವಯೋಗೀಶ್ವರ ಮಹಾಸ್ವಾಮೀಜಿ, ಎ.ಕೆ. ಬೆಲ್ಲದ, ಈಶ್ವರಪ್ಪ ಹಂಚಿನಾಳ, ನಾರಾಯಣ ಇಲ್ಲೂರ, ಕರಬಸಪ್ಪ ಹಂಚಿನಾಳ, ಶಮಂತಕಮಣಿ ಇಲ್ಲೂರ, ಆರ್‌.ಬಿ.ಡಂಬಳಮಠ, ಗಿರೀಶ ಅಂಗಡಿ, ಪ್ರದೀಪ ಗುಡದಪ್ಪನವರ, ಮಂಜುನಾಥ ಮುಧೋಳ, ಪ್ರಶಾಂತ ಗುಡದಪ್ಪನವರ, ಎಸ್‌. ಎಸ್‌. ಗಡ್ಡದ, ಎಸ್‌.ಎಂ. ಅಗಡಿ, ಡಾ|ಡಿ.ಸಿ.ಮಠ, ಶಿವರಾಜಸ್ವಾಮಿ, ವಿರುಪಾಕ್ಷಪ್ಪ, ಎಸ್‌.ಸಿ. ಚಕ್ಕಡಿಮಠ, ಅಂದಪ್ಪ ಗೋಡಿ, ವೀರೇಶ ಸಜ್ಜನ ಮತ್ತಿತರರು ಪಾಲ್ಗೊಂಡಿದ್ದರು. ಎಸ್‌.ಆರ್‌. ರಿತ್ತಿ, ಎಸ್‌.ಎಸ್‌. ಇನಾಮತಿ ನಿರೂಪಿಸಿದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.