ಬೆಳಗಾವಿಯಿಂದ ಗೋವಾಕ್ಕೆ ಗೋಮಾಂಸ ಸಾಗಾಟ: ವಾಹನಕ್ಕೆ ಬೆಂಕಿ
Team Udayavani, Jun 6, 2020, 11:03 AM IST
ಬೆಳಗಾವಿ: ಜಿಲ್ಲೆಯಿಂದ ಗೋಮಾಂಸವನ್ನು ಗೋವಾಕ್ಕೆ ಸಾಗಿಸಲಾಗುತ್ತಿದೆ ಎಂದು ಸಂಶಯ ವ್ಯಕ್ತಪಡಿಸಿ ವಾಹನಕ್ಕೆ ಬೆಂಕಿ ಹಚ್ಚಿರುವ ಘಟನೆ ಸಮೀಪದ ಕರ್ಲೇ-ಬೆಳವಟ್ಟಿ ಮಾರ್ಗದಲ್ಲಿ ಶನಿವಾರ ಬೆಳಕಿಗೆ ಬಂದಿದೆ.
ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಗೋ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು ವಾಹನಕ್ಕಾಗಿ ಕಾಯುತ್ತಾ ನಿಂತಿದ್ದರು. ಕರ್ಲೇಯಿಂದ ಒಂದು ಕಿ.ಮೀ. ಅಂತರದಲ್ಲಿ ವಾಹನ ಬರುತ್ತಿದ್ದಂತೆ ತಡೆದು ವಾಹನಕ್ಕೆ ಬೆಂಕಿ ಹಚ್ಚಿ ಸುಡಲಾಗಿದೆ. ವಾಹನದಲ್ಲಿ ಇದ್ದವರು ಓಡಿ ಹೋಗಿದ್ದಾರೆ. ಬೆಳವಟ್ಟಿ ಮಾರ್ಗದಿಂದ ಗೋವಾಕ್ಕೆ ಈ ವಾಹನ ಹೊರಟಿತ್ತು ಎನ್ನಲಾಗಿದೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಇದನ್ನು ನೋಡಲು ಜನರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಬೆಳಗಾವಿ ನಗರ ಸೇರಿದಂತೆ ತಾಲೂಕಿನ ವಿವಿಧ ಹಳ್ಳಿಗಳ ಮೂಲಕ ಕೆಲವು ದಿನಗಳಿಂದ ಗೋಮಾಂಸ ಹಾಗೂ ಗೋ ಸಾಗಾಟದ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ತಾಲೂಕಿನ ವಿವಿಧ ಕಡೆಗಳಲ್ಲಿ ವಾಹನ ತಡೆದು ಪೊಲೀಸರಿಗೆ ಒಪ್ಪಿಸುವ ಪ್ರಕರಣಗಳು ನಡೆಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?