ವಿಜೃಂಭಣೆಯ ಯಲ್ಲಮ್ಮ ದೇವಿ ಜಾತ್ರೆ
ಘಟಪ್ರಭಾ: ಏಳುಕೊಳ್ಳದ ಯಲ್ಲಮ್ಮದೇವಿ ಜಾತ್ರೆಯಲ್ಲಿ ಸೇರಿರುವ ಅಪಾರ ಭಕ್ತ ಸಮೂಹ
Team Udayavani, Feb 3, 2021, 5:26 PM IST
ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮ ಹಾಗೂ ಪ್ರಭಾ ಶುಗರ್ನ ಮಧ್ಯೆ ಭಾಗದಲ್ಲಿರುವ ಏಳುಕೊಳ್ಳದ ಯಲ್ಲಮ್ಮದೇವಿ ಜಾತ್ರೆಯು
ವಿಜೃಂಭಣೆಯಿಂದ ಮಂಗಳವಾರ ಜರುಗಿತು. ಬೆಳಗ್ಗೆ ಯಲ್ಲಮ್ಮದೇವಿಗೆ ರುದ್ರಾಭಿಷೇಕ, ಮಹಾಪೂಜೆ, ಉಡಿ ತುಂಬುವ ಕಾರ್ಯಕ್ರಮ
ಜರುಗಿತು.
ಭಂಡಾರ ಹಾರಿಸುವ ಮೂಲಕ ಭಕ್ತರು ದೇವಿಯ ದರ್ಶನ ಪಡೆದರು. ಊಧೋ ಊಧೋ ಎಂದು ದೇವಿಯ ಸ್ಮರಣೆ ಮಾಡುತ್ತಾ ಭಕ್ತರು ಪಾದಯಾತ್ರೆ ಮೂಲಕ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾದರು. ಭಕ್ತರು ಹರಕೆ ಹೊತ್ತು ದೇವಿಯ ಹುಟಗಿ ಉಡುವುದು, ದೇವಿಯ ಪರಡಿ(ಹಡ್ಡಲಗಿ) ತುಂಬುವುದು ನಡೆಸಿದರು.
ದೇವಿಯ ಉಡಿಯನ್ನು ತುಂಬುವ ಮೂಲಕ ದೇವಿಯ ದರ್ಶನ ಪಡೆದರು. ನಂತರ ಪರಶುರಾಮ ಮತ್ತು ಮಾತಂಗಿ ದೇವಿಯ ದರ್ಶನ ಪಡೆದು
ಪುನೀತರಾದರು. ಏಳು ಕೊಳ್ಳದ ಯಲ್ಲಮ್ಮದೇವಿ ಸೇವಾ ಸಮಿತಿಯವರು ಭಕ್ತರಿಗೆ ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುವಂತೆ ವ್ಯವಸ್ಥೆ ಮಾಡಿದ್ದರು.
ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಭಕ್ತರಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು. ಭಕ್ತರು ದೇವಿಗೆ ನೈವೇದ್ಯ ಅರ್ಪಿಸಿ ನಂತರ ಕುಟುಂಬ ಸಮೇತ ಎಲ್ಲ ಸದಸ್ಯರು ಒಟ್ಟಾಗಿ ಕುಳಿತು ಪ್ರಸಾದ ಸೇವನೆ ಮಾಡಿದರು. ಜಾತ್ರೆಯಲ್ಲಿ ವಿವಿಧ ಬಗೆಯ ಆಟಿಗೆ ಸಾಮಾನುಗಳ ಅಂಗಡಿಗಳಿದ್ದು ಚಿಣ್ಣರು ತಮ್ಮ ಆಟಿಗೆ ಸಾಮಾನು ಖರೀದಿಯಲ್ಲಿ ನಿರತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು