Belagavi: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆಗೈದ ಕೀಚಕರು! ತಡವಾಗಿ ಬೆಳಕಿಗೆ ಬಂದ ಘಟನೆ
ಚನ್ನಮ್ಮನ ನಾಡಿನಲ್ಲೊಂದು ಹೀನ ಕೃತ್ಯ
Team Udayavani, Jan 3, 2024, 10:55 AM IST
ಬೆಳಗಾವಿ: ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಎಳೆದಾಡಿ ಅಮಾನವೀಯ ಕೃತ್ಯ ಎಸಗಿದ ಘಟನೆ ವೀರ ಚೆನ್ನಮ್ಮನ ನಾಡಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ನವೆಂಬರ್ 21ರಂದು ಅಮಾನವೀಯ ಕೃತ್ಯ ನಡೆದಿದ್ದು ಈ ಕುರಿತು ಮಹಿಳೆ ಠಾಣೆಯಲ್ಲಿ ದೂರು ನೀಡಿದರು ಸ್ಪಂದಿಸದ ಪೊಲೀಸರು ಇದೀಗ ಘಟನೆ ನಡೆದಿರುವ ಕುರಿತು ಮಹಿಳಾ ಆಯೋಗಕ್ಕೆ ದೂರು ನೀಡಿದ ಬಳಿಕ ವಿಚಾರ ಬೆಳಕಿಗೆ ಬಂದಿದೆ.
ಮಹಿಳಾ ಆಯೋಗದ ನಿರ್ದೇಶನ ಮೇರೆಗೆ ಡಿ. 30ಕ್ಕೆ ಬೈಲಹೊಂಗಲ ಠಾಣೆಯಲ್ಲಿ 6 ಮಹಿಳೆಯರೂ ಸೇರಿದಂತೆ ಒಟ್ಟು 20 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ವಿವರ:
ಸಂತ್ರಸ್ತೆಯ ಜಮೀನಿಗೆ ಹೊಂದಿಕೊಂಡೇ ಕೆಲ ಆರೋಪಿಗಳು ಪೈಪ್ಲೈನ್ ಅಳವಡಿಕೆ ಮಾಡಿದ್ದರು ಇದರಿಂದ ಸಂತ್ರಸ್ತ ಮಹಿಳೆಯ ಜಮೀನಿಗೆ ನೀರು ನುಗ್ಗಿ ಬೆಳೆಗಳು ಹಾನಿಯಾಗಿವೆ. ಈ ಕುರಿತು ಮಹಿಳೆ ಲೋಕೋಪಯೋಗಿ ಇಲಾಖೆಗೆ ದೂರು ನೀಡಿದ್ದರು ಅದರಂತೆ ಸ್ಥಳಕ್ಕೆ ಬಂದ ಅಧಿಕಾರಿಗಳು ಪೈಪ್ಲೈನ್ ತೆರವುಗೊಳಿಸಿದ್ದರು.
ಇದೆ ವಿಚಾರಕ್ಕೆ ಸಂಬಂಧಿಸಿ ನವೆಂಬರ್ 21 ರಂದು ಸಂತ್ರಸ್ತೆ ಹಾಗೂ ಆರೋಪಿಗಳ ಮಧ್ಯೆ ಗಲಾಟೆ ನಡೆದಿತ್ತು ಗಲಾಟೆ ವಿಕೋಪಕ್ಕೆ ತಿರುಗಿ ಮಹಿಳೆ ತೊಟ್ಟಿದ್ದ ಬಟ್ಟೆ ಎಳೆದಾಡಿ ಬೆತ್ತಲೆಗೊಳಿಸಿ ಹಲ್ಲೆನಡೆಸಿದ್ದಾರೆ ಅಲ್ಲದೆ ಪ್ರಾಣ ಬೆದರಿಕೆಯನ್ನೂ ಹಾಕಿದ್ದಾರೆ.
ಘಟನೆ ಕುರಿತು ಸಂತ್ರಸ್ತ ಮಹಿಳೆ ಠಾಣೆಗೆ ದೂರು ನೀಡಲೆಂದು ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿಗಳು ಮಹಿಳೆಯನ್ನು ಅಲ್ಲಿಂದ ಕರೆದುಕೊಂಡು ಹೋಗಿ ಗ್ರಾಮ ಪಂಚಾಯತ್ ನಲ್ಲಿ ಕೂಡಿ ಹಾಕಿ ಮತ್ತೆ ಬಟ್ಟೆಗಳನ್ನು ಎಳೆದಾಡಿ ಬೆತ್ತಲೆಗೊಳಿಸಿ ಕೈಯಲ್ಲಿದ್ದ ಪರ್ಸ್ ಕಸಿದು ಅದರಲ್ಲಿದ್ದ ಮೊಬೈಲ್ ಹಣ ಕಸಿದು ಬಲವಂತವಾಗಿ ಕಾಗದ ಪತ್ರಕ್ಕೆ ಸಹಿ ಹಾಕಿಸಿ ಸಂಜೆ ವೇಳೆಗೆ ಬಿಟ್ಟಿದ್ದಾರೆ.
ಇದಾದ ಮಾರನೇ ದಿನ ಸಂತ್ರಸ್ತ ಮಹಿಳೆ ಬೈಲಹೊಂಗಲ ಠಾಣೆಗೆ ಹೋಗಿ ದೂರು ನೀಡಿದರೂ ಪೊಲೀಸರು ಸ್ಪಂದಿಸಲಿಲ್ಲ. ಇದರಿಂದ ಬೇಸರಗೊಂಡ ಮಹಿಳೆ ಮಹಿಳಾ ಆಯೋಗದ ಮೊರೆ ಹೋಗಿದ್ದು ಇದೀಗ ಅವರ ಹೇಳಿಕೆಯ ಆಧಾರದ ಮೇಲೆ ಡಿಸೆಂಬರ್ 30ರಂದು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ತಿಗಡಿ ಗ್ರಾಮದ ಕಲ್ಲಪ್ಪ ಡೊಂಕನ್ನವರ ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ, ಸಾಧಿಕ ಬಾಳೇಶಿ, ಇಸ್ಮಾಯಿಲ್ ಬಾಳೇಶಿ, ಶಿವಬಸಪ್ಪ ಕರಡಿಗುದ್ದಿ ಸೇರಿ 20 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದೀಗ ಈ ಪ್ರಕರಣ ಬೆಳಗಾವಿ ಜಿಲ್ಲಾ ಮಹಿಳಾ ಠಾಣೆಗೆ ವರ್ಗಾವಣೆಗೊಂಡಿದ್ದು ಇದುವರೆಗೂ ಯಾರ ಬಂಧನ ಆಗಿಲ್ಲ.
ಇದನ್ನೂ ಓದಿ: ಚಿತ್ರಕಲಾ ಪರಿಷತ್ನಲ್ಲಿ ಜ.7ರಂದು ಚಿತ್ರಸಂತೆ; 1,500 ಕಲಾವಿದರ ಕಲಾಕೃತಿ ಪ್ರದರ್ಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ