ಹೊಸ ಪಿಂಚಣಿ ರದ್ದತಿಗೆ ಕಹಳೆ 


Team Udayavani, Nov 5, 2018, 5:22 PM IST

5-november-19.gif

ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೂತನ ಪಿಂಚಣಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಮುಂದುವರಿಸದೆ ಕೈಬಿಡಬೇಕು ಎಂದು ಒತ್ತಾಯಿಸಿ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಮಯದಲ್ಲಿ ಒಂದು ದಿನ ಸಾಂಕೇತಿಕ ಮುಷ್ಕರ ನಡೆಸಲು ರಾಜ್ಯ ಸರ್ಕಾರಿ ನೌಕರರು ನಿರ್ಧರಿಸಿದ್ದಾರೆ.

ಬೆಳಗಾವಿಯಲ್ಲಿ ರವಿವಾರ ನಡೆದ ವಿಭಾಗ ಮಟ್ಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ನ.13ರಂದು ಬೆಂಗಳೂರಿನಲ್ಲಿ ನಡೆಯುವ ಸಂಘದ ರಾಜ್ಯ ಪರಿಷತ್‌ ಸಭೆಯಲ್ಲಿ ಇದಕ್ಕೆ ಸ್ಪಷ್ಟ ರೂಪ ನೀಡಿ ಮುಷ್ಕರದ ರೂಪರೇಷೆ ಸಿದ್ಧಪಡಿಸಲು ತೀರ್ಮಾನಿಸಲಾಯಿತು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಎಚ್‌.ಕೆ. ರಾಮು, 2006ರಲ್ಲಿ ಜಾರಿಗೆ ಬಂದಿರುವ ಹೊಸ ಪಿಂಚಣಿ ಯೋಜನೆ ಸರ್ಕಾರಿ ನೌಕರರಿಗೆ ಮಾರಕವಾಗಿದೆ. ಇದರಿಂದ 20ರಿಂದ 25 ವರ್ಷ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಕೇವಲ 500 ರೂ. ಪಿಂಚಣಿ ದೊರೆಯಲಿದೆ. ಇದು ಅನ್ಯಾಯ. 

ಸರ್ಕಾರ ಕೂಡಲೇ ಹೊಸ ವ್ಯವಸ್ಥೆಯನ್ನು ಕೈಬಿಟ್ಟು ಹಳೆಯ ಪಿಂಚಣಿ ಪದ್ಧತಿಯನ್ನು ಮುಂದುವರಿಸಬೇಕು. ನೂತನ ಪಿಂಚಣಿ ವ್ಯವಸ್ಥೆ ರದ್ದತಿಗೆ ಆಗ್ರಹಿಸಿ ಹಂತ ಹಂತವಾಗಿ ಹೋರಾಟ ಮಾಡುತ್ತಲೇ ಬರಲಾಗಿದೆ. ಈಗ ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದರೂ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂಬ ಉದ್ದೇಶದಿಂದ ಅಧಿವೇಶನದ ಸಮಯದಲ್ಲಿ ಸಾಂಕೇತಿಕ ಮುಷ್ಕರ ನಡೆಸಲಾಗುವುದು ಎಂದರು. ಸಂಘದ ರಾಜ್ಯ ಕೋಶಾಧ್ಯಕ್ಷ ಸಿ.ಜೆ. ಷಡಕ್ಷರಿ ಮಾತನಾಡಿ, ಹೋರಾಟ ಹಾಗೂ ಸತ್ಯಾಗ್ರಹ ಮಾಡದೇ ಯಾವ ಬೇಡಿಕೆಗಳೂ ಈಡೇರಿಲ್ಲ. ಈಗ ನಮ್ಮದು ನ್ಯಾಯಯುತ ಬೇಡಿಕೆ. ನೌಕರರಿಗೆ ಮಾರಕವಾಗಿರುವ ನೂತನ ಪಿಂಚಣಿ ಯೋಜನೆಯನ್ನು ಕೂಡಲೇ ಕೈಬಿಡಬೇಕು ಎಂದರು. ಬೆಳಗಾವಿ ಜಿಲ್ಲಾಧ್ಯಕ್ಷ ಜಗದೀಶ ಪಾಟೀಲ ಮಾತನಾಡಿ, ಸರ್ಕಾರಿ ನೌಕರರು 30 ವರ್ಷದಿಂದ ಸೇವೆ ಸಲ್ಲಿಸಿದರೂ ಕೊನೆಗೆ ನಾವು ಅಂಗವಿಕಲರು ಹಾಗೂ ವೃದ್ಧಾಪ್ಯ ವೇತನಕ್ಕಿಂತ ಕಡಿಮೆ ಹಣವನ್ನು ಪಿಂಚಣಿ ರೂಪದಲ್ಲಿ ಪಡೆಯುತ್ತಿದ್ದೇವೆ. ಇದು ಬಹಳ ನೋವುಂಟು ಮಾಡಿದೆ. ನಮ್ಮದು ಒಂದೇ ಬೇಡಿಕೆ. ಹಳೇ ಪಿಂಚಣಿ ಯೋಜನೆಯನ್ನು ಮತ್ತೆ ಮುಂದುವರಿಸಬೇಕು. ಈಗ ಬೆಳಗಾವಿ ಸಭೆಯ ಮೂಲಕ ಇದಕ್ಕೆ ಸತ್ಯಾಗ್ರಹದ ಕಳೆ ಬಂದಿದೆ ಎಂದರು. ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ ಗುರಿಕಾರ, ಜಯಕುಮಾರ ಹೆಬಳಿ, ಮಲ್ಲಿಕಾರ್ಜುನ, ವಿಜಯಪುರ ಘಟಕದ ಅಧ್ಯಕ್ಷ ಸುರೇಶ ಶೆಡಶ್ಯಾಳ ಸೇರಿದಂತೆ ಬೆಳಗಾವಿ ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಹಾಗೂ ಕಾರವಾರ ಜಿಲ್ಲೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

2006ರಲ್ಲಿ ಜಾರಿಗೆ ಬಂದಿರುವ ಹೊಸ ಪಿಂಚಣಿ ಯೋಜನೆ ಸರ್ಕಾರಿ ನೌಕರರಿಗೆ ಮಾರಕವಾಗಿದೆ. ಇದರಿಂದ 20ರಿಂದ 25 ವರ್ಷ ಸೇವೆ ಸಲ್ಲಿಸಿದ ಸರ್ಕಾರಿ ನೌಕರರಿಗೆ ಕೇವಲ 500 ರೂ. ಪಿಂಚಣಿ ದೊರೆಯಲಿದೆ. ಇದು ಅನ್ಯಾಯ. ಹೊಸ ವ್ಯವಸ್ಥೆ ಕೈಬಿಟ್ಟು ಹಳೆಯ ಪಿಂಚಣಿ ಪದ್ಧತಿ ಮುಂದುವರಿಸಬೇಕು.
ಎಚ್‌.ಕೆ. ರಾಮು,
ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.