ಕಾಣದ ಒಗ್ಗಟ್ಟು; ಕನ್ನಡದ ಅಸ್ಮಿತೆಗೆ ಪೆಟ್ಟು

ಕೈ-ಕಮಲಪಕ್ಷಗಳಿಂದ ಮರಾಠಿ ಭಾಷಿಕರಿಗೆ ಮಣೆ |ಪ್ರತಿಶತ 70ರಿಂದ 80 ಸ್ಥಾನ ನೀಡಿಕೆ

Team Udayavani, Aug 27, 2021, 5:56 PM IST

fgdfgrty

ವರದಿ: ಕೇಶವ ಆದಿ

ಬೆಳಗಾವಿ: ಎರಡೂವರೆ ದಶಕದ ನಂತರ ರಾಜಕೀಯ ಪಕ್ಷಗಳಹೆಸರಿನಲ್ಲಿಚುನಾವಣೆಕಾಣುತ್ತಿರುವ ಸ್ಥಳೀಯ ಮಹಾನಗರ ಪಾಲಿಕೆಯಲ್ಲಿ ರಾಷ್ಟ್ರೀಯ ಪಕ್ಷಗಳಿಂದಲೇ ಕನ್ನಡಿಗರಿಗೆ ಹಾಗೂ ಕನ್ನಡ ಹೋರಾಟಗಾರರ ಮುಖ್ಯ ಉದ್ದೇಶಕ್ಕೆ ಮಾರಕವಾಗಲಿದೆಯೇ? ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ನೋಡಿದಾಗ ಈ ಅನುಮಾನ ಪ್ರತಿಯೊಬ್ಬರನ್ನು ಬಲವಾಗಿ ಕಾಡುತ್ತಿದೆ.

ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ನಂತರ ಅಭ್ಯರ್ಥಿಗಳ ಪಟ್ಟಿಯಲ್ಲಿ ಮರಾಠಿ ಭಾಷಿಕರಿಗೆ ಪ್ರತಿಶತ 70 ರಿಂದ 80 ಸ್ಥಾನಗಳನ್ನು ನೀಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಸಾಲದ್ದಕ್ಕೆ ಈಗ ಕನ್ನಡ ಭಾಷಿಕರ ಜೊತೆಗೆ ಲಿಂಗಾಯತ ಸಮಾಜದ ಸದಸ್ಯರು ಸಹ ಬಿಜೆಪಿ ಮತ್ತು ಕಾಂಗ್ರೆಸ್‌ ವಿರುದ್ಧ ತಿರುಗಿಬಿದ್ದಿದ್ದಾರೆ. ಅದರಲ್ಲೂ ನಮ್ಮದು ಭಿನ್ನವಾದ ಪಕ್ಷ. ಕನ್ನಡ ಹಿತ ಮುಖ್ಯ ಎಂದು ಹೇಳುತ್ತಲೇ ಬಂದಿದ್ದ ಬಿಜೆಪಿ ಮೇಲೆ ಕನ್ನಡ ಹೋರಾಟಗಾರರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಶಿವಸೇನೆ ವಿರುದ್ಧ ಕನ್ನಡದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್‌ ಒಗ್ಗಟ್ಟಾಗಬೇಕು. ಆದರೆ ಇಲ್ಲಿಯೂ ರಾಜಕೀಯ ಪೈಪೋಟಿ ಕಂಡರೆ ಮತಗಳ ವಿಭಜನೆಯಾಗಿ ಅದರ ಲಾಭ ನಾಡವಿರೋಧಿಗಳಿಗೆ ಆಗಲಿದೆ ಎಂಬುದು ಕನ್ನಡ ಹೋರಾಟಗಾರರ ಆತಂಕ. ಇದಕ್ಕೆ ರಾಜಕೀಯ ಪಕ್ಷಗಳು ಎಷ್ಟರ ಮಟ್ಟಿಗೆ ಸ್ಪಂದಿಸುತ್ತವೆ ಎಂಬುದು ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ.

ಟಿಕೆಟ್‌ ಹಂಚಿಕೆ ವಿಷಯದಲ್ಲಿ ಶಾಸಕರೊಬ್ಬರ ಏಕಪಕ್ಷೀಯ ನಿರ್ಧಾರ ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಇದೇ ಕಾರಣದಿಂದ ಜಿಲ್ಲೆಯ ರಾಜಕಾರಣಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಚುನಾವಣಾ ಕಾರ್ಯದಿಂದ ದೂರ ಉಳಿದಿದ್ದಾರೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.

ಕನ್ನಡಕ್ಕೆ ಧಕ್ಕೆಯಾಗುವ ಆತಂಕ: ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಟಿಕೆಟ್‌ ಹಂಚಿಕ ಮಾಡಿರುವುದು ಪಕ್ಷಗಳಲ್ಲಿ ಅಸಮಾಧಾನ ಹುಟ್ಟಿಸಿದ್ದು ಒಂದು ಕಡೆಯಾದರೆ ಇನ್ನೊಂದು ಕಡೆ ಕನ್ನಡ ಹೋರಾಟಗಾರರಲ್ಲಿ ಆತಂಕ ಮೂಡಿಸಿದೆ. ಕಾರಣ ಟಿಕೆಟ್‌ ಹಂಚಿಕೆಯಲ್ಲಿ ಕನ್ನಡಿಗರನ್ನು ಕಡೆಗಣಿಸಿರುವದು. ಅದರಲ್ಲೂ ಬಿಜೆಪಿಯಲ್ಲಿ ಬಹುತೇಕ ಮರಾಠಿ ಭಾಷಿಕರಿಗೆ ಮಣೆ ಹಾಕಿರುವುದು ಸಾಕಷ್ಟು ಚರ್ಚೆ ಮತ್ತು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಗಡಿ ಮತ್ತು ಭಾಷೆಯ ಹೆಸರಿನಲ್ಲಿ ಸದಾ ಕಾಲು ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಐಎಸ್‌) ಮತ್ತು ಶಿವಸೇನೆಯನ್ನು ನಿಯಂತ್ರಣದಲ್ಲಿಡಲು ಮಹಾನಗರಪಾಲಿಕೆಯಲ್ಲಿ ಕನ್ನಡಿಗರ ಅಧಿಪತ್ಯ ಅಗತ್ಯವಾಗಿದೆ. ಆದರೆ ಈಗ ಎರಡು ಪಕ್ಷಗಳ ನಡುವಣ ತುರುಸಿನ ಸ್ಪರ್ಧೆಯಲ್ಲಿ ಗಡಿಯಲ್ಲಿ ಕನ್ನಡದ ಅಸ್ಮಿತೆಗೆ ಧಕ್ಕೆಯಾಗುವ ಹಾಗೂ ಕರ್ನಾಟಕದ ಹಿತ ಬಲಿಯಾಗುವ ಕಳವಳ ಕನ್ನಡಿಗರಲ್ಲಿ ಕಂಡಿದೆ. ಎಂಇಎಸ್‌ ವಿರುದ್ಧ ನಿಲುವು ತಳೆಯಲು ಪಕ್ಷಗಳು ಒಗ್ಗಟ್ಟಾಗಬೇಕಾಗುತ್ತದೆ. ಪೈಪೋಟಿಯ ಕಾರಣಕ್ಕೆ ಮತ ವಿಭಜನೆಯಾದರೆ ಕನ್ನಡ ವಿರೋಧಿ ಎಂಇಎಸ್‌ ಮತ್ತು ಶಿವಸೇನೆಗೆ ಲಾಭವಾಗುವ ಸಾಧ್ಯತೆ ಇದೆ.

ಮುಖ್ಯವಾಗಿ ಎಂಇಎಸ್‌ ಈಗ ಸಾಕಷ್ಟು ದುರ್ಬಲವಾಗಿದೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅದಕ್ಕೆ ಶಕ್ತಿ ತುಂಬಲು ಅವಕಾಶ ಕೊಡಬಾರದು. ತಮ್ಮ ರಾಜಕೀಯ ಜಗಳದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕನ್ನಡವನ್ನು ಬಲಿಕೊಡಬಾರದು. ಪಕ್ಷಗಳ ಚುನಾವಣಾ ಕಾರ್ಯಸೂಚಿಯಲ್ಲಿ ಕನ್ನಡಕ್ಕೆ ಆದ್ಯತೆ ಸಿಗಬೇಕು ಎಂಬುದು ಕನ್ನಡ ಸಂಘಟನೆಗಳ ಆಗ್ರಹ. ಕಾಂಗ್ರೆಸ್‌ ಮತ್ತು ಬಿಜೆಪಿ ರಾಜಕೀಯ ಹೋರಾಟದ ನಡುವೆ ಶಿವಸೇನೆ ಮತ್ತು ಎಂಇಎಸ್‌ ಮಹಾನಗರಪಾಲಿಕೆ ಎದುರು ಕನ್ನಡ ಹೋರಾಟಗಾರರು ಕನ್ನಡ ಬಾವುಟ ಹಾರಿಸಿದ ವಿಷಯವನ್ನು ಚುನಾವಣೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಇದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‌ ಒಂದಾಗಿ ಉತ್ತರ ನೀಡಬೇಕು ಎಂಬುದು ಹೋರಾಟಗಾರರ ಒತ್ತಾಸೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.