ಅಮರನಾಥದಲ್ಲಿ ಹವಾಮಾನ ವೈಪರೀತ್ಯಕ್ಕೆ ಹೈರಾಣಾದ ಬೆಳಗಾವಿಯ ಪ್ರವಾಸಿಗರು


Team Udayavani, Jul 11, 2022, 3:07 PM IST

9

ಬೆಳಗಾವಿ: ಪ್ರಸಿದ್ಧ ಯಾತ್ರಾ ಸ್ಥಳ ಅಮರನಾಥ ದರ್ಶನಕ್ಕೆ ತೆರಳಿರುವ ಬೆಳಗಾವಿಯ 32 ಜನರ ತಂಡ ಹವಾಮಾನ ವೈಪರೀತ್ಯದಿಂದಾಗಿ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಶೇಷನಾಗದಿಂದ ಮರಳಿ ಪೆಹಲಗಾಮ್‌ ಎಂಬ ಪ್ರದೇಶಕ್ಕೆ ವಾಪಸ್ಸಾಗಿದ್ದು, ಮೇಘ ಸ್ಪೋಟ ಆಗಿ ಗುಡ್ಡ ಕುಸಿತಗೊಂಡಿರುವ ಮಾರ್ಗ ಬಂದ್‌ ಮಾಡಿದ್ದರಿಂದ ದರ್ಶನಕ್ಕಾಗಿ ಇನ್ನೂ 2-3 ದಿನ ಕಾಯಬೇಕಾಗಿದೆ.

ಶೇಷನಾಗ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಈ ಪ್ರದೇಶದಲ್ಲಿ ಆಮ್ಲಜನಕ ಕೊರತೆ ಉಂಟಾಗುತ್ತಿದ್ದು, ಹೀಗಾಗಿ ಆರೋಗ್ಯದಲ್ಲಿ ಏರುಪೇರು ಆಗುತ್ತಿರುವುದರಿಂದ ಬೆಳಗಾವಿಯ ಈ 32 ಪ್ರವಾಸಿಗರು ವಾಪಸ್‌ ಬಂದಿದ್ದು, ಈ ಬಗ್ಗೆ ರವಿವಾರ ಸಂಜೆ ಉದಯವಾಣಿಯೊಂದಿಗೆ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಶೇಷನಾಗ ಪ್ರದೇಶದಲ್ಲಿ ವಿಪರೀತ ಸಮಸ್ಯೆ ಆಗುತ್ತಿದೆ. ಜು. 8ರಿಂದ ಇಲ್ಲಿಯೇ ವಾಸ್ತವ್ಯ ಮಾಡಲಾಗಿತ್ತು. ನಡೆದುಕೊಂಡು ಗುಡ್ಡ ಹತ್ತುವಾಗ ಉಸಿರಾಟ ಸಮಸ್ಯೆ ಆಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಇಲ್ಲಿ ಉಳಿದುಕೊಂಡು ದರ್ಶನಕ್ಕಾಗಿ ಕಾಯುವುದು ಕಷ್ಟಕರವಾಗಿದೆ. ಹೀಗಾಗಿ ನಾವೆಲ್ಲರೂ ಶೇಷನಾಗದಿಂದ ಪೆಹಲಗಾಮ್‌ಕ್ಕೆ ರವಿವಾರ ಬೆಳಗ್ಗೆ 10:30ಕ್ಕೆ ಅಲ್ಲಿಂದ ಬಿಟ್ಟು ಕಾಲ್ನಡಿಗೆಯಲ್ಲಿ ಸಂಜೆ 4:30ರ ಸುಮಾರಿಗೆ ಮರಳಿದ್ದೇವೆ ಎಂದು ಬೆಳಗಾವಿ ನಗರದ ಪಾಟೀಲ ಗಲ್ಲಿಯ ಎಸ್‌ಬಿಐ ಶಾಖೆಯ ಅಧಿಕಾರಿ ಮಾರುತಿ ಬಂಬರಗೇಕರ ಉದಯವಾಣಿಗೆ ತಿಳಿಸಿದರು.

ಪೆಹಲಗಾಮ್‌ಕ್ಕೆ ಮರಳಿದ 32 ಮಂದಿ: ಈ ಪ್ರದೇಶದಲ್ಲಿ ವಿಪರೀತ ಮಳೆ ಆಗುತ್ತಿದೆ. ಶೇಷನಾಗದಲ್ಲಿ ಉಚಿತ ಊಟ, ಉಪಹಾರ ಸಿಗುತ್ತಿದೆ. ಆದರೆ ನಿನ್ನೆಯಿಂದ ಅಲ್ಲಿಯೂ ಅಸ್ತವ್ಯಸ್ಥವಾಗುತ್ತಿದೆ. ಶೇಷನಾಗದಿಂದ ಕೆಲವೇ ಅಂತರದಲ್ಲಿ ಅಮರನಾಥ ದೇವಸ್ಥಾನ ಇದೆ. ಆದರೆ ಅಲ್ಲಿಗೆ ಹೋಗಲು ಇನ್ನೂ ಮಾರ್ಗ ಆರಂಭಗೊಂಡಿಲ್ಲ. ಗುಡ್ಡ ಕುಸಿತಗೊಂಡು ದುರ್ಘ‌ಟನೆ ಸಂಭವಿಸಿದ ಸ್ಥಳದಲ್ಲಿ ಸೇತುವೆ ನಿರ್ಮಾಣ ಇನ್ನೂ ಆಗಿಲ್ಲ. ಈ ಕೆಲಸ ಮುಗಿಯಲು ಇನ್ನೂ 2-3 ದಿನ ಬೇಕಾಗುತ್ತದೆ. ಹೀಗಾಗಿ ನಾವು ಕಾಯುವುದು ಸೂಕ್ತ ಅಲ್ಲ ಎಂಬ ಕಾರಣಕ್ಕೆ ಪೆಹಲಗಾಮ್‌ ಎಂಬ ಪ್ರದೇಶಕ್ಕೆ ಬಂದಿದ್ದೇವೆ. ಸೋಮವಾರದಿಂದ ದರ್ಶನ ಆರಂಭಗೊಂಡರೆ ದರ್ಶನ ಪಡೆಯಲು ಮತ್ತೆ ಪಾದಯಾತ್ರೆ ನಡೆಸುವುದಾಗಿ ವಿವರಿಸಿದರು.

ಬಹುತೇಕ ಪ್ರವಾಸಿಗರು ಪೆಹಲಗಾಮ್‌ದಲ್ಲಿಯೇ ಉಳಿದುಕೊಂಡಿದ್ದಾರೆ. ದರ್ಶನಕ್ಕೆ ಅವಕಾಶ ಇಲ್ಲದ್ದಕ್ಕೆ ಶೇ. 90ರಷ್ಟು ಪ್ರವಾಸಿಗರು ಪೆಹಲಗಾಮ್‌ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶೇಷನಾಗದಲ್ಲಿ ನಾವು 32 ಜನ ಉಳಿದುಕೊಳ್ಳಲು ಪ್ರತಿಯೊಬ್ಬರಿಗೆ ತಲಾ 500 ರೂ. ರೂಮ್‌ ಬಾಡಿಗೆ ಕೊಟ್ಟಿದ್ದೇವೆ. ಮರುದಿನ ಮತ್ತೆ ಉಳಿದುಕೊಳ್ಳಬೇಕಾಗಿದ್ದರಿಂದ ಬಿಎಸ್‌ಎಫ್‌ ಕ್ಯಾಂಪ್‌ ಸೈನಿಕರ ನಿರ್ದೇಶನದಂತೆ ಎರಡನೇ ದಿನದ ಬಾಡಿಗೆ ಪಡೆದುಕೊಳ್ಳಲಿಲ್ಲ ಎಂದು ಮಾರುತಿ ಬಂಬರಗೇಕರ ತಿಳಿಸಿದರು.

ವಿಪರೀತ ಮಳೆ ಆಗುತ್ತಿರುವುದರಿಂದ ಹವಾಮಾನ ವೈಪರೀತ್ಯದಿಂದಾಗಿ ಸದ್ಯ ಹೆಲಿಕಾಪ್ಟರ್‌ ವ್ಯವಸ್ಥೆಯೂ ಬಂದ್‌ ಮಾಡಲಾಗಿದೆ. ಇಂಥ ಒಂದು ಸಂದಿಗ್ಧ ಸ್ಥಿತಿಯಲ್ಲಿ ಗುಡ್ಡ ಏರಿ ನಡೆದುಕೊಂಡು ಹೋಗುವುದು ಅಸಾಧ್ಯ. ಹೀಗಾಗಿ ಸರ್ಕಾರ ಈ ಮಾರ್ಗ ಬಂದ್‌ ಮಾಡಿದೆ. ಸೋಮವಾರದಿಂದ ವೀರನಾಗ ಕಡೆಗೆ ತೆರಳುವ ಮಾರ್ಗದಿಂದ ದರ್ಶನ ಶುರುವಾಗುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ. ಸಾಧ್ಯವಾದರೆ ದರ್ಶನ ಪಡೆದುಕೊಂಡು ಬೆಳಗಾವಿಗೆ ವಾಪಸ್‌ ಆಗುತ್ತೇವೆ ಎನ್ನುತ್ತಾರೆ ಶಿವಾಜಿ ಮಂಡೋಳಕರ.

ನಮ್ಮ ಕಣ್ಣೆದುರು 3 ಶವ ಎತ್ತಿಕೊಂಡು ಹೋದರು ಶೇಷನಾಗ ಪ್ರದೇಶದಲ್ಲಿ ಗುಡ್ಡ ಹತ್ತುವಾಗ ಉಸಿರಾಟದ ತೊಂದರೆ ಬಹಳಷ್ಟು ಜನರಿಗೆ ಆಗಿದೆ. ಇದರ ಅನುಭವ ನಮ್ಮ ಗುಂಪಿನ ಬಹುತೇಕರಿಗೆ ಆಗಿದೆ. ಹೀಗಾಗಿ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ವಾಪಸ್‌ ಪೆಹಲಗಾಮ್‌ಕ್ಕೆ ಬಂದಿದ್ದೇವೆ. ಹೃದಯಾಘಾತ ಹಾಗೂ ಉಸಿರಾಟದ ತೊಂದರೆಯಿಂದ ಮೂವರು ಮೃತಪಟ್ಟಿದ್ದಾರೆ. ಮೂವರ ಮೃತದೇಹಗಳನ್ನು ಎತ್ತಿಕೊಂಡು ತರುತ್ತಿರುವುದು ನಮ್ಮ ಕಣ್ಣೆದುರು ನೋಡಿ ಆತಂಕಗೊಂಡಿದ್ದೇವೆ ಎಂದು ಮಹಾನಗರ ಪಾಲಿಕೆ ಸದಸ್ಯ ಶಿವಾಜಿ ಮಂಡೋಳಕರ ತಿಳಿಸಿದರು. ಕುದುರೆ, ಕಾಲ್ನಡಿಗೆಯಲ್ಲಿ ವಾಪಸ್‌ ಶೇಷನಾಗದಿಂದ ಪೆಹಲಗಾಮ್‌ ದೂರ 16 ಕಿ.ಮೀ. ಕ್ರಮಿಸುವುದು ಕಷ್ಟಕರ. ನಮ್ಮ ತಂಡದಲ್ಲಿಯ ಕೆಲವರು ಕುದುರೆ ಸಹಾಯದಿಂದ ಬಂದರೆ ಇನ್ನುಳಿದವರು ಕಾಲ್ನಡಿಗೆಯಲ್ಲಿ ಬಂದಿದ್ದೇವೆ. 6 ಕಿ.ಮೀವರೆಗೆ ಪಿಶುಟಾಪ್‌ ಎಂಬ ಗ್ರಾಮದವರೆಗೆ ವಿಪರೀತ ಮಳೆ ಇತ್ತು. ಇಲ್ಲಿಂದ ಚಂದನವಾಡಿ 3 ಕಿ.ಮೀ. ಅಂತರವಿದೆ. ಅಲ್ಲಿಂದ ಸ್ವಲ್ಪ ಅಂತರದಲ್ಲಿ ಬಂದಾಗ ತುಸು ಮಳೆ ಕಡಿಮೆ ಇದೆ ಎಂದು ಎಸ್‌ಬಿಐ ಅಧಿಕಾರಿ ಮಾರುತಿ ಬಂಬರಗೇಕರ ತಿಳಿಸಿದರು.

ಮೊಬೈಲ್‌ ಸಂಪರ್ಕ ಕಡಿತ

ನಮ್ಮ ತಂಡದಲ್ಲಿಯ ಒಬ್ಬ ವ್ಯಕ್ತಿ ಕುದುರೆ ಏರಿ ಮುಂದೆ ಸಾಗಿದ್ದಾರೆ. ನಾವು ಹಿಂದಿನಿಂದ ಬರುತ್ತಿದ್ದೇವೆ ಎಂದುಕೊಂಡು ಕುದುರೆಯಲ್ಲಿ ಪಂಚಕರಣಿವರೆಗೆ ಹೋಗಿದ್ದಾರೆ. ಮೊಬೈಲ್‌ ಸಂಪರ್ಕ ಸಾಧ್ಯವಾಗದ್ದಕ್ಕೆ ಬಹಳ ಕಷ್ಟವಾಯಿತು. ಇಲ್ಲಿ ಪೋಸ್ಟಪೇಯ್ಡ್ ಮೊಬೈಲ್‌ ನೆಟ್‌ವರ್ಕ್‌ ಮಾತ್ರ ಲಭ್ಯ ಆಗುತ್ತಿವೆ. ಪಂಜಾಬ್‌ನ ಪ್ರವಾಸಿಗರ ಮೂಲಕ ಅವರ ಮೊಬೆ„ಲ್‌ದಿಂದ ಸಂಪರ್ಕ ಮಾಡಿ ಪಂಚಕರಣಿಯಿಂದ 7-8 ಸಾವಿರ ರೂ. ನೀಡಿ ಕುದುರೆ ಸಹಾಯದಿಂದ ಮತ್ತೆ ವಾಪಸ್‌ ಆಗಿದ್ದಾರೆ ಎಂದು ಮಾರುತಿ ಬಂಬರಗೇಕರ ತಿಳಿಸಿದರು.

-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.