ಸತ್ತನೆಂದು ಮಣ್ಣಾದವ ಊಟಕ್ಕಾಗಿ ಕರೆ ಮಾಡಿದ!
ಕೋವಿಡ್ ಚಿಕಿತ್ಸೆಗೆ ದಾಖಲಾಗಿದ್ದ ಪಾಯಪ್ಪ
Team Udayavani, May 4, 2021, 5:29 PM IST
ಬೆಳಗಾವಿ: ಕೊರೊನಾ ಸೋಂಕಿನಿಂದ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಮೃತಪಟ್ಟಿದ್ದಾನೆ ಎಂದು ಹೇಳಿ ಅವರ ಕುಟುಂಬದವರಿಗೆ ಬೇರೆ ಮೃತದೇಹ ನೀಡಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿದ ಘಟನೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ.
ಮೋಳೆ ಗ್ರಾಮದ ಪಾಯಪ್ಪ ಸತ್ಯಪ್ಪ ಹಳ್ಳೋಳ್ಳಿ (82) ಸತ್ತು ಬದುಕಿದ ವ್ಯಕ್ತಿ! ಈ ವೃದ್ಧ ಕೆಲ ಹೊತ್ತಿನ ನಂತರ ಮನೆಯವರಿಗೆ ಕರೆ ಮಾಡಿ “ಇನ್ನೂ ಏಕೆ ಊಟ ತಂದು ಕೊಟ್ಟಿಲ್ಲ’ ಎಂದು ಕೇಳಿದಾಗ ಆಸ್ಪತ್ರೆ ಸಿಬ್ಬಂದಿ ಅಚಾತುರ್ಯ ಬೆಳಕಿಗೆ ಬಂದಿದೆ.
ಸೋಮವಾರ ಬೆಳಗ್ಗೆ ಮೋಳೆ ಗ್ರಾಮಕ್ಕೆ ಆಗಮಿಸಿದ ಬೆಳಗಾವಿ ಖಾಸಗಿ ಆಸ್ಪತ್ರೆ ಸಿಬ್ಬಂದಿ, ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಹಾಗೂ ಕಾಗವಾಡ ಪಿಐ ಹಣಮಂತ ಧರ್ಮಟ್ಟಿ, ಉಪ ತಹಶೀಲ್ದಾರ್ ಅಣ್ಣಪ್ಪ ಕೋರೆ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ಮಾಡಿದ್ದ ಮೃತದೇಹವನ್ನು ಹೊರ ತೆಗೆಯಲಾಗಿದೆ.
ಗೋಕಾಕ ತಾಲೂಕಿನ ಗ್ರಾಮವೊಂದರ ಕುಟುಂಬದವರಿಗೆ ಸೇರಿದ ವ್ಯಕ್ತಿಯ ಈ ಮೃತದೇಹವನ್ನು ಹಸ್ತಾಂತರಿಸಲಾಗಿದೆ ಎಂಬುದು ತಿಳಿದು ಬಂದಿದೆ.
ಏನಿದು ಘಟನೆ?:
ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ವೃದ್ಧ ಪಾಯಪ್ಪ ಚಿಕಿತ್ಸೆ ಪಡೆಯುತ್ತಿದ್ದ. ಮೇ 1ರಂದು ಈ ವೃದ್ಧ ಮೃತಪಟ್ಟಿರುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಆಗ ಕುಟುಂಬದ ನಾಲ್ವರು ಪಿಪಿಇ ಕಿಟ್ ಧರಿಸಿ ಮೃತ ದೇಹವನ್ನು ತಂದು ಪ್ಯಾಕ್ ಓಪನ್ ಮಾಡದೇ ತಮ್ಮ ಹೊಲದಲ್ಲಿ ಕೋವಿಡ್ ನಿಯಮವಾಳಿ ಪ್ರಕಾರ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಮೃತದೇಹದ ಮುಖ ನೋಡದೆ ವಿಧಿವಿಧಾನ ನಡೆಸಿದ್ದಾರೆ. ನಂತರ ಒಂದು ತಾಸಿನ ಬಳಿಕ ಆಸ್ಪತ್ರೆಯ ನರ್ಸ್ ಮೊಬೈಲ್ ಪಡೆದು ವೃದ್ಧ ಪಾಯಪ್ಪ ಮನೆಯವರಿಗೆ ಕರೆ ಮಾಡಿ, “ನನಗೆ ಊಟ ಏಕೆ ತಂದು ಕೊಟ್ಟಿಲ್ಲ’ ಎಂದು ಕೇಳಿದಾಗ ಮನೆಯವರು ಹೌಹಾರಿದ್ದಾರೆ. ದಿಗ್ಭ್ರಮೆಗೊಂಡು ಆಸ್ಪತ್ರೆಯವರನ್ನು ವಿಚಾರಿಸಿದಾಗ ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ