ಬೆಳವಟ್ಟಿಯಲ್ಲಿ ಕಂಡಿದ್ದು ಬೆಳಗಾವಿ ಚಿರತೆನಾ?

ರೇಸ್‌ ಕೋರ್ಸ್‌ ಮೈದಾನದ ಗೋಡೆ ಹಾರಿ ಹೋಗಿದ್ದನ್ನು ನೋಡಿದ್ದಾಗಿ ಕೆಲವರು ಹೇಳುತ್ತಿದ್ದಾರೆ.

Team Udayavani, Aug 18, 2022, 5:35 PM IST

ಬೆಳವಟ್ಟಿಯಲ್ಲಿ ಕಂಡಿದ್ದು ಬೆಳಗಾವಿ ಚಿರತೆನಾ?

ಬೆಳಗಾವಿ: ಜಾಧವ ನಗರದಲ್ಲಿ ಕಾರ್ಮಿಕನ ಮೇಲೆ ದಾಳಿ ನಡೆಸಿ ಗಾಲ್ಫ್ ಮೈದಾನದಲ್ಲಿ ಅವಿತುಕೊಂಡಿರುವ ಚಿರತೆ ಇನ್ನೂ ಪ್ರತ್ಯಕ್ಷವಾಗಿಲ್ಲ. ಗಾಲ್ಫ್  ಮೈದಾನದಿಂದ ಸುಮಾರು 18 ಕಿ.ಮೀ. ದೂರದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಅದು ಇದೇ ಚಿರತೆಯೋ ಅಥವಾ ಮತ್ತೊಂದು ಚಿರತೆಯೋ ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಆ. 5ರಂದು ಬೆಳಗಾವಿಯ ಜಾಧವ ನಗರದಲ್ಲಿ ಮಧ್ಯಾಹ್ನ 12 ಗಂಟೆಗೆ ಕಾಣಿಸಿಕೊಂಡ ಚಿರತೆ ಕಟ್ಟಡ ಕಾರ್ಮಿಕನ ಮೇಲೆ ದಾಳಿ ಮಾಡಿ ಮಾಯವಾಗಿದೆ. ಇದರ ಶೋಧಕ್ಕೆ ಹಗಲು ರಾತ್ರಿ ಎನ್ನದೇ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದು ಬಿಟ್ಟರೆ ಇನ್ನೂ ಚಿರತೆ ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕ ಹೆಚ್ಚಾಗುತ್ತಿದೆ. ಚಿರತೆಯ ಶೋಧಕ್ಕಾಗಿ ಅರಣ್ಯ ಇಲಾಖೆ ನಡೆಸಿರುವ ಪ್ರಯತ್ನಗಳಿಗೆ ಇನ್ನೂ ಫಲ ಸಿಕ್ಕಿಲ್ಲ. ಆದರೆ ಇನ್ನೂ ಪ್ರಯತ್ನ ಮುಂದುವರಿದಿದೆ. ಚಿರತೆಯ ಭಯದಿಂದಾಗಿ ರಜೆ ನಿಇಡಿದ್ದ 22 ಶಾಲೆಗಳು ಆ. 16ರಿಂದ ಪುನರಾರಂಭಗೊಂಡಿವೆ. ಆದರೆ ಪಾಲಕರು ಮತ್ತು ಮಕ್ಕಳಲ್ಲಿ ಭಯ ದೂರವಾಗಿಲ್ಲ.

ಆ. 13ರಿಂದ ಆ. 16ರ ವರೆಗೂ ಹಿಂಡಲಗಾ ರಸ್ತೆಯಲ್ಲಿರುವ ಗಾಲ್ಫ್ ಮೈದಾನದಿಂದ ಚಿರತೆ ಅತ್ತಿತ್ತ ಓಡಾಡಿದ ಬಗ್ಗೆ ವದಂತಿ ಹಬ್ಬುತ್ತಲೇ ಇವೆ. ರಾತ್ರಿ 12ರ ಸುಮಾರಿಗೆ ರೇಸ್‌ ಕೋರ್ಸ್‌ ಮೈದಾನದ ಗೋಡೆ ಹಾರಿ ಹೋಗಿದ್ದನ್ನು ನೋಡಿದ್ದಾಗಿ ಕೆಲವರು ಹೇಳುತ್ತಿದ್ದಾರೆ. ಆದರೆ ಪೊಲೀಸರ ಎದುರಾಗಲೀ ಅಥವಾ ಅರಣ್ಯ ಇಲಾಖೆ ಅಧಿ ಕಾರಿಗಳ ಎದುರು ಯಾರೂ ಹೇಳಲು ಮುಂದೆ ಬರುತ್ತಿಲ್ಲ.

ತಾಲೂಕಿನ ಪಶ್ಚಿಮ ಭಾಗದ ಬೆಳವಟ್ಟಿ ಗ್ರಾಮದ ಹೊಲದಲ್ಲಿ ಚಿರತೆ ನೋಡಿರುವ ಬಗ್ಗೆ ಶಿವಾಜಿ ನಲವಡೆ ಎಂಬ ರೈತ ದಂಪತಿ ಹೇಳುತ್ತಿದ್ದಾರೆ. ತಮ್ಮ ಮೊಬೆ„ಲ್‌ನಲ್ಲಿ ಇದರ ಫೋಟೋ ತೆಗೆದಿದ್ದಾರೆ. ಬೆಳವಟ್ಟಿ ಹಾಗೂ ಸುತ್ತಮುತ್ತಲಿನ ಅನೇಕ ಗ್ರಾಮಸ್ಥರೂ ಬೆಳವಟ್ಟಿ ಬಳಿಯ ಕವಳೇವಾಡಿ ಕ್ರಾಸ್‌ ಹತ್ತಿರ ಇರುವ ನಲವಡೆ ಅವರ ಹೊಲದಲ್ಲಿ ಚಿರತೆ ಕಾಣಿಸಿಕೊಂಡಿದ್ದನ್ನು ಹೇಳುತ್ತಿದ್ದಾರೆ. ಶಿವಾಜಿ ನಲವಡೆ ಅವರು ರವಿವಾರ ಬೆಳಗ್ಗೆ ಪತ್ನಿಯೊಂದಿಗೆ ಹೊಲಕ್ಕೆ ಹೋದಾಗ ಚಿರತೆ ಕಾಣಿಸಿದೆ.

ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಬೆಳಗಾವಿಯಲ್ಲಿ ಮಾಯವಾಗಿರುವ ಚಿರತೆ ಬೆಳವಟ್ಟಿಯನ್ನು ತಲುಪಲು 15ರಿಂದ 20 ನಿಮಿಷ ಬೇಕಾಗುತ್ತದೆ. ಶಿವಾಜಿ ಅವರು ಫೋಟೊ ತೆಗೆದ ನಂತರ ಆ ಚಿರತೆ ಅಲ್ಲಿಂದ ಕಬ್ಬಿನ ಬೆಳೆಯಲ್ಲಿ ನುಸುಳಿಕೊಂಡು ಹೋಗಿದೆ. ಗಾಲ್ಫ್ ಕ್ಲಬ್‌ ಚಿರತೆಯೇ ಬೆಳವಟ್ಟಿಗೆ ಹೋಗಿದೆಯೊ ಅಥವಾ ಬೇರೆ ಮತ್ತೂಂದು ಚಿರತೆ ಅಲ್ಲಿ ಕಾಣಿಸಿಕೊಂಡಿದೆಯೋ ಎಂಬುದರ ಬಗ್ಗೆ ನಿಖರವಾಗಿ ಗೊತ್ತಾಗುತ್ತಿಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.