ಬೆಳಗಾವಿ: ಸಾರಥಿ ನಗರದಲ್ಲಿ ಮಸೀದಿ ತೆರವು ವಿವಾದ

ನಂಬರ್‌ ಪ್ಲೇಟ್‌ ಇಲ್ಲದ ದ್ವಿಚಕ್ರ ವಾಹನಗಳಲ್ಲಿ ಬಂದು ಬೆದರಿಸುತ್ತಿದ್ದಾರೆ.

Team Udayavani, Jan 11, 2023, 6:21 PM IST

ಬೆಳಗಾವಿ: ಸಾರಥಿ ನಗರದಲ್ಲಿ ಮಸೀದಿ ತೆರವು ವಿವಾದ

ಬೆಳಗಾವಿ: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗ ಬೆಳಗಾವಿಯಲ್ಲಿಯೂ ಧರ್ಮ ದಂಗಲ್‌ ಶುರುವಾಗಿದ್ದು, ಇಲ್ಲಿಯ ಸಾರಥಿ ನಗರದಲ್ಲಿ ವಸತಿ ನಿವೇಶನಕ್ಕೆ ಅನುಮತಿ ಪಡೆದು ಮಸೀದಿ ನಿರ್ಮಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಈ ಅನ ಧಿಕೃತ ಮಸೀದಿ ತೆರವಿಗೆ ಪಟ್ಟು ಹಿಡಿದಿವೆ.

ಬೆಳಗಾವಿ ಗ್ರಾಮಿಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಸಾರಥಿ ನಗರದಲ್ಲಿ ಕರ್ನಾಟಕ ಸರ್ಕಾರದ ವಾಹನ ಚಾಲಕರ ಕೇಂದ್ರ ಸಂಘದ ವತಿಯಿಂದ ಖಾಸಗಿ ಲೇಔಟ್‌ ನಿರ್ಮಿಸಲಾಗಿದೆ. ನಿವೇಶನ ಸಂಖ್ಯೆ 19ನ್ನು ಮೂಲ ಮಾಲೀಕರು ಮೌಲಾನಾ ಅಬ್ದುಲ್‌ ಕಲಾಂ ಎಜ್ಯುಕೇಶನಲ್‌ ಹಾಗೂ ಚಾರಿಟೇಬಲ್‌ ಸೊಸೈಟಿಗೆ ಕೊಡುಗೆಯಾಗಿ ನೀಡಿದ್ದು, ಇಲ್ಲಿ ಫಾತಿಮಾ ಮಸೀದಿ ನಿರ್ಮಿಸಲಾಗಿದೆ.

ನಿವೇಶನ ಸ್ಥಳದಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣ ಮಾಡಲಾಗುತ್ತಿದ್ದು, ಇದನ್ನು ತೆರವುಗೊಳಿಸುವಂತೆ ಸ್ಥಳೀಯರು ಕೆಲ ತಿಂಗಳಿಂದ ಹೋರಾಟ ಮಾಡುತ್ತ ಬಂದಿದ್ದಾರೆ. ಈ ಬಗ್ಗೆ ಮಹಾನಗರ ಪಾಲಿಕೆ ಆಯುಕ್ತರಿಗೂ ದೂರು ನೀಡಿದ್ದಾರೆ. ಅಕ್ರಮವಾಗಿರುವ ಮಸೀದಿಯನ್ನು ತೆರವುಗೊಳಿಸುವುದಾಗಿ ಆಯುಕ್ತರು ಮೌಖಿಕವಾಗಿ ಭರವಸೆ ನೀಡಿ ಕಳುಹಿಸಿದ್ದರು.

ಹೊಸ ವಿವಾದ ಸೃಷ್ಟಿ: ದಿನದಿಂದ ದಿನಕ್ಕೆ ಈ ವಿವಾದ ಬೆಳಗಾವಿಯಲ್ಲಿ ತಾರಕಕ್ಕೇರುತ್ತಿದ್ದು, ಜಿಲ್ಲಾಡಳಿತ ಮಸೀದಿ ತೆರವುಗೊಳಿಸದಿದ್ದರೆ ನಾವೇ ಸ್ವತಃ ಅಲ್ಲಿಗೆ ನುಗ್ಗಿ ನೆಲಸಮಗೊಳಿಸುವುದಾಗಿ ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಇದರಿಂದ ಬೆಳಗಾವಿಯಲ್ಲಿ ಹೊಸ ವಿವಾದ ಸೃಷ್ಟಿಯಾಗಿದೆ.

ಸಾರಥಿ ನಗರದಲ್ಲಿ ಮಸಿದಿ ವಿವಾದ ವಿವಾದ ಗರಿಗೆದರುತ್ತಿದ್ದಂತೆ ಹಿಂದೂ ಸಂಘಟನೆಗಳ ಮುಖಂಡರು ಸಭೆ ನಡೆಸಿದ್ದಾರೆ. ಬೆಳಗಾವಿ ಬಿಜೆಪಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ, ಮುಖಂಡರಾದ ದೀಪಾ ಕುಡಚಿ, ಉಜ್ವಲಾ ಬಡವನ್ನಾಚೆ ಸೇರಿದಂತೆ ಅನೇಕರು ಸಭೆ ನಡೆಸಿ ತೀವ್ರ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಸಾರಥಿ ನಗರದಲ್ಲಿ ಮನೆ ನಿರ್ಮಾಣಕ್ಕಾಗಿ
ಅನುಮತಿ ಪಡೆಯಲಾಗಿತ್ತು. ಅದರಂತೆ ಮೊದಲ ಅಂತಸ್ತು ಮನೆಯಾಗಿಯೇ ನಿರ್ಮಾಣಗೊಂಡಿದೆ.

ಎರಡನೇ ಅಂತಸ್ತು ಮಸೀದಿಯಾಗಿ ನಿರ್ಮಾಣಗೊಂಡಿದ್ದರಿಂದ ಸ್ಥಳೀಯ ನಿವಾಸಿಗಳು ತಕರಾರು ತೆಗೆದಿದ್ದಾರೆ. ಆದರೆ ಇದರ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಲಿಲ್ಲ. 2020ರ ಲಾಕ್‌ ಡೌನ್‌ ಸಮಯದಲ್ಲಿ ಸರ್ಕಾರಿ ಕಚೇರಿಗಳು ಬಂದ್‌ ಆಗಿದ್ದಾಗಲೂ ಇದಕ್ಕೆ ಅನುಮತಿ ಪಡೆದುಕೊಳ್ಳಲಾಗಿದೆ. ವಕ್ಫ್  ಬೋರ್ಡ್‌ಗೆ ಇದನ್ನು ಕೊಡುಗೆಯಾಗಿ ನೀಡಲಾಗಿದೆ. ಇದು ಹೇಗೆ ಸಾಧ್ಯವಾಗಿದೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕೂಡಲೇ ಈ ಅನಧಿಕೃತ ಮಸೀದಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಮನವಿ ಆಲಿಸಿದ ಜಿಲ್ಲಾ ಧಿಕಾರಿ ಡಾ|ನಿತೇಶ ಪಾಟೀಲ, ಈ ಬಗ್ಗೆ ಕೂಲಂಕುಷವಾಗಿ ಮಾಹಿತಿ ಪಡೆದುಕೊಳ್ಳಲಾಗುವುದು. ಶಾಂತಿ ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಎಚ್ಚರಿಕೆ ವಹಿಸಲಾಗುವುದು.ಎರಡು ದಿನಗಳಲ್ಲಿ ಸೂಕ್ತ ತೀರ್ಮಾನ
ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ನಿವೇಶನ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದೆ.

ಮೂಲ ಮಾಲೀಕರಿಂದ ಮೌಲಾನಾ ಅಬ್ದುಲ್‌ ಕಲಾಂ ಎಜ್ಯುಕೇಶನಲ್‌ ಹಾಗೂ ಚಾರಿಟೇಬಲ್‌ ಸೊಸೈಟಿಗೆ ಕೊಡುಗೆಯಾಗಿ ನೀಡಲಾಗಿದ್ದು, ಇಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಮುಸ್ಲಿಂ ಮುಖಂಡರ ವಾದವಾಗಿದೆ. ಮಸೀದಿ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಸ್ಥಳಿಯರ ಮನೆಗೆ ನುಗ್ಗಿ ಕೆಲವು ಕಿಡಿಗೇಡಿಗಳು ಬೆದರಿಕೆ ಹಾಕುತ್ತಿದ್ದಾರೆ. ನಂಬರ್‌ ಪ್ಲೇಟ್‌ ಇಲ್ಲದ ದ್ವಿಚಕ್ರ ವಾಹನಗಳಲ್ಲಿ ಬಂದು ಬೆದರಿಸುತ್ತಿದ್ದಾರೆ. ಹಲವು ಸಲ ಈ ಭಾಗದ ಅನೇಕರಿಗೆ ಬೆದರಿಕೆಗಳು ಬಂದಿವೆ. ಇಂತ ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್‌ ಬಜರಂಗ ದಳ ಜಿಲ್ಲಾಧ್ಯಕ್ಷ ಭಾವುಕಣ್ಣ ಲೋಹಾರ ತಿಳಿಸಿದ್ದಾರೆ.

ಏನಿದು ಫಾತಿಮಾ ನಿವೇಶನ ವಿವಾದ?
ವಾಹನ ಚಾಲಕರ ಕೇಂದ್ರ ಸಂಘದ ವತಿಯಿಂದ 2011ರಲ್ಲಿ ಖಾಸಗಿ ಲೇಔಟ್‌ ನಿರ್ಮಾಣಗೊಂಡಿದೆ. 2013ರಲ್ಲಿ ನಿಂಗಪ್ಪ ದನವಾಡೆ ಎಂಬವರು ಪ್ಲಾಟ್‌ ನಂ.19ನ್ನು ಖರೀದಿಸುತ್ತಾರೆ. 2018ರಲ್ಲಿ ಅಬ್ದುಲ್‌ ಅಜೀಜ್‌ ಕಮದೋಡ ಎಂಬವರಿಗೆ ಈ ನಿವೇಶನ ಮಾರಾಟ ಮಾಡುತ್ತಾರೆ. 2018ರಲ್ಲಿ ಅಬ್ದುಲ್‌ ಅಜೀಜ್‌ ಅವರು ಮೌಲಾನಾ ಅಬ್ದುಲ್‌ ಕಲಾಂ ಎಜ್ಯುಕೇಶನಲ್‌ ಹಾಗೂ ಚಾರಿಟೇಬಲ್‌ ಸೊಸೈಟಿಗೆ ದಾನವಾಗಿ ನೀಡುತ್ತಾರೆ. ದಾನ ಪಡೆದ ಜಾಗದಲ್ಲಿ 2020ರಲ್ಲಿ ಈ ಟ್ರಸ್ಟ್‌ನವರು ಮಸೀದಿ ನಿರ್ಮಿಸುತ್ತಾರೆ. ಇದು ವಕ್ಫ್ ಬೋರ್ಡ್‌ ಆಸ್ತಿ ಎಂಬುದಾಗಿ ಮುಸ್ಲಿಂ ಮುಖಂಡರ ವಾದವಾಗಿದೆ. 2022, ಜ.17ರಂದು ಸ್ಥಳೀಯರು ಮಹಾನಗರ ಪಾಲಿಕೆಗೆ ದೂರು ನೀಡುತ್ತಾರೆ. 2022, ಏ.25ರಂದು ಪಾಲಿಕೆ ಆಯುಕ್ತರು ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿದ್ದರು. 7 ದಿನಗಳ ಒಳಗಾಗಿ ಮಸೀದಿ ತೆರವುಗೊಳಿಸಲು ನೋಟಿಸ್‌ ನೀಡಲಾಗಿತ್ತು. ವಸತಿ ಉದ್ದೇಶಿತ ನಿವೇಶನದಲ್ಲಿ ಭೂಬಳಕೆ ಮಾರ್ಗಸೂಚಿ ಉಲ್ಲಂಘನೆ ಆರೋಪ ಕೇಳಿ ಬಂತು.

ಸಾರಥಿ ನಗರದಲ್ಲಿ ನಿವೇಶನಕ್ಕೆಂದು ಅನುಮತಿ ಪಡೆದು ಅನಧಿಕೃತವಾಗಿ ಮಸೀದಿ ನಿರ್ಮಿಸಲಾಗಿದೆ. ಈ ಬಗ್ಗೆ ಪಾಲಿಕೆ ಆಯುಕ್ತರ ಗಮನಕ್ಕೂ ತರಲಾಗಿದೆ. ಕಾನೂನು ರೀತಿಯಲ್ಲಿ ಇದನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಸೇರಿ ಅದನ್ನು ತೆರವುಗೊಳಿಸುತ್ತೇವೆ.
*ಧನಂಜಯ ಜಾಧವ,
ಅಧ್ಯಕ್ಷರು, ಬಿಜೆಪಿ ಗ್ರಾಮೀಣ ಮಂಡಳ

ಖಾಸಗಿ ಲೇಔಟ್‌ನಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ಪಡೆಯಲಾಗಿದೆ. ನಂತರ ಮೇಲ್ಮಹಡಿಯಲ್ಲಿ ಅನಧಿಕೃತವಾಗಿ ಮಸೀದಿ ನಿರ್ಮಿಸಿ ಪ್ರಾರ್ಥನೆ ನಡೆಸಲಾಗುತ್ತಿದೆ. ಈ ಬಗ್ಗೆ ದಾಖಲೆಗಳನ್ನು ಸ್ಥಳೀಯರು ಸಂಗ್ರಹಿಸಿದಾಗ ಅನಧಿಕೃತ ಎಂಬುದಾಗಿ ದೃಢವಾಗಿದೆ. ಸ್ಥಳೀಯ ಶಾಸಕರ ಒತ್ತಡದಿಂದ ಪಾಲಿಕೆ ಆಯುಕ್ತರು ಕಟ್ಟಡ ತೆರವು ಮಾಡುತ್ತಿಲ್ಲ. ವಿಎಚ್‌ಪಿ, ಬಜರಂಗ ದಳ ಕೈಗೊಳ್ಳುವ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ.
*ಸಂಜಯ ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷರು

*ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.