ಮಕ್ಕಳೆದುರೇ ಪತ್ನಿಯನ್ನು ಕೊಂದು ಠಾಣೆಗೆ ಶರಣಾದ ಪತಿ
Team Udayavani, Dec 18, 2020, 11:32 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಹೆಂಡತಿ ಮೇಲೆ ಅನುಮಾನ ಪಟ್ಟು ಮೂವರು ಮಕ್ಕಳೆದುರೇ ಹೆಂಡತಿಯ ಹೊಟ್ಟೆಗೆ ಚಾಕು ಇರಿದು ಕೊಲೆ ಮಾಡಿ ಪೊಲೀಸರಿಗೆ ಶರಣಾದ ಘಟನೆ ಆಟೋ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೂಲತಃ ಸವದತ್ತಿ ತಾಲೂಕಿನ ರಾಮಾಪುರ ತಾಂಡಾ ನಿವಾಸಿ ಸಕ್ಕುಬಾಯಿ ಪುಂಡಲೀಕ ಲಮಾನಿ(35) ಕೊಲೆಗೀಡಾಗಿದ್ದಾಳೆ. ಈಕೆಯ ಪತಿ ಪುಂಡಲೀಕ ಹಣಮಂತ ಲಮಾನಿ ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗತಿ ಆಗಿದ್ದಾನೆ.
ಕಳೆದ ಒಂದು ತಿಂಗಳಿಂದ ಜಗಳ ಮಾಡಿಕೊಂಡು ಸಕ್ಕುಬಾಯಿ ತವರು ಮನೆಗೆ ಹೋಗಿದ್ದಳು. ಹಿರಿಯರ ಸಮ್ಮುಖದಲ್ಲಿ ಹೆಂಡತಿ ಜೊತೆಗೆ ಜಗಳ ಮಾಡುವುದಿಲ್ಲ ಅಂತ ಪತಿ ಪುಂಡಲೀಕ ಮಾತು ಕೊಟ್ಟು ಬೆಳಗಾವಿಗೆ ಕರೆ ತಂದಿದ್ದನು. ಸಂಜೆ ಮನೆಗೆ ಬಂದು ಮೂವರು ಮಕ್ಕಳೆದುರೇ ಕೊಲೆ ಮಾಡಿದ್ದು, ಬಿಡಿಸಲು ಬಂದ ಮಗಳ ಕೈಗೂ ಗಾಯವಾಗಿದೆ. ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಆರೋಪಿ ಪುಂಡಲೀಕ, ಹತ್ಯೆ ಮಾಡಿ ಆಟೋದಲ್ಲಿ ಠಾಣೆಗೆ ಹೋಗಿ ಹೆಂಡತಿ ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?