ಬೆಳಗಾವಿ ಜಿಲ್ಲೆಯ ವಿಧವೆಯರಿಗೆ 8 ಸಾವಿರ ಮನೆ ಮಂಜೂರು- ಕವಟಗಿಮಠ
Team Udayavani, Oct 26, 2021, 6:12 PM IST
ಚಿಕ್ಕೋಡಿ: ಸಮಾಜದಲ್ಲಿ ತುಳಿತಕ್ಕೆ ಒಳಗಾದ ವಿಧವೆಯರಿಗೆ ಬೆಳಗಾವಿ ಜಿಲ್ಲೆಗೆ 8 ಸಾವಿರ ಮನೆ ಮಂಜೂರು ಮಾಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ತಾಲೂಕಿನ 9 ಗ್ರಾಮ ಪಂಚಾಯತಿಯ 120 ಮನೆಗಳು ಮಂಜೂರಾಗಿವೆ ಎಂದು ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.
ಇಲ್ಲಿನ ಸಿಎಲ್ ಇ ಸಂಸ್ಥೆಯ ಸಭಾ ಭವನದಲ್ಲಿ ರಾಜೀವ ಗಾಂಧಿ ವಸತಿ ನಿಗಮ ಬೆಂಗಳೂರು ಇವರ ವತಿಯಿಂದ ದೇವರಾಜ ಅರಸು ವಿಶೇಷ ವಸತಿ ಯೋಜನೆಯಡಿ ಚಿಕ್ಕೋಡಿ ಸದಲಗಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತಿಗಳ ವಸತಿ ರಹಿತ ವಿಧವೆಯರಿಗೆ ಮನೆಗಳ ಹಕ್ಕು ಪತ್ರ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಜ್ಯದಲ್ಲಿ 10 ಸಾವಿರ ಮನೆ ನೀಡುವ ಗುರಿ ಮಾಡಲಾಗಿತ್ತು. ಅದನ್ನು ಸದುಪಯೋಗ ಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಅನಧಿಕೃತ ವೈದ್ಯಕೀಯ ತರಬೇತಿ : ಸ್ಪರ್ಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನೋಟಿಸ್
ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಬೆಳಗಾವಿ ಜಿಲ್ಲೆಗೆ 8 ಸಾವಿರ ಮನೆಗಳು ಮಂಜೂರು ಮಾಡಲಾಗಿದೆ ಎಂದರು.
ಸಮಾಜದ ಋಣವನ್ನು ತೀರಿಸಲು ಬಡ ಜನರ ಸೇವೆಗೆ ಮಾಡಲಾಗುತ್ತದೆ. ಮುಂಬರುವ ದಿನಗಳಲ್ಲಿ ಸರಕಾರದ ಹಲವು ಯೋಜನೆ ತಲುಪಿಸಲಾಗುತ್ತದೆ ಎಂದರು.
ಚಿಂಚಣಿ ಅಲ್ಲಮಪ್ರಭು ಸ್ವಾಮೀಜಿ.ಸಂಪಾದನ್ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.
ವೇದಿಕೆ ಮೇಲೆ ತಹಶೀಲ್ದಾರ ಎನ್.ಬಿ.ಗೆಜ್ಜಿ. ಭರತೇಶ ಬನವಣೆ. ತಾ.ಪಂ ಕಾರ್ಯನಿರ್ವಹಕ ವೀರಣ್ಣ ವೀರನ್ನವರ. ಶೈಲಜಾ ಪಾಟೀಲ. ಪುರಸಭೆ ಉಪಾಧ್ಯಕ್ಷ ಸಂಜಯ ಕವಟಗಿಮಠ ಮುಂತಾದವರು ಇದ್ದರು. ಸತೀಶ ಅಪ್ಪಾಜಿಗೋಳ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್