Belagavi: ಅಂಕ ಗಳಿಕೆಗೆ ಓದುವುದಕ್ಕಿಂತ ಜ್ಞಾನ ಗಳಿಕೆಗೆ ಓದಿ- ಶೆಟ್ಟರ್
ಶಿಕ್ಷಕರು ಮಾಡುವ ಪಾಠವನ್ನು ಸರಿಯಾಗಿ ಅಭ್ಯಾಸ ಮಾಡಬೇಕು
Team Udayavani, Nov 28, 2023, 5:10 PM IST
ಹಿರೇಬಾಗೇವಾಡಿ: ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಗಳಿಸಲು ತಂದೆ-ತಾಯಿ ಮತ್ತು ಶಿಕ್ಷಕರ ಮಾರ್ಗದರ್ಶನ ಅವಶ್ಯ ಎಂದು ರಾಣೇಬೆನ್ನೂರಿನ ನಂದೀಶ್ವರ ನೈಪುಣ್ಯ ಕೌಶಲ್ಯ ಸಂಸ್ಥೆ ಅಧ್ಯಕ್ಷ ಹಾಗೂ ಜೀವನ
ಕೌಶಲ್ಯ ತರಬೇತುದಾರ ನಂದೀಶ ಬಿ ಶೆಟ್ಟರ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಬೆಳಗಾವಿ ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ರಾಣೇಬೆನ್ನೂರು ನಂದೀಶ್ವರ ನೈಪುಣ್ಯ ಕೌಶಲ್ಯ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಬಸವ ನಗರದ ಶಿವಾಲಯದ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಎಸ್ಎಸ್ ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಫಲಿತಾಂಶ ಹೆಚ್ಚಿಸಲು ಸೋಮವಾರ ಏರ್ಪಡಿಸಿದ್ದ ಒಂದು ದಿನದ ವಿಶೇಷ ನೈಪುಣ್ಯ ಕೌಶಲ್ಯ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ತರಬೇತುದಾರರಾಗಿ ಅವರು ಮಾತನಾಡಿದರು.
ಶಾಲೆಯಲ್ಲಿ ಪ್ರತಿನಿತ್ಯದ ಪಾಠಗಳನ್ನು ಅಂದೇ ಓದಿ, ಬರೆದು ಮತ್ತು ವಿಶ್ಲೇಷಣೆ, ಪುನರಾವರ್ತನೆ ಮಾಡುತ್ತ ಬಂದರೆ ಉತ್ತಮ ಫಲಿತಾಂಶ ನಿಮ್ಮದಾಗುತ್ತದೆ. ಅಂಕಗಳಿಸುವುದಕ್ಕೋಸ್ಕರ ಕಷ್ಟಪಟ್ಟು ಓದುವುದಕ್ಕಿಂತ ತಮ್ಮ ಜ್ಞಾನದ ಭಂಡಾರವನ್ನು
ಇಮ್ಮಡಿಗೊಳಿಸಲು ಇಷ್ಟಪಟ್ಟು ಓದಿದಾಗ ಎಲ್ಲವೂ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಸಹ ಇಷ್ಟುಪಟ್ಟು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕೆಂದರು.
ಕೆಪಿಸಿಸಿ ಸದಸ್ಯ ಸುರೇಶ ಇಟಗಿ ಮಾತನಾಡಿ, ಶಿಕ್ಷಕರು ಮಾಡುವ ಪಾಠವನ್ನು ಸರಿಯಾಗಿ ಅಭ್ಯಾಸ ಮಾಡಬೇಕು. ವಿದ್ಯಾರ್ಥಿಗಳು ಪರೀಕ್ಷೆ ಭಯವನ್ನು ಬಿಟ್ಟು ಓದಿನ ಕಡೆ ಹೆಚ್ಚಿನ ಗಮನ ಕೊಟ್ಟರೆ ಉತ್ತಮ ಅಂಕ ಪಡೆಯಲು ಸಾಧ್ಯ ಎಂದು ಹೇಳಿದರು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಿತು.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಯೋಜನಾ ಅಧಿಕಾರಿ ಭಾರತಿ ಶೆಟ್ಟರ್, ಕಾಂಗ್ರೆಸ್ ಕಮಿಟಿ ಬ್ಲಾಕ್ ಅಧ್ಯಕ್ಷ
ಸಿ.ಸಿ ಪಾಟೀಲ, ಬೆಳಗಾವಿ ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ದಾಸಪ್ಪನವರ, ಬೆಳಗಾವಿ ಗ್ರಾಮಾಂತರ ಕ್ಷೇತ್ರ ಸಮನ್ವಯಾಧಿಕಾರಿ ಡಾ ಎಮ್.ಎಸ್.ಮೇದಾರ, ನೋಡಲ್ ಅ ಧಿಕಾರಿ ಸುನೀಲ ಕುಟ್ರೆ, ಎಸ್.ಆರ್ ದಂಡಿನ, ಬಿಆರ್ಪಿ ಎಸ್.ವಿ. ತಾರಾಪೂರ, ಸಿಆರ್ ಪಿಗಳಾದ ಶ್ರೀಕಾಂತ ತಾವರೆ, ಸಿ.ಎಸ್.ಪಾಟೀಲ, ಬಾಳು ಮಕಾಟೆ, ವಿವಿಧ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರು, ಸಹಶಿಕ್ಷಕರು ಹಾಗೂ 1050 ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?