ಮತ್ತೂಂದು ದಾಖಲೆ ಬರೆದ ಬೆಳಗಾವಿ ವಿಮಾನ ನಿಲ್ದಾಣ

 ರಾಜ್ಯದ 3ನೇ "ಅತೀ ಹೆಚ್ಚು ಜನಸಾಂದ್ರತೆ ನಿಲ್ದಾಣ' ಹೆಗ್ಗಳಿಕೆ  ಲಾಕ್‌ಡೌನ್‌ ತೆರವಾದ ಬಳಿಕ ಪ್ರಯಾಣಿಕರ ಸಂಖ್ಯೆ ಹೆಚ್ಚಳ

Team Udayavani, Sep 8, 2020, 5:08 PM IST

ಮತ್ತೂಂದು ದಾಖಲೆ ಬರೆದ ಬೆಳಗಾವಿ ವಿಮಾನ ನಿಲ್ದಾಣ

ಸಾಂದರ್ಭಿಕ ಚಿತ್ರ

ಬೆಳಗಾವಿ: ಕಳೆದ ಜುಲೈ ತಿಂಗಳಲ್ಲಿ ಅತೀ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸುವ ಮೂಲಕ ಕೋವಿಡ್ ಹಾವಳಿ ಅವಧಿಯಲ್ಲಿ ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಜನಸಾಂದ್ರತೆ ಇರುವ ಎರಡನೇ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ ಪಡೆದಿದ್ದ ಬೆಳಗಾವಿ ವಿಮಾನ ನಿಲ್ದಾಣ ಈಗ ಮತ್ತೂಂದು ದಾಖಲೆಯ ಸಾಧನೆ ಮಾಡಿದೆ.

ಕೋವಿಡ್ ಕಷ್ಟದ ಸಮಯದಲ್ಲಿ ಅತೀ ಹೆಚ್ಚುಪ್ರಯಾಣಿಕರಿಗೆ ಸೇವೆ ನೀಡುವ ಮೂಲಕ ಬೆಳಗಾವಿವಿಮಾನ ನಿಲ್ದಾಣ ರಾಜ್ಯದಲ್ಲಿ ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಅತೀ ಹೆಚ್ಚು ಜನಸಾಂದ್ರತೆ ಇರುವ ನಿಲ್ದಾಣ ಎಂದು ಗುರುತಿಸಿಕೊಂಡಿದೆ. ಪ್ರಯಾಣಿಕರ ಸಂಚಾರದಿಂದ ವಿಮಾನ ನಿಲ್ದಾಣಗಳ ನಡುವೆ ಪೈಪೋಟಿ ಇದೆ ಎನ್ನಲಾಗದು. ಆದರೆ ಈ ಹಿಂದೆ ಪ್ರಯಾಣಿಕರಿಲ್ಲದೆ ನಷ್ಟದಲ್ಲಿದ್ದ ಬೆಳಗಾವಿ ವಿಮಾನ ನಿಲ್ದಾಣ ಈಗ ಅತೀ ಹೆಚ್ಚು ಪ್ರಯಾಣಿಕರ ಸಂಚಾರದ ಮೂಲಕ ರಾಜ್ಯದಲ್ಲಿ ಮಹತ್ವದ ಸ್ಥಾನ ಗಳಿಸಿರುವುದು ಹೆಮ್ಮೆ ಪಡುವಂತೆ ಮಾಡಿದೆ. ಈ ಭಾಗದ ಉದ್ಯಮಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ವಿಮಾನ ನಿಲ್ದಾಣ ಪ್ರಾಧಿಕಾರದ ಅಂಕಿ-ಅಂಶಗಳ ಪ್ರಕಾರ ಬೆಳಗಾವಿ ವಿಮಾನ ನಿಲ್ದಾಣದಿಂದ ಕಳೆದ ಆರು ತಿಂಗಳ ಅವಧಿಯಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಬೆಳಗಾವಿಯಿಂದ ಹೊರ ರಾಜ್ಯಗಳಿಗೆ ಹಾಗೂ ಬೇರೆ-ಬೇರೆ ರಾಜ್ಯಗಳಿಂದ ಬೆಳಗಾವಿಗೆ ಪ್ರಯಾಣ ಮಾಡಿದ್ದಾರೆ. ಈ ಮೂಲಕ ಬೆಳಗಾವಿ ವಿಮಾನ ನಿಲ್ದಾಣ ತನ್ನ ಹಿಂದಿನ ಎಲ್ಲ ದಾಖಲೆಗಳನ್ನು ಹಿಂದಿಕ್ಕಿದೆ. ಇದು ಗಡಿನಾಡಿಗೆ ಹೆಮ್ಮೆ ಉಂಟುಮಾಡುವ ಸಂಗತಿ.

ದೆಹಲಿ, ಚೆನ್ನೈಗೂ ಹಾರಲಿದೆ ವಿಮಾನ: ಈಗಾಗಲೇ ಬೆಂಗಳೂರು, ಮುಂಬೈ, ಹೈದರಾಬಾದ್‌, ಪುಣೆ, ಅಹ್ಮದಾಬಾದ್‌, ಮೈಸೂರು ಮತ್ತು ಇಂದೋರ್‌ ನಗರಗಳಿಗೆ ವಿಮಾನ ಸೇವೆ ನೀಡುತ್ತಿರುವ ಬೆಳಗಾವಿಯಿಂದ ದೆಹಲಿ ಹಾಗೂ ಚೆನ್ನೈಗೆ ವಿಮಾನ ಆರಂಭಿಸಬೇಕು ಎಂಬ ಬೇಡಿಕೆ ಕೇಳಿಬರುತ್ತಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ ದಾಖಲೆ ನೋಡಿದರೆ ಈ ಬೇಡಿಕೆಯೂ ಬಹಳ ಬೇಗ ಕಾರ್ಯರೂಪಕ್ಕೆ ಬರಲಿರುವ ಲಕ್ಷಣಗಳು ಕಾಣುತ್ತಿವೆ.

ಬೆಳಗಾವಿ ವಿಮಾನ ನಿಲ್ದಾಣ ಜನದಟ್ಟಣೆಯಿಂದ ಕೂಡಿರುವುದಕ್ಕೆ ಉಡಾನ್‌ ಯೋಜನೆ ಕಾರಣ ಎಂಬುದು ವಿಮಾನ ನಿಲ್ದಾಣದ ಅಧಿಕಾರಿಗಳ ಹೇಳಿಕೆ. ಇದೇ ಕಾರಣದಿಂದ ಈ ವಿಮಾನ ನಿಲ್ದಾಣ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿನ ಪ್ರಯಾಣಿಕರ ಸಂಖ್ಯೆಯ ದಾಖಲೆ ಮುರಿದಿದೆ. ಒಂದು ವರ್ಷದ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಿದೆ. 2016-17ರಲ್ಲಿ ಬೆಳಗಾವಿ ವಿಮಾನ ನಿಲ್ದಾಣದಿಂದ 421 ವಿಮಾನಗಳ ಮೂಲಕ 95 ಸಾವಿರ ಪ್ರಯಾಣಿಕರು ಪ್ರಯಾಣ ಮಾಡಿದ್ದರೆ, 2017-18 ರಲ್ಲಿ 1.22 ಲಕ್ಷ ಪ್ರಯಾಣಿಕರು 2182 ವಿಮಾನಗಳ ಮೂಲಕ ಹಾಗೂ 2018-19ರಲ್ಲಿ 1026 ವಿಮಾನಗಳ ಮೂಲಕ 1.0  ಲಕ್ಷ ಪ್ರಯಾಣಿಕರು ಇದರ ಸೇವೆ ಪಡೆದುಕೊಂಡಿದ್ದರು. ಆದರೆ, 2019-20ರಲ್ಲಿ ಈ ಎಲ್ಲ ಅಂಕಿ-ಅಂಶಗಳ ದಾಖಲೆ ಮೀರಿ 2.78 ಲಕ್ಷ ಪ್ರಯಾಣಿಕರು ಈ ನಿಲ್ದಾಣವನ್ನು ಬಳಸಿಕೊಂಡಿದ್ದಾರೆ ಎನ್ನುತ್ತಾರೆ ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶಕುಮಾರ ಮೌರ್ಯ.

ಕೋವಿಡ್ ಸಂಕಷ್ಟದಲ್ಲಿ ಆರ್ಥಿಕ ಸ್ಥಿತಿ ಕುಸಿದಿರುವಾಗ ಪ್ರಯಾಣಿಕರು ಬರುವರೇ ಎಂಬ ಅನುಮಾನ ವಿಮಾನ ನಿಲ್ದಾಣದ ಅಧಿಕಾರಿಗಳನ್ನು ಕಾಡಿತ್ತು. ಆದರೆ ಜೂನ್‌ದಿಂದ ಆಗಸ್ಟ್‌ನಲ್ಲಿ ಕಂಡು ಬಂದ ಪ್ರಯಾಣಿಕರ ಸಂಖ್ಯೆ ಈ ಎಲ್ಲ ಅನುಮಾನಗಳನ್ನು ಪರಿಹರಿಸಿದೆ. ಮೇ 25ರಿಂದ ಲಾಕ್‌ಡೌನ್‌ ತೆರವಾಗಿ ವಿವಿಧ ರಾಜ್ಯಗಳಿಗೆ ವಿಮಾನ ಸಂಚಾರ ಆರಂಭವಾದ ನಂತರ ಮೇ 25ರಿಂದ 31ರವರೆಗೆ 445 ಪ್ರಯಾಣಿಕರು ಪ್ರಯಾಣ ಮಾಡಿದ್ದರೆ, ಜೂನ್‌ ತಿಂಗಳಲ್ಲಿ 10,346 ಪ್ರಯಾಣಿಕರು 386 ವಿಮಾನಗಳ ಮೂಲಕ ಪ್ರಯಾಣ ಮಾಡಿದ್ದಾರೆ. ಈ ಸಂಖ್ಯೆ ಜುಲೈ ತಿಂಗಳಲ್ಲಿ ನಾಲ್ಕು ಸಾವಿರ ಹೆಚ್ಚಾಗಿದೆ. ಅಂದರೆ 14,500 ಪ್ರಯಾಣಿಕರು 443 ವಿಮಾನಗಳ ಮೂಲಕ ವಿವಿಧ ರಾಜ್ಯಗಳಿಗೆ ಪ್ರಯಾಣ ಮಾಡಿದ್ದಾರೆ ಹಾಗೂ ಅಲ್ಲಿಂದ ಬೆಳಗಾವಿಗೆ ಆಗಮಿಸಿದ್ದಾರೆ. ಆಗಸ್ಟ್‌ ತಿಂಗಳಲ್ಲಿ ಅತೀ ಹೆಚ್ಚು ಅಂದರೆ 18,280 ಪ್ರಯಾಣಿಕರು ಈ ನಿಲ್ದಾಣದ ಸೇವೆ ಬಳಸಿಕೊಂಡಿದ್ದಾರೆ. ಇದೇ ವಿಶ್ವಾಸದ ಮೇಲೆ ಬೆಳಗಾವಿ ವಿಮಾನ ನಿಲ್ದಾಣ ಸೆಪ್ಟೆಂಬರ್‌ ತಿಂಗಳಲ್ಲಿ 22 ಸಾವಿರ ಪ್ರಯಾಣಿಕರನ್ನು ನಿರೀಕ್ಷೆ ಮಾಡಿದೆ.

ಶಿರಡಿ, ನಾಸಿಕ್‌ಗೂ ಸೇವೆ :  ಕಳೆದ ಜನವರಿಯಲ್ಲಿ ಉಡಾನ್‌-3ನೇ ಹಂತದ ಯೋಜನೆಯಲ್ಲಿ ಆಯ್ಕೆಯಾದ ಬೆಳಗಾವಿ ಈ ಯೋಜನೆಯಡಿ 18 ವಿಮಾನ ಸಂಸ್ಥೆಗಳ ಮೂಲಕ ಬೆಂಗಳೂರು, ಮುಂಬೈ, ಅಹ್ಮದಾಬಾದ್‌, ಹೈದರಾಬಾದ್‌ ಸೇರಿದಂತೆ ಒಟ್ಟು 13 ಮಾರ್ಗಗಳನ್ನು ಪಡೆದುಕೊಂಡಿತು. ನಂತರ ಫೆಬ್ರವರಿಯಲ್ಲಿ ಸ್ಟಾರ್‌ ಏರ್‌ಲೈನ್‌ ಬೆಂಗಳೂರಿಗೆ ತನ್ನ ಮೊದಲ ವಿಮಾನ ಸೇವೆ ಆರಂಭ ಮಾಡಿತು. ನಂತರ ಒಂದೊಂದೇ ಸಂಸ್ಥೆಗಳ ಮೂಲಕ ಬೆಳಗಾವಿ ದೇಶದ ಎಳು ನಗರಗಳಿಗೆ ತನ್ನ ಸೇವೆ ವಿಸ್ತರಿಸಿಕೊಂಡಿತು. ಈಗ ಸದ್ಯದಲ್ಲೇ ಸ್ಟಾರ್‌ ಏರ್‌ ಇಲ್ಲಿಂದ ಶಿರಡಿ, ನಾಸಿಕ್‌ ಮೊದಲಾದ ನಗರಗಳಿಗೆ ತನ್ನ ಸೇವೆ ಆರಂಭಿಸಲಿದೆ.

ಕೋವಿಡ್ ಸಮಸ್ಯೆ ಮಧ್ಯೆಯೂ ಬೆಳಗಾವಿ ವಿಮಾನ ನಿಲ್ದಾಣ ಸಾಕಷ್ಟು ನಿರೀಕ್ಷೆ ಹುಟ್ಟಿಸುವಂತಹ ಪ್ರಗತಿ ಸಾಧಿಸಿದೆ. ನಮ್ಮ ಸೇವೆ ಜನರಿಗೆ ಇಷ್ಟವಾಗಿದೆ. ನಮಗೆ ಇನ್ನೂ ಹೆಚ್ಚಿನ ವಿಶ್ವಾಸ ಮೂಡಿಸಿದೆ. ಡಿಸೆಂಬರ್‌ನಲ್ಲಿ ಚೆನ್ನೈ ಸೇರಿದಂತೆ ಇನ್ನೂ ಕೆಲವು ರಾಜ್ಯಗಳಿಗೆ ವಿಮಾನ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.- ರಾಜೇಶಕುಮಾರ ಮೌರ್ಯ, ಬೆಳಗಾವಿ ವಿಮಾನ ನಿಲ್ದಾಣ ನಿರ್ದೇಶಕ

 

-ಕೇಶವ ಆದಿ

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.