ರಾಜಸ್ಥಾನ ಕಾರ್ಮಿಕರ ತೊಳಲಾಟ

ಬೆಳಗಾವಿಯಲ್ಲಿ 260 ಜನ ಕಾರ್ಮಿಕರು ಲಾಕ್‌ | ತಮ್ಮೂರಿಗೆ ಕಳುಹಿಸುವಂತೆ ಹಾಕುತ್ತಿದ್ದಾರೆ ಕಣ್ಣೀರು

Team Udayavani, Apr 11, 2020, 5:18 PM IST

11-April-32

ಬೆಳಗಾವಿ: ನಗರದ ಹಾಸ್ಟೆಲ್‌ನಲ್ಲಿರುವ ರಾಜಸ್ಥಾನ ಮೂಲದ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ

ಬೆಳಗಾವಿ: ಮಹಾ ನಗರಗಳಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಉತ್ತರ ಭಾರತದ ಕೂಲಿ ಕಾರ್ಮಿಕರು ಕೊರೊನಾ ರೋಗಕ್ಕೆ ಹೆದರಿಕೊಂಡು ಕಾಲ್ನಡಿಗೆ ಮೂಲಕ ಹೊರಟಾಗ ಲಾಕ್‌ಡೌನ್‌ ವೇಳೆ ಬೆಳಗಾವಿಯಲ್ಲಿಯೇ ಲಾಕ್‌ ಆಗಿದ್ದು, ಊರು ಸೇರಲು ಹಾತೊರೆಯುತ್ತಿದ್ದಾರೆ. ಕಾಲ್ನಡಿಗೆ ಮೂಲಕ ರಾಜಸ್ಥಾನ, ಹರಿಯಾಣ, ಮಧ್ಯ ಪ್ರದೇಶಕ್ಕೆ ಹೊರಟಿದ್ದ 260 ಜನರನ್ನು ಬೆಳಗಾವಿಯಲ್ಲಿ ತಡೆದು ಕ್ವಾರಂಟೈನ್‌ ಮಾಡಲಾಗಿದೆ. ನಿತ್ಯ ಈ ಎಲ್ಲ ಜನರಿಗೂ ಮಹಾನಗರ ಪಾಲಿಕೆ ಊಟ, ಉಪಾಹಾರ ಹಾಗೂ ವಸತಿ ವ್ಯವಸ್ಥೆ ಮಾಡಿದೆ. ಆದರೂ ತಮ್ಮೂರಿಗೆ ಹೋಗಬೇಕೆಂಬ ಕನಸು ಕಾಣುತ್ತಿರುವ ಈ ಜನರು ಅಧಿಕಾರಿಗಳ ಎದುರು ಅಲವತ್ತುಕೊಳ್ಳುತ್ತಿದ್ದಾರೆ.

ನಗರದ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ 115 ಹಾಗೂ ಯಮಕನಮರಡಿ ಕ್ಷೇತ್ರದ ಹಾಲಬಾಂವಿ ಮೊರಾರ್ಜಿ ವಸತಿ ನಿಲಯದಲ್ಲಿ 143 ಜನರನ್ನು ಇಡಲಾಗಿದೆ. ರಾಜಸ್ಥಾನ ಮೂಲದ ಇವರು ಬೆಂಗಳೂರು, ಮೈಸೂರು, ತುಮಕೂರು ಸೇರಿದಂತೆ ವಿವಿಧ ನಗರಗಳಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದರು. ಕೋವಿಡ್  ಭೀತಿಯಿಂದ ಇಡೀ ಭಾರತ ಲಾಕ್‌ ಡೌನ್‌ ಮಾಡಲಾಗಿತ್ತು. ಈ ವೇಳೆ ಎಲ್ಲ ವಾಹನ ಸಂಚಾರ ಬಂದ್‌ ಆಗಿದ್ದರಿಂದ ಅಲ್ಲಿಂದಲೇ ಕಾಲ್ನಡಿಗೆ ಆರಂಭಿಸಿದ್ದರು.

ಬೆಂಗಳೂರಿನಿಂದ ನಾಲ್ಕೈದು ದಿನಗಳ ಕಾಲ ನಡೆಯುತ್ತ ಬಂದಾಗ ಕಿತ್ತೂರು ಬಳಿ ಇವರೆಲ್ಲರನ್ನೂ ತಡೆ ಹಿಡಿಯಲಾಯಿತು. ಸರ್ಕಾರದ ಆದೇಶದಂತೆ ಬೆಳಗಾವಿಯಲ್ಲಿಯೇ ಇರಿಸಿಕೊಳ್ಳಲಾಯಿತು. ನಿತ್ಯ ಪಾಲಿಕೆ ವತಿಯಿಂದ ಈ ಕೂಲಿ ಕಾರ್ಮಿಕರ ಉಪಾಹಾರ, ಊಟಕ್ಕೆ ಸಾವಿರಾರು ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಆರಂಭದಲ್ಲಿ ದಾನಿಗಳು ನೀಡುತ್ತಿದ್ದ ಆಹಾರ ಪೂರೈಸಲಾಗುತ್ತಿತ್ತು. ಕೆಲ ದಿನಗಳಿಂದ ದಾನಿಗಳು ಕಡಿಮೆ ಆಗಿದ್ದರಿಂದ ಪಾಲಿಕೆಯೇ ಇವರ ಖರ್ಚು ವೆಚ್ಚ ನೋಡಿಕೊಳ್ಳುತ್ತಿದೆ.

ಕಾರ್ಮಿಕರಿಗೆ ಅಗತ್ಯ ಇರುವ ಸೋಪ್‌, ಟೂಥ್‌ ಪೇಸ್ಟ್‌ ಸೇರಿದಂತೆ ಕುಡಿಯುವ ನೀರು, ಸ್ನಾನದ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಮಿಕರ ಊಟೋಪಚಾರದ ವ್ಯವಸ್ಥೆ ಮಾಡಲು ನೋಡಲ್‌ ಅಧಿಕಾರಿಯನ್ನು ನೇಮಿಸಲಾಗಿದೆ. ಕಾರ್ಮಿಕರ ಅರೋಗ್ಯ ತಪಾಸಣೆಗೆ ನಿತ್ಯ ಅರೋಗ್ಯ ಇಲಾಖೆ ಸಿಬ್ಬಂದಿ ಬರುತ್ತಿದ್ದು, ಸದ್ಯ ಕೋವಿಡ್‌-19 ಲಕ್ಷಣ ಯಾರಿಗೂ ಇಲ್ಲ.

ವಿಜಯಪುರದಂತೆ ನಮ್ಮನ್ನೂ ಕಳುಹಿಸಿ
ರಾಜಸ್ಥಾನ ಹಾಗೂ ಗುಜರಾತ್‌ಗೆ ಹೊರಟಿದ್ದ 2,437 ಜನರನ್ನು ವಿಜಯಪುರದಲ್ಲಿ ಕಳೆದ 10 ದಿನಗಳ ಹಿಂದೆ ತಡೆ ಹಿಡಿಯಲಾಗಿತ್ತು. ಆಗ ಅಲ್ಲಿಯ ಜಿಲ್ಲಾಧಿಕಾರಿಗಳೇ ಮುತುವರ್ಜಿ ವಹಿಸಿ ಎಲ್ಲರನ್ನೂ ವಾಕರಸಾ ಸಂಸ್ಥೆಯ 60 ಬಸ್‌ಗಳಲ್ಲಿ ಕಳುಹಿಸಿದ್ದರು. ಇವರನ್ನು ಕಳುಹಿಸಲು ವಿಜಯಪುರದಿಂದ 7 ಜನ ಅಧಿಕಾರಿಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಇದೇ ರೀತಿಯಾಗಿ ಬೆಳಗಾವಿಯ ಕಾರ್ಮಿಕರನ್ನೂ ಜಿಲ್ಲಾಡಳಿತ ಕಳುಹಿಸುವಂತೆ ಕಾರ್ಮಿಕರು ಮನವಿ ಮಾಡಿದ್ದಾರೆ.

ಕಟ್ಟಡ ಕಾರ್ಮಿಕರೇ ಹೆಚ್ಚು ವಾಸ್ತವ್ಯ
ಸ್ಮಾರ್ಟ್‌ ಸಿಟಿ, ಬಿಮ್ಸ್‌ ಸೇರಿದಂತೆ ವಿವಿಧ ಕಟ್ಟಡ ಕೆಲಸಕ್ಕಾಗಿ ಆಂಧ್ರ ಪ್ರದೇಶ, ಬಿಹಾರ, ಕಾರ್ಮಿಕರಾಗಿ ಆಂಧ್ರ ಪ್ರದೇಶ,
ಜಾರ್ಖಂಡ, ಬಿಹಾರ, ಉತ್ತರ ಪ್ರದೇಶದ 1029 ಕಾರ್ಮಿಕರು ಜಿಲ್ಲೆಯಲ್ಲಿದ್ದಾರೆ. ಆಯಾ ಕಟ್ಟಡಗಳಲ್ಲಿಯೇ ಇವರಿಗೆ ವ್ಯವಸ್ಥೆ ಮಾಡಲಾಗಿದೆ. ಗುತ್ತಿಗೆದಾರರು ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಊಟೋಪಚಾರ, ವಸತಿ, ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತಿದೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.