ಬೆಳಗಾವಿ ಗಡಿ : ಒಗ್ಗಟ್ಟಿನ ಸಂದೇಶ ಪ್ರದರ್ಶಿಸಿದ ಪಕ್ಷಗಳು


Team Udayavani, Dec 21, 2022, 6:38 AM IST

ಬೆಳಗಾವಿ ಗಡಿ : ಒಗ್ಗಟ್ಟಿನ ಸಂದೇಶ ಪ್ರದರ್ಶಿಸಿದ ಪಕ್ಷಗಳು

ಬೆಳಗಾವಿ: ಬೆಳಗಾವಿ ಗಡಿ ವಿಷಯದಲ್ಲಿ ಆಡಳಿತ ಮತ್ತು ವಿಪಕ್ಷಗಳು ಒಗ್ಗಟ್ಟು ಪ್ರದರ್ಶಿಸಿದ್ದು, ಬುಧವಾರ ರಾಜ್ಯದ ನಿಲುವಿನ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಗಿದೆ.

ಮಂಗಳವಾರ ಉಭಯ ಸದನಗಳಲ್ಲೂ ಮಹಾರಾಷ್ಟ್ರದ ಆಟಾಟೋಪ ಪ್ರತಿಧ್ವನಿಸಿದ್ದು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಿಲುವಳಿ ಸೂಚನೆ ಮಂಡಿಸಿವೆ.

ಸ‌ದನದಲ್ಲೇ ಸೂಕ್ತವಾದ ನಿರ್ಣಯವನ್ನು ಕೈಗೊಂಡು ರಾಜ್ಯದ ನಿಲುವು ಕುರಿತು ಸಂದೇಶ ರವಾನಿಸೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಕ್ಕೆ ವಿಪಕ್ಷ ನಾಯಕ  ಸಿದ್ದರಾಮಯ್ಯ, ಜೆಡಿಎಸ್‌ ಜೆಡಿಎಸ್‌ ಉಪನಾಯಕ ಬಂಡೆಪ್ಪ ಕಾಂಶೆಪುರ್‌ ಸಹಿತ ಇಡೀ ಸದನ ಒಪ್ಪಿಗೆ ಸೂಚಿಸಿತು.

ಗಡಿ ಸಂಗತಿ ಮುಗಿದ ಅಧ್ಯಾಯ
ವಿಷಯ ಪ್ರಸ್ತಾವಿಸಿದ ಸಿದ್ದರಾಮಯ್ಯ, ಮಹಾಜನ್‌ ವರದಿಯನ್ನು ನಾವು ಒಪ್ಪಿಕೊಂಡಿರುವುದರಿಂದ ಈಗಾಗಲೇ ಇದು ಮುಗಿದ ಅಧ್ಯಾಯ. ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿರುವುದರಿಂದ ಈ ವಿಷಯವನ್ನು ಜೀವಂತವಾಗಿಡುವ ಯತ್ನ ನಡೆಯುತ್ತಿದೆ ಎಂದರು.

ಮಹಾರಾಷ್ಟ್ರದವರ ಪುಂಡಾಟಿಕೆ, ತೀಟೆ-ತಂಟೆ ಇನ್ನೂ ನಿಂತಿಲ್ಲ. ಎರಡು ರಾಜ್ಯಗಳ ಮಧ್ಯೆ ಉದ್ವಿಗ್ನತೆ ನಿರ್ಮಾಣ ಮಾಡುತ್ತಿದ್ದಾರೆ.

ಬೆಳಗಾವಿ ಅಧಿವೇಶನದ ಸಂದರ್ಭ ದಲ್ಲಿ ಮಹಾ ಮೇಳವ್‌, ನ.1ರಂದು ಬ್ಲಾಕ್‌ ಡೇ ಆಚರಣೆಯಂಥ ಕುಟಿಲ ಪ್ರಯತ್ನಗಳಿಗೆ ಸೊಪ್ಪು ಹಾಕಬಾರದು. ರಾಜ್ಯ ಸರಕಾರ ಗಟ್ಟಿ ನಿಲುವು ತಾಳಬೇಕು ಎಂದು ಹೇಳಿದರು.

ಕೇಂದ್ರ ಸರಕಾರ ಸಂಧಾನಕ್ಕೆ ಕರೆದಾಗ ಹೋಗುವ ಮೊದಲು ರಾಜ್ಯದಲ್ಲಿ ಸರ್ವಪಕ್ಷ ಸಭೆ ಕರೆದು, ನಮ್ಮ ನಿಲುವುಗಳನ್ನು ಕೇಳಬೇಕಿತ್ತು. ಅದನ್ನು ಮಾಡದೇ ದಿಲ್ಲಿಗೆ ಹೋಗಿ, ಗಡಿ ವಿಷಯವಾಗಿ ಸಚಿವರ ಸಮಿತಿ ರಚಿಸಲು ನಿರ್ಧರಿಸಿರುವುದು ಸರಿಯಲ್ಲ. ಹಾಗಾದರೆ ರಾಜ್ಯದಲ್ಲಿ ಗೃಹ ಸಚಿವರು ಸಮರ್ಥರಿಲ್ಲವೇ ಎಂದರು.

ನಮ್ಮ ನಿಲುವು ಸ್ಪಷ್ಟ
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯ ಸರಕಾರದ ನಿಲುವು ಸ್ಪಷ್ಟ. ಉತ್ತರ ಕರ್ನಾಟಕ ಭಾಗದವನಾಗಿ, ಮುಖ್ಯಮಂತ್ರಿಯಾಗಿ ಜವಾಬ್ದಾರಿಯೂ ಇದೆ, ಸತ್ಯವನ್ನೇ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಗಡಿಯಲ್ಲಿ ಕನ್ನಡಿಗರಿಗೆ ಸಮಸ್ಯೆಯಾಗಲು ಅವಕಾಶ ನೀಡುವುದಿಲ್ಲ. ಮಹಾಮೇಳವ್‌ ನಡೆಯಲು ಬಿಟ್ಟಿಲ್ಲ, ಮಹಾರಾಷ್ಟ್ರ ಸಚಿವರು ಬರುವುದನ್ನು ತಡೆದಿದ್ದೇವೆ. ಈ ನಿಟ್ಟಿನಲ್ಲಿ ರಾಜ್ಯದ ಮುಖ್ಯಕಾರ್ಯದರ್ಶಿ ಮಹಾರಾಷ್ಟ್ರ ಸರಕಾರಕ್ಕೆ ಬರೆದಿರುವ ಪತ್ರವು ಗಡಿ ವಿಷಯ ನಿರ್ಣಯಕ್ಕೆ ಮುಂದೆ ಬಹು ಮಹತ್ವದ ದಾಖಲೆಯಾಗಲಿದೆ ಎಂದು ಹೇಳಿದರು.

ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಹಾಗೂ ಜೆಡಿಎಸ್‌ನ ತಿಪ್ಪೇಸ್ವಾಮಿ, ಗಡಿ ಸಂಗತಿ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಈ ವಿಷಯ ಚರ್ಚೆ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಸಭಾಪತಿ ರಘುನಾಥ ರಾವ್‌ ಮೆಲ್ಕಾಪುರೆ ಹೇಳಿದರು.

ಉದಯವಾಣಿ ಪ್ರಸ್ತಾವ
ವಿಧಾನಸಭೆಯಲ್ಲಿ  ವಿಪಕ್ಷ ಉಪ ನಾಯಕ ಯು.ಟಿ. ಖಾದರ್‌, ಉದಯವಾಣಿ ಪತ್ರಿಕೆಯನ್ನು ಪ್ರದರ್ಶಿಸಿ ಗಡಿಯಲ್ಲಿ ಮಹಾರಾಷ್ಟ್ರ ಪುಂಡಾಟಿಕೆ ನಡೆಸುತ್ತಿರುವ ಬಗ್ಗೆ ಪ್ರಸ್ತಾವಿಸಿ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.