ಗ್ರಾಮೀಣ ಭಾಗದಲ್ಲಿ ಶ್ರೀಗಂಧ ಕಳ್ಳರ ಗ್ಯಾಂಗ್‌ ಸಕ್ರಿಯ

ಅನೇಕ ಹಳ್ಳಿಗಳಲ್ಲಿಯ ಗಿಡಗಳಿಗೆ ಕನ್ನ ದೂರು ನೀಡಲು ಹೋದರೂ ಸಿಗದ ಸ್ಪಂದನೆ

Team Udayavani, Mar 1, 2020, 1:33 PM IST

1-March-15

ಬೆಳಗಾವಿ: ಚಿನ್ನದ ಬೆಲೆ ಹೊಂದಿರುವ ಶ್ರೀಗಂಧದ ಗಿಡಗಳಿಗೆ ಕೊಡಲಿ ಹಾಕಿ ಕದಿಯುತ್ತಿರುವ ಗ್ಯಾಂಗ್‌ ಸಕ್ರಿಯಗೊಂಡಿದ್ದು, ತಾಲೂಕಿನ ಅನೇಕ ಹಳ್ಳಿಗಳಲ್ಲಿ ಶ್ರೀಗಂಧದ ಗಿಡಗಳನ್ನು ರಾತ್ರಿ ಹೊತ್ತಿನಲ್ಲಿ ಕಡಿದು ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬರುತ್ತಿದೆ.

ಬೆಳಗಾವಿ ತಾಲೂಕಿನ ಅಗಸಗಾ, ಚೆಲುವಿನಹಟ್ಟಿ, ಕಡೋಲಿ, ಕೇದನೂರ, ಮಣ್ಣಿಕೇರಿ, ಬೋಡಕೇನಹಟ್ಟಿ, ಹಂದಿಗನೂರ ಗ್ರಾಮಗಳಲ್ಲಿ ಶ್ರೀಗಂಧ ಗಿಡಗಳು ಕಳ್ಳತನವಾಗುತ್ತಿವೆ. ಇದರಿಂದ ಈ ಭಾಗದ ರೈತರು ಆತಂಕಕ್ಕೀಡಾಗಿದ್ದಾರೆ. ಆದರೆ ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಗಿಡ ಬೆಳೆಸಿ ಅರಣ್ಯ ಉಳಿಸಿ ಎಂಬ ಧ್ಯೇಯವಾಕ್ಯದೊಂದಿಗೆ ಅರಣ್ಯ ಇಲಾಖೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತದೆ. ಆದರೆ ಬೆಲೆಬಾಳುವ ಶ್ರೀಗಂಧದ ಗಿಡಗಳನ್ನು ಕಡಿದು ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ಬಂದರೂ ಜಾಣ ಕಿವುಡು ಪ್ರದರ್ಶಿಸುತ್ತಿದೆ ಎಂಬ ಆರೋಪವಿದೆ. ತಾಲೂಕಿನ ಈ ಹಳ್ಳಿಗಳಲ್ಲಿ ವಾರದಲ್ಲಿ ಮೂರ್‍ನಾಲ್ಕು ಗಿಡಗಳನ್ನು ಕಳ್ಳತನ ಮಾಡುವ ಗ್ಯಾಂಗ್‌ ಬೀಡು ಬಿಟ್ಟಿದ್ದು, ಇನ್ನೂವರೆಗೆ ಈ ಖದೀಮರನ್ನು ಹೆಡೆಮುರಿ ಕಟ್ಟಲು ಸಾಧ್ಯವಾಗಿಲ್ಲ. ಫಲವತ್ತಾದ ಭೂಮಿಯಲ್ಲಿ ಬೀಜ ಬಿದ್ದು ಪ್ರಾಕೃತಿಕವಾಗಿ ಬೆಳೆಯುವ ಗಿಡಗಳಿಗೂ ಸಂಚಕಾರ ಬಂದಿದೆ.

ಹೊಲಗಳಲ್ಲಿ ಪ್ರಾಕೃತಿಕವಾಗಿ ಹೆಚ್ಚಾಗಿ ಇಂಥ ಗಿಡಗಳು ಬೆಳೆಯುತ್ತಿದ್ದು, ಕಳ್ಳರು ರಾತ್ರಿ ಹೊತ್ತಿನಲ್ಲಿ ಕಡಿದುಕೊಂಡು ಹೋಗುತ್ತಿದ್ದಾರೆ. ಈ ಬಗ್ಗೆ ರೈತರು ಪೊಲೀಸ್‌ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರಿಂದ ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ. ಅರಣ್ಯ ಇಲಾಖೆಗೆ ಕೇಳಲು ಹೋದರಂತೂ ಕಠಿಣ ನಿಯಮಾವಳಿಗಳಿಂದ ರೈತರು ರೋಸಿ ಹೋಗಿದ್ದಾರೆ. ಹೀಗಾಗಿ ದೂರು ನೀಡುವ ಗೋಜಿಗೆ ಹೋಗುವುದು ಬೇಡ ಎಂದು ಸುಮ್ಮನೆ ಕುಳಿತಿದ್ದಾರೆ.

ಹೊಲಗಳಲ್ಲಿ ಸಸಿ ನೆಟ್ಟು ಗಿಡ ಬೆಳೆಸಿರುವ ರೈತರಿಗೆ ಈಗ ಮತ್ತೂಂದು ತಲೆ ನೋವು ಶುರುವಾಗಿದೆ. ದೊಡ್ಡದಾಗಿ ಮರ ಬೆಳೆದಾಗ ಕೃಷಿ ಚಟುವಟಿಕೆಗಳಿಗೆ ಅಡಚಣೆ ಉಂಟಾದರೆ ಕಟಾವು ಮಾಡಲು ಸರಳವಾಗಿ ಅನುಮತಿ ಸಿಗುತ್ತಿಲ್ಲ. ಅನೇಕ ಸಲ ಕಚೇರಿಗಳಿಗೆ ಅಲೆದಾಡಿ ಸಾಕಾಗಿ ಹೋಗಿದೆ. ಆದರೆ ಗಿಡಗಳನ್ನು ಕದ್ದುಮುಚ್ಚಿ ಕಡಿಯುವವರ ಸಂಖ್ಯೆ ಮಾತ್ರ ಹೆಚ್ಚಾಗಿ ಹೋಗಿದೆ.

ಈ ಬಗ್ಗೆ ಅರಣ್ಯ ಇಲಾಖೆ ಸುಮ್ಮನಿರುವುದಾದರೂ ಏಕೆ ಎನ್ನುವುದು ರೈತರ ಪ್ರಶ್ನೆ. ಶ್ರೀಗಂಧದ ಗಿಡಗಳನ್ನು ಅವ್ಯಾಹತವಾಗಿ ಕಡಿದು ಸಾಗಿಸುತ್ತಿರುವವರನ್ನು ಹಿಡಿದು ಜೈಲಿಗೆ ಅಟ್ಟಬೇಕು. ಸಪದ್ಭರಿತವಾದ ಈ ಗಿಡಗಳನ್ನು ರಕ್ಷಿಸುವ ಕೆಲಸ ಅರಣ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಮಾಡಬೇಕು. ಶ್ರೀಗಂಧದ ಗಿಡ ಕಳ್ಳತನ ಮಾಡಿದವರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಶ್ರೀಗಂಧ ಗಿಡಗಳನ್ನು ತಮ್ಮ ಖಾಸಗಿ ಜಾಗದಲ್ಲಿ ಬೆಳೆದಿದ್ದರೆ ಕಟಾವು ಮಾಡಲು ಅರಣ್ಯ ಇಲಾಖೆಯ ಅನುಮತಿ ಪಡೆದುಕೊಳ್ಳಬೇಕು. ಅನುಮತಿಗಾಗಿ ಅರ್ಜಿ ಹಾಕಿದ ಬಳಿಕ ಅಧಿಕಾರಿಗಳು ಸ್ಥಳಕ್ಕೆ ಬಂದು ಅದರ ಮಾಹಿತಿ ಪಡೆದು ಗಿಡ ಕಟಾವು ಮಾಡಿ ಧಾರವಾಡದ ಮುಖ್ಯ ಡಿಪೋಗೆ ಕಳುಹಿಸಲಾಗುತ್ತದೆ. ಅದರ ಬೆಲೆ ಎಷ್ಟಾಗುತ್ತದೆ, ಅದರ ಮೌಲ್ಯ ಎಷ್ಟು ಎಂಬುದನ್ನು ನಿಖರವಾಗಿ ಲೆಕ್ಕ ಹಾಕಿ ಹಣ ಸಂದಾಯ ಮಾಡಲಾಗುತ್ತದೆ ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ಖಾಸಗಿ ಮಾಲೀಕತ್ವದ ಜಾಗದಲ್ಲಿ ಶ್ರೀಗಂಧದ ಗಿಡ ಬೆಳೆದರೆ ಅದನ್ನು ರಕ್ಷಿಸುವ ಜವಾಬ್ದಾರಿ ಅವರೇ ಮಾಡಬೇಕಾಗುತ್ತದೆ. ಗಿಡಗಳನ್ನು ಕಳ್ಳತನ ಮಾಡಲು ಬಂದವರ ಬಗ್ಗೆ ಮಾಹಿತಿ ಕೊಟ್ಟರೆ ರೈತರ ಬೆಂಬಲಕ್ಕೆ ನಿಂತು ಕಳ್ಳರನ್ನು ಪತ್ತೆ ಹಚ್ಚುವ ಕೆಲಸ ಮಾಡಲಾಗುವುದು. ಈ ಬಗ್ಗೆ ನಿಖರವಾಗಿ ದೂರು ನೀಡಬೇಕು. ಎಸ್‌.ಎಂ. ಸಂಗೊಳ್ಳಿ,
ಎಸಿಎಫ್‌, ಬೆಳಗಾವಿ
ಉಪವಿಭಾಗ, ಅರಣ್ಯ ಇಲಾಖೆ

ಅರಣ್ಯ ಇಲಾಖೆಯ ಕಠಿಣ ಕಾನೂನು ನಿಯಮಗಳಿಂದಾಗಿ ಅನೇಕ ಗಿಡಗಳ ಕಟಾವಿಗೆ ಸಂಚಕಾರ ಬಂದಿದೆ. ತಮ್ಮ ಹೊಲದಲ್ಲಿ ಬೆಳೆದ ಗಿಡಗಳನ್ನು ಕಟಾವು ಮಾಡಲು ಅನುಮತಿಯೇ ಸಿಗುತ್ತಿಲ್ಲ. ಶ್ರೀಗಂಧ, ಸಾಗವಾನಿ, ಸೇರಿದಂತೆ ಅನೇಕ ಬೆಲೆಬಾಳುವ ಗಿಡಗಳನ್ನು ಬೆಳೆದರೂ ಅವುಗಳನ್ನು ಮಾರಾಟ ಮಾಡಿ ಉದ್ಯೋಗ ನಡೆಸಲು ಅವಕಾಶ ಇಲ್ಲದಂತಾಗಿದೆ. ಕೂಡಲೇ ಸರ್ಕಾರ ತನ್ನ ನಿಲುವು ಬದಲಾವಣೆ ಮಾಡಿಕೊಳ್ಳಬೇಕು.
ಸಂತೋಷ ಮೇತ್ರಿ,
ಅಗಸಗಾ ಗ್ರಾಮಸ್ಥ

ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.