ಬೆಳಗಾವಿ ಪಾಲಿಕೆಯಲ್ಲಿ ಮೊದಲ ಬಾರಿಗೆ ಮೊಳಗಿದ ನಾಡಗೀತೆ
Team Udayavani, Jun 25, 2017, 3:45 AM IST
ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಶನಿವಾರ ಮೊದಲ ಬಾರಿಗೆ ಕನ್ನಡ ನಾಡಗೀತೆ ಮೊಳಗುವ ಮೂಲಕ ಇತಿಹಾಸ ಸೃಷ್ಟಿಸಿದೆ. ಕನ್ನಡ-ಮರಾಠಿ ಭಾಷಾ ಜಗಳದಲ್ಲಿಯೇ ಮುಳುಗಿದ್ದ ಪಾಲಿಕೆಯಲ್ಲಿ “ಜಯ ಭಾರತ ಜನನಿಯ ತನುಜಾತೆ…’ನಾಡಗೀತೆ ಮೊಳಗಿತು.
ಕನ್ನಡ ವಿರೋಧಿ ಚಟುವಟಿಕೆಯಲ್ಲಿ ಹಾಗೂ ರಾಜ್ಯೋತ್ಸವದಂದು ಕರಾಳ ದಿನಾಚರಣೆಯಲ್ಲಿ ಭಾಗಿಯಾಗುವ ಮಾಜಿ ಮೇಯರ್ ಸರಿತಾ ಪಾಟೀಲ, ಶಾಸಕ ಸಂಭಾಜಿ ಪಾಟೀಲ ಸೇರಿ ಎಂಇಎಸ್ನ ಎಲ್ಲ ಸದಸ್ಯರು ಎದ್ದು ನಿಂತು ಗೌರವ ಸಲ್ಲಿಸಿದರು. ಎಂಇಎಸ್ ಸದಸ್ಯರಿಗೆ ಜಿಲ್ಲಾಧಿಕಾರಿ ಎನ್. ಜಯರಾಮ್ ಚಾಟಿ ಬೀಸಿದ್ದರಿಂದ ಈ ಬದಲಾವಣೆ ಕಾಣುವಂತಾಗಿದೆ.
ಬೆಳಗಾವಿ ಪಾಲಿಕೆಯಲ್ಲಿ ಮರಾಠಿ ಭಾಷಿಕರ ಆಡಳಿತವಿದೆ. ಮೊದಲ ಬಾರಿಗೆ ನಾಡಗೀತೆ ಹಾಡುವ ಪ್ರಕ್ರಿಯೆ ನಡೆದಿದ್ದಕ್ಕೆ ಮರಾಠಿ ಭಾಷಿಕ ಕೆಲ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ, ನಾಡಗೀತೆ ಬಗ್ಗೆ ಸರ್ಕಾರದಿಂದ ಆದೇಶ ಬಂದಿದೆಯೇ ಎಂದು ಪಾಲಿಕೆ ಅಭಿಯಂತರಾದ ಲಕ್ಷ್ಮೀ ನಿಪ್ಪಾಣಿಕರ ಬಳಿ ಕೇಳಿದ್ದರು. ಸರ್ಕಾರದಿಂದ ಡಿಸಿ ಕಚೇರಿಗೆ ನಾಡಗೀತೆ ಹೇಳುವ ಬಗ್ಗೆ ಆದೇಶ ಬಂದಿದೆ ಎಂದು ಅವರು ಹೇಳಿದಾಗ ಸದಸ್ಯರು ಮರಳಿದರು.
ಶನಿವಾರ ನಡೆದ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿ ಚುನಾವಣೆ ಪ್ರಕ್ರಿಯೆ ಮುನ್ನ ಕೋರಂ ಭರ್ತಿ ಆಗದ್ದನ್ನು ಗಮನಿಸಿದ ಜಿಲ್ಲಾಧಿಕಾರಿ, ಸದಸ್ಯರಿಗೆ ಸೂಚನೆ ನೀಡಿ, ಐದು ನಿಮಿಷದೊಳಗೆ ಕೋರಂ ಭರ್ತಿ ಆಗದಿದ್ದರೆ ಬಾಗಿಲು ಬಂದ್ ಮಾಡುವುದಾಗಿ ಹೇಳಿದರು. ಎಲ್ಲ ಸದಸ್ಯರೂ ಒಳ ಬಂದೊಡನೆ ನಾಡಗೀತೆ ಹಾಡುವಂತೆ ಜಿಲ್ಲಾಧಿಕಾರಿ ಆದೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ