ಬೆಳಗಾವಿ: ಜೈನಧರ್ಮದ ತಿರುಳು ಅರಿತು ಪಾಲಿಸಿ- ಅಮೃತಾನಂದ ಶ್ರೀ

ಸ್ತುತಿ-ನಿಂದನೆಗಳಿಗೆ ಸಮಭಾವ ಹೊಂದಬೇಕು

Team Udayavani, Feb 21, 2024, 4:03 PM IST

ಬೆಳಗಾವಿ: ಜೈನಧರ್ಮದ ತಿರುಳು ಅರಿತು ಪಾಲಿಸಿ- ಅಮೃತಾನಂದ ಶ್ರೀ

ಉದಯವಾಣಿ ಸಮಾಚಾರ
ಅಡಹಳ್ಳಿ: ಇನ್ನೊಂದು ಜೀವಿಗೆ ಹಿಂಸೆ ಮಾಡಿ ಬದುಕುವುದು ಜೀವನವಲ್ಲ. ತ್ಯಾಗಿಗಳಿಂದ ಈ ಪ್ರಪಂಚ ಬದುಕಿದೆ ವಿನಃ ಭೋಗಿಗಳಿಂದಲ್ಲ. ಜೈನ ಧರ್ಮದ ತಿರುಳನ್ನು ಅರಿತುಕೊಂಡು ನಡೆದಾಗ ಮಾತ್ರ ಮುನಿಮಹಾರಾಜರ ಶ್ರಮ ಸಾರ್ಥಕವಾಗುತ್ತದೆ ಎಂದು ಬಾಲಗಾಂವ ಜ್ಞಾನ ಯೋಗಾಶ್ರಮದ ಅಮೃತಾನಂದ ಸ್ವಾಮೀಜಿ ಹೇಳಿದರು.

ಅವರು ಮಂಗಳವಾರ ಸಮೀಪದ ನಂದಗಾಂವ ಗ್ರಾಮದಲ್ಲಿ ಜರುಗಿದ ಪಂಚಕಲ್ಯಾಣ ಮಹೋತ್ಸವದ ನಿರ್ವಾಣ ಕಲ್ಯಾಣ ಹಾಗೂ ಸಮಾರೋಪ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಸಂಸಾರವೆಂಬುದೊಂದು ನೂರು ವರ್ಷದ ಯಾತ್ರೆ.

ಈ ಪಯಣ ಚೆನ್ನಾಗಿ ಕೊನೆಗೊಳ್ಳಬೇಕಾದರೆ ಮನಸ್ಸುನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಬಲಾಡ್ಯ ಆನೆಯನ್ನು ಪಳಗಿಸಬಹುದು. ಅತ್ತಿತ್ತ ಹೋಗುವ ಮನಸ್ಸನ್ನು ಪಳಗಿಸುವುದು ತುಂಬ ಕಷ್ಟ. ಒಂದು ವೇಳೆ ಯಶಸ್ವಿಯಾದರೆ ಜಗತ್ತನ್ನೇ ಗೆಲ್ಲುವಂತಹ ಸ್ಫೂರ್ತಿ ನಿಮಗೆ ಸಿಗುತ್ತದೆ. ಸಾಮಾನ್ಯವಾಗಿ ಮುನಿಮಹಾರಾಜರು, ಸಂತ, ಮಹಾಂತರು, ದಾರ್ಶನಿಕರು ಈ ಸ್ಪರ್ಧೆಯನ್ನು ಗೆದ್ದವರಾಗಿದ್ದಾರೆ. ಕಷ್ಟ-ಸುಖಗಳಿಗೆ ತಲೆ ಕೆಡಿಸಿಕೊಳ್ಳದೆ ಸಮಸ್ಯೆಗಳನ್ನು ಪರಿಹರಿಸಲು ನಗು ಮತ್ತು ಮೌನವನ್ನು ಅಳವಡಿಸಿಕೊಳ್ಳಬೇಕು ಎಂದರು.

ನಾಂದಣಿಯ ಜಿನಸೇನ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಮಾತನಾಡಿ, ಹೂ ಅರಳಬೇಕೆಂದರೆ ಸುಡುವ ಬಿಸಿಲು, ತಣಿಸುವ ಮಳೆ ಎರಡನ್ನೂ ಸ್ವೀಕರಿಸುತ್ತದೆ. ಸ್ತುತಿ-ನಿಂದನೆಗಳಿಗೆ ಸಮಭಾವ ಹೊಂದಬೇಕು ಎಂದರು.

ಬಾಲಾಚಾರ್ಯ 108 ಸಿದ್ಧಸೇನ ಮುನಿಮಹಾರಾಜರು ಮಾತನಾಡಿ, ಈ ಜೀವ ಜಗ್ಗತ್ತಿನಲ್ಲಿ ಹೇಳುವುದೆಲ್ಲ ಆಗಿ ಹೋಗಿದೆ. ಆಚರಣೆ ಮಾತ್ರ ಬಾಕಿ ಉಳಿದಿದೆ. ಇಲ್ಲಿ ಪಡೆದ ಪುಣ್ಯವನ್ನು ಸತ್ಕಾರ್ಯಗಳ ಮೂಲಕ ಉಳಿಸಿಕೊಂಡು ಹೋಗಬೇಕು ಗ್ರಾಮದಲ್ಲಿ ನಡೆದ ಪಂಚಕಲ್ಯಾಣ ಮಹೋತ್ಸವ ಅತ್ಯಂತ ಯಶಸ್ವಿಯಾಗಿದ್ದು.

ಕುಡಿಯುವ ನೀರು, ಸಾರಿಗೆ, ಪೆಂಡಾಲ್‌ ವ್ಯವಸ್ಥೆ, ಭದ್ರತೆ, ಅನ್ನ ಸಂತರ್ಪಣೆ, ಅಸಂಖ್ಯಾತ ಶ್ರಾವಕ, ಶ್ರಾವಕಿಯರ ಮನ ಗೆದ್ದಿದೆ. ಮಹೋತ್ಸವ ಕಮೀಟಿ, ವೀರಸೇವಾ ದಳ, ಮಹಿಳಾ ಮಂಡಳ, ಆದಿನಾಥ ತರುಣ ಸಂಘ ಸೇರಿದಂತೆ ಎಲ್ಲ ಸಮಾಜದ ಜನತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿದ್ದಾರೆ. ಈ ನಿಮ್ಮ ಸೇವೆಗೆ ಮುನಿಮಹಾರಾಜರು ಪ್ರಸನ್ನರಾಗಿ ಸಂಪೂರ್ಣವಾಗಿ ಆಶೀರ್ವಾದ ಮಾಡಿದ್ದಾರೆ ಎಂದರು.

ಹೆಲಿಕಾಪ್ಟರ್‌ ಮೂಲಕ ಪುಷ್ಟಾರ್ಪಣೆ: ಮಹೋತ್ಸವದ ಕೊನೆಯ ದಿನವಾದ ಮಂಗಳವಾರ ಹೆಲಿಕಾಪ್ಟರ್‌ ಮೂಲಕ ಜೀನ ಮಂದಿರದ ಮೇಲೆ ಪುಷ್ಪಾರ್ಪಣೆ ಮಾಡಿದ್ದು ಭಕ್ತರ ಸಂತಸಕ್ಕೆ ಕಾರಣವಾಯಿತು. ಅಮಿತಸೇನ ಮುನಿಮಹಾರಾಜರು, ತ್ಯಾಗಾನಂದ ಸ್ವಾಮೀಜಿ, ಸೈಬಣ್ಣ ಮುಚ್ಚಂಡಿ, ಮಹಾರಾಷ್ಟ್ರದ ಮಾಜಿ ಸಂಸದ ರಾಜು ಶೆಟ್ಟಿ, ಪಿಎಸ್‌ಐ ಶಿವಾನಂದ ಕಾರಜೋಳ, ಅಶೋಕ ಮಗದುಮ್ಮ, ಗುರುಪಾದ ಸವದಿ, ರಾವಸಾಬ ಬಿರಾದಾರಪಾಟೀಲ, ಮುತ್ತಪ್ಪ ಕಾತ್ರಾಳ, ಪುಷ್ಪಕಕುಮಾರ ಪಾಟೀಲ, ಗೋಪು ಸಪ್ತಸಾಗರ, ಕುಮಾರ ಸಕಲಕನವರ, ಸುಕುಮಾರ ಬಿರಾದಾರಪಾಟೀಲ, ಭರಮು ಬಳ್ಳೋಜ, ಭರಮುಸುಗ್ಗಾ, ನೇಮಿನಾಥ ಬಸಗೌಡ, ಸುಭಾಷ ದರೂರ, ಅಪ್ಪಾಸಾಬ ಗಿರಿಗೌಡ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.