ಬೆಳಗಾವಿ: ನೈತಿಕ ಮೌಲ್ಯಗಳಿಂದಲೇ ರಾಷ್ಟ್ರನಿರ್ಮಾಣ ಸಾಧ್ಯ
ನೈತಿಕ ಮೌಲ್ಯಗಳನ್ನು ಒಪ್ಪಿ ಬದುಕು ಸಾಗಿಸಿದರೆ ಸಾರ್ಥಕ
Team Udayavani, Jun 8, 2023, 3:10 PM IST
ಬೆಳಗಾವಿ: ಮಕ್ಕಳಲ್ಲಿ ನಾವು ಬೆಳೆಸುವ ನೈತಿಕ ಮೌಲ್ಯಗಳಿಂದಲೇ ರಾಷ್ಟ್ರ ನಿರ್ಮಾಣ ಸಾಧ್ಯವಾಗುತ್ತದೆ. ಇಂದು ನಮ್ಮ ಮಕ್ಕಳು ಮೊಬೈಲ್-ಟಿ.ವಿ. ಹಾವಳಿಯಿಂದ ಅಧಃಪತನದ ದಾರಿ ಹಿಡಿದಿದ್ದಾರೆ. ಇಂತಹ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕಾದ ಅನಿವಾರ್ಯತೆ ಬಹಳಷ್ಟಿದೆ ಎಂದು ಕುಂದರಗಿ ಅಡವಿಸಿದ್ಧೇಶ್ವರಮಠದ ಅಮರ ಸಿದ್ಧೇಶ್ವರ ಸ್ವಾಮಿಗಳು
ಹೇಳಿದರು.
ನಗರದ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ಜರುಗಿದ 264 ಶಿವಾನುಭವ ಕಾರ್ಯಕ್ರಮದಲ್ಲಿಮಾತನಾಡಿದ ಅವರು, ಸಮಾಜದಲ್ಲಿನೈತಿಕ ಮೌಲ್ಯಗಳೂ ಅನೈತಿಕ ಮೌಲ್ಯಗಳೂ ಕೂಡಿಯೇ ಇರುತ್ತವೆ. ಆದರೆ ಹಂಸಕ್ಷೀರ ನ್ಯಾಯದಂತೆ ನಾವು
ನೈತಿಕ ಮೌಲ್ಯಗಳನ್ನು ಒಪ್ಪಿ ಬದುಕು ಸಾಗಿಸಿದರೆ ಸಾರ್ಥಕ ಎಂದರು.
ಕಾರಂಜಿಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿ,ನಾವು ಮೊದಲು ಆತ್ಮಾವಲೋಕನ ಮಾಡಿಕೊಳ್ಳುವುದರ ಮೂಲಕ ನೈತಿಕಪ್ರಜ್ಞೆಯನ್ನು ಅನುಷ್ಠಾನಕ್ಕೆ ತರಬೇಕು. ವ್ಯಕ್ತಿ ವೈಯಕ್ತಿಕ ನೆಲೆಯಲ್ಲಿ ಸುಧಾರಿಸಿದರೆ, ಸಹಜವಾಗಿಯೇ ಸಮಾಜ ಸುಧಾರಣೆಯಾಗುತ್ತದೆ ಎಂದು ಹೇಳಿದರು.
ನಗರ ಯೋಜನಾಧಿಕಾರಿಗಳಾದ ಬಸವರಾಜ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ಶೃತಿ ಶಿವಾನಂದ ಯರಗಟ್ಟಿ ಅವರನ್ನು ಸನ್ಮಾನಿಸಲಾಯಿತು. ಶ್ರೀಕಾಂತ ಶಾನವಾಡ ಸ್ವಾಗತಿಸಿದರು, ಪ್ರಕಾಶ ಗಿರಿಮಲ್ಲನವರ ಅತಿಥಿಗಳನ್ನು ಪರಿಚಯಿಸಿದರು. ಎ.ಕೆ.ಪಾಟೀಲ ನಿರೂಪಣೆ ಮಾಡಿದರು, ವಿ.ಕೆ.ಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ
HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?