ಬೆಳಗಾವಿ: ಕೆರೆಗಳ ಪುನರುಜೀವನಕ್ಕೆ ನೆರವಾದ ಅಮೃತ “ಖಾತ್ರಿ

ನೀರಿನ ಸಂರಕ್ಷಣೆ, ಸದ್ಬಳಕೆ ಕುರಿತು ಅರಿವು ಮೂಡಿಸುವುದು ಈ ಅಮೃತ ಸರೋವರ ಯೋಜನೆಯ ಆಶಯ.

Team Udayavani, Jul 15, 2023, 6:05 PM IST

ಬೆಳಗಾವಿ: ಕೆರೆಗಳ ಪುನರುಜೀವನಕ್ಕೆ ನೆರವಾದ ಅಮೃತ “ಖಾತ್ರಿ

ಬೆಳಗಾವಿ: ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆದು ನಿಲ್ಲಿಸಿ ಅದನ್ನು ಪರಿಪೂರ್ಣವಾಗಿ ಬಳಕೆ ಮಾಡಬೇಕು.
ಸುತ್ತಲಿನ ಪ್ರದೇಶದ ಅಂತರ್ಜಲ ಹೆಚ್ಚಿಸುವದರ ಜೊತೆಗೆ ಜನ ಮತ್ತು ಜಾನುವಾರುಗಳ ದಾಹ ತೀರಿಸಬೇಕು. ಈ ರೀತಿಯ ಜಲಜಾಗೃತಿ ಎಷ್ಟು ಮಾಡಿದರೂ ಕಡಿಮೆಯೇ. ಆದರೆ ಇದ್ದ ಸಂಪನ್ಮೂಲಗಳನ್ನು ಬಳಸಿಕೊಂಡು ಸುಂದರ ಕೆರೆ ನಿರ್ಮಿಸಿ ನೀರು
ಸಂಗ್ರಹ ಮಾಡುವದು ನಿಜಕ್ಕೂ ಹೆಮ್ಮೆ ಪಡುವ ಸಾಧನೆಯೇ ಎನ್ನಬಹುದು.

ಅಂತಹ ಒಂದು ಹೆಮ್ಮೆಯ ಕೆಲಸ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿಯಡಿ
ಅಮೃತ ಸರೋವರ ಯೋಜನೆಯ ಹೆಸರಿನಲ್ಲಿ ಹೆಮ್ಮೆಪಡುವ ಈ ಮಾದರಿ ಕಾರ್ಯವಾಗಿದೆ. ಇಂತಹ ಒಂದು ಒಳ್ಳೆಯ ಮಾದರಿ ಕೆಲಸಕ್ಕೆ ಪರಿಸರವಾದಿಗಳು ಮತ್ತು ಗ್ರಾಮೀಣ ಪ್ರದೇಶದ ಜನರು ಭೇಷ್‌ ಎಂದಿದ್ದಾರೆ. ಅಂತರ್ಜಲ ಮೂಲಗಳನ್ನು ಅಭಿವೃದ್ಧಿ
ಪಡಿಸುವುದು, ಮುಂಬರುವ ದಿನಗಳಲ್ಲಿ ನೀರಿಗಾಗಿ ನಡೆಸುವ ಪೈಪೋಟಿಯನ್ನು ತಪ್ಪಿಸುವುದು, ಜಲ ಸಂರಕ್ಷಣೆಯಿಂದ ಕೃಷಿ
ಚಟುವಟಿಕೆ, ಅರಣ್ಯೀಕರಣ ಅಭಿವೃದ್ಧಿ ಹಾಗೂ ಪರಿಸರ ಸಮತೋಲನವನ್ನು ರಕ್ಷಿಸಿ ಗ್ರಾಮೀಣ ಜನರ ಆರೋಗ್ಯ
ಸುಧಾರಿಸುವುದು, ಉದ್ಯೋಗಾವಕಾಶವನ್ನು ಕಲ್ಪಿಸುವುದು, ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡುವುದು, ಗ್ರಾಮೀಣ ಸಮುದಾಯದಲ್ಲಿ ಸಮರ್ಪಕ ನೀರಿನ ಸಂರಕ್ಷಣೆ, ಸದ್ಬಳಕೆ ಕುರಿತು ಅರಿವು ಮೂಡಿಸುವುದು ಈ ಅಮೃತ ಸರೋವರ ಯೋಜನೆಯ ಆಶಯ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, 15ನೇ ಹಣಕಾಸು ಆಯೋಗದ ಅನುದಾನ, ಗ್ರಾಪಂನ ಸ್ವಂತ ಸಂಪನ್ಮೂಲದ ನೆರವಿನಿಂದ ಅಮೃತ ಸರೋವರ ಯೋಜನೆಯಡಿ ಕೆರೆಗಳ ನಿರ್ಮಾಣ ಮಾಡಲಾಗಿದೆ. ಇದಲ್ಲದೆ ನರೇಗಾ
ಯೋಜನೆಯಡಿ ಕೆರೆಗೆ ನೀರು ಹರಿದು ಬರುವ ಕಾಲುವೆಗಳ ಪುನಶ್ಚೇತನ, ಕೆರೆಯ ಆವರಣದಲ್ಲಿ ಬೆಳೆದಿರುವ ಗಿಡಗಂಟೆಗಳನ್ನು
ತೆರವು ಮಾಡುವುದು, ಕೆರೆ ಕಟ್ಟೆಯ ದುರಸ್ತಿ, ಕೆರೆ ಅಂಚಿನ ಖಾಲಿ ಪ್ರದೇಶದಲ್ಲಿ ಸಸಿಗಳನ್ನು ಬೆಳೆಸುವುದು, ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿ ನಿಧಿಯಲ್ಲಿ ಕೆರೆಯ ಅಂಗಳವನ್ನು ಸುಂದರೀಕರಣಗೊಳಿಸುವುದು ಎಲ್ಲಕ್ಕಿಂತ ಮುಖ್ಯವಾಗಿ ಕೆರೆಯ ಬಳಿ ಧ್ವಜಾರೋಹಣ ಕಟ್ಟೆಯನ್ನು ನಿರ್ಮಾಣ ಮಾಡಲಾಗಿದ್ದು ಆ.15 ಮತ್ತು ಜ.26ರಂದು ಗ್ರಾಮದ ಹಿರಿಯರಿಂದ ಧ್ವಜಾರೋಹಣ ಮಾಡಲಾಗುತ್ತಿದೆ.

ಈ ಅಮೃತ ಸರೋವರದ ವಿಶೇಷ ಎಂದರೆ ನರೇಗಾ ಕಾರ್ಮಿಕರು ದಿನವಿಡೀ ಶ್ರಮವಹಿಸಿ ಕೆರೆಗಳ ನಿರ್ಮಾಣ ಮಾಡಿದ್ದಾರೆ. ಕಾರ್ಮಿಕರು ನಿರ್ಮಾಣ ಮಾಡಿರುವ ಕೆರೆಗಳಲ್ಲಿ ನೀರಿನ ರೂಪದಲ್ಲಿ ಅಮೃತ ಹರಿದುಬಂದು ಅಮೃತ ಸರೋವರವಾಗಿ ಬದಲಾಗಿವೆ. ಜಿಪಂ, ತಾಪಂ, ಗ್ರಾಪಂ ಅಧಿಕಾರಿಗಳ ನಿರಂತರ ಜಾಗೃತಿ, ಇದರಿಂದ ಆಗುವ ಪ್ರಯೋಜನದ ಬಗ್ಗೆ ಮಾಡಿದ ಮನವರಿಕೆ ಜಿಲ್ಲೆಯಲ್ಲಿ 140 ಕೆರೆಗಳ ನಿರ್ಮಾಣ ಮತ್ತು ಪುನರುಜ್ಜೀವನಕ್ಕೆ ಕಾರಣವಾಗಿದೆ. ಅಮೃತ ಸರೋವರ ಯೋಜನೆಯಡಿ ಜಿಲ್ಲೆಗೆ 283 ಕೆರೆಗಳ ನಿರ್ಮಾಣ ಮತ್ತು ಅಭಿವೃದ್ಧಿಯ ಗುರಿ ನೀಡಲಾಗಿದ್ದು ಇದುವರೆಗೆ 140 ಕೆರೆಗಳ ಕಾಮಗಾರಿ ಪೂರ್ಣಗೊಂಡಿದೆ. ಇದರಲ್ಲಿ 48 ಹೊಸ ಕೆರೆಗಳು ಮತ್ತು ಕೃಷಿ ಇಲಾಖೆ ವ್ಯಾಪ್ತಿಯ 92 ಕೆರೆಗಳು ಸೇರಿದ್ದು ಇದರಲ್ಲಿ ನೀರು ಹರಿದು ಬರುತ್ತಿದ್ದಂತೆ ಕೆರೆಯ ಸುತ್ತಲಿನ ಪರಿಸರವೇ ಬದಲಾಗಿದೆ.

ಎಲ್ಲೆಲ್ಲಿ ಎಷ್ಟು ಕೆರೆಗಳ ನಿರ್ಮಾಣ?
ಚಿಕ್ಕೋಡಿ ತಾಲೂಕಿನಲ್ಲಿ 84 ಕೆರೆಗಳ ಪೈಕಿ 65, ಅಥಣಿಯಲ್ಲಿ 19 ಕೆರೆಗಳಲ್ಲಿ 11, ರಾಮದುರ್ಗದ 26 ಕೆರೆಗಳ ಪೈಕಿ 17 ಮತ್ತು ಬೆಳಗಾವಿ ತಾಲೂಕಿನಲ್ಲಿ 29 ಕೆರಗಳ ಪೈಕಿ 10 ಕೆರೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. 127 ಕೆರೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಈ ಕೆರೆಗಳ ನಿರ್ಮಾಣದ ನಂತರ ಸುತ್ತಲಿನ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡಿಬಂದಿದೆ.

ಜಿಲ್ಲೆಯಲ್ಲಿ ಅಮೃತ ಸರೋವರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. ನಿಗದಿತ ಗುರಿಯಲ್ಲಿ
ಈಗಾಗಲೇ ಶೇ.50ರಷ್ಟು ಕೆರೆಗಳನ್ನು ನಿರ್ಮಾಣ ಮತ್ತು ಪುನರುಜ್ಜೀವನಗೊಳಿಸಲಾಗಿದೆ.
ಹರ್ಷಲ್‌ ಭೋಯರ್‌,
ಜಿಪಂ ಸಿಇಒ, ಬೆಳಗಾವಿ

ಕೇಶವ ಆದಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.