ಮಹನೀಯರ ಜೀವನವೇ ಸಂದೇಶ
ಮಹಾತ್ಮರ ಮಾರ್ಗದಲ್ಲಿ ಸಾಗಿಶಿಸ್ತು ರೂಢಿಸಿಕೊಂಡರೆ ಜಗತ್ತೇ ಗೆಲ್ಲಬಹುದು
Team Udayavani, Feb 16, 2020, 5:26 PM IST
ಬೆಳಗಾವಿ: ಮಹನೀಯರ ಜೀವನವೇ ಒಂದು ಸಂದೇಶ. ಅಂಥವರನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೇ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯಬೇಕಿದೆ ಎಂದು ಕೆ.ಎಸ್.ಎಫ್.ಸಿ ನಿವೃತ್ತ ಪ್ರಧಾನ ವ್ಯವಸ್ಥಾಪಕ ಪಿ.ಆರ್. ಜಾಧವ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಶನಿವಾರ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಂತ ಸೇವಾಲಾಲ ಜಯಂತಿ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಸಮಾಜದ ಮಹನೀಯರು ಮನುಕುಲದ ಉದ್ಧಾರಕ್ಕಾಗಿ ಒಳ್ಳೆಯ ಸಂದೇಶಗಳನ್ನು ಕೊಟ್ಟು ಹೋಗಿದ್ದಾರೆ. ಅವರ ಸಂದೇಶ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ಸೇವಾಲಾಲರು ಕೇವಲ ಬಂಜಾರ ಸಮುದಾಯಕ್ಕೆ ಮಾತ್ರ ಕೆಲಸ ಮಾಡಲಿಲ್ಲ. ಬದಲಾಗಿ ಎಲ್ಲ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಸಮಾಜಕ್ಕೆ ಅವರ ಕೊಡುಗೆ ಅಪಾರ. ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಆಧುನಿಕ ಯುಗದಲ್ಲಿ ಕಲಿಯಬೇಕಾದದ್ದು ತುಂಬಾ ಇದೆ. ಆದ್ದರಿಂದ ಶಿಸ್ತು ರೂಢಿಸಿಕೊಂಡರೆ ಜಗತ್ತನ್ನು ಗೆಲ್ಲಲು ಸಾಧ್ಯ ಎಂದು ಹೇಳಿದರು.
ಸಮಾಜದ ಮುಖಂಡರಾದ ಎಂ. ಟಿ.ರಾಠೊಡ ಮಾತನಾಡಿ, ಸಮಾಜದ ಕಟ್ಟಳೆಗಳನ್ನು ಮುರಿಯದೇ ಸೇವಾಲಾಲರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು.
ಹೇಮಂತ ಲಮಾಣಿ ಮತ್ತು ತಂಡದವರು ವಚನ ಗಾಯನ ಕಾರ್ಯಕ್ರಮ ನಡಸಿಕೊಟ್ಟರು. ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಗೋಪಾಲ ಲಮಾಣಿ, ಎಂ.ಪಿ.ರಾಠೊಡ, ಆರ್ .ಟಿ. ರಾಠೊಡ, ಎಸ್. ಪಿ.ರಾಠೊಡ, ಶೈಲಜ ಚವಾಣ, ಕೆ.ಸಿ. ಸತೀಶ್, ಮಾಜಿ ನಗರ ಸೇವಕಿ ಜಯಶ್ರೀ ಮಾಳಗಿ, ದಲಿತ ಮುಖಂಡ ಮಲ್ಲೇಶ ಚೌಗಲೆ ಉಪಸ್ಥಿತರಿದ್ದರು.
ಲಂಬಾಣಿ ವೇಷದಲ್ಲಿ ಸಚಿವರು: ಸೇವಾಲಾಲ ಜಯಂತಿಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಪಾರಂಪರಿಕ ಲಂಬಾಣಿ ವೇಷದಲ್ಲಿ ಬಂದು ಎಲ್ಲರ ಗಮನಸೆಳೆದರು. ಜಾನಪದ ಕಲಾವಿದರ ಜೊತೆಗೆ ಸೇವಾಲಾಲರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಸಚಿವರು, ಲಂಬಾಣಿ ಸಮುದಾಯದ ವಿಶೇಷ ಉಡುಪು ಧರಿಸಿ ಜಗ್ಗಲಗಿ ಬಾರಿಸುವ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ