![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬೆಳಗಾವಿ: ಗಮನಸೆಳೆದ ಮಹಿಳೆಯರ ಸಾರಿ ವಾಕ್ಥಾನ್
ಸೀರೆ ಭಾರತೀಯ ಮಹಿಳೆಯರ ಸಂಸ್ಕೃತಿಯ ಪ್ರತೀಕ
Team Udayavani, Mar 11, 2024, 10:46 AM IST
![ಬೆಳಗಾವಿ: ಗಮನಸೆಳೆದ ಮಹಿಳೆಯರ ಸಾರಿ ವಾಕ್ಥಾನ್](https://www.udayavani.com/wp-content/uploads/2024/03/Nari-620x269.jpg)
ಉದಯವಾಣಿ ಸಮಾಚಾರ
ಬೆಳಗಾವಿ: ಸೀರೆಯುಟ್ಟ ಯುವತಿಯರು, ಮಹಿಳೆಯರು, ವೃದ್ಧೆಯರು ಸೇರಿದಂತೆ ಎಲ್ಲ ವಯೋಮಾನದ ಸುಮಾರು 500ಕ್ಕೂ ಹೆಚ್ಚು ಜನ ಸುಮಾರು 3 ಕಿ.ಮೀ. ಸಾರಿ ವಾಕ್ಥಾನ್ನಲ್ಲಿ ಪಾಲ್ಗೊಂಡು ಗಮನಸೆಳೆದರು. ರೋಟರಿ ಕ್ಲಬ್ ಆಫ್ ಬೆಳಗಾವಿ ಎಲೈಟ್, ಮಾರವಾಡಿ ಯುವ ಮಂಚ್ ಮಹಿಳಾ ವಿಭಾಗ ಪಂಖ್ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಸಾರಿ ವಾಕಥಾನ್ ನಗರದ ಹಿಂದವಾಡಿಯ ಗೋಮಟೇಶ ವಿದ್ಯಾಪೀಠದಿಂದ 3 ಕಿ.ಮೀ. ನಡೆಯಿತು.
ಸೀರೆಯುಟ್ಟ ನಾರಿಯರು ವಾಕ್ಥಾನ್ನಲ್ಲಿ ಪಾಲ್ಗೊಂಡಿದ್ದರು. ಸೀರೆಯುಟ್ಟು ಬೂಟ್ ಹಾಕಿದ ಮಹಿಳೆಯರು, ಮಡಿಲಲ್ಲಿ ಮಗುವನ್ನು ಕಟ್ಟಿಕೊಂಡಿದ್ದ ಮಹಿಳೆ, ದೇಶದ ವಿವಿಧ ಭಾಗಗಳ ವಿಶಿಷ್ಟ ಸಾಂಪ್ರದಾಯಿಕ ಶೈಲಿಯಲ್ಲಿ ಸೀರೆಯುಟ್ಟಿದ್ದ ನಾರಿಯರು ಗಮನಸೆಳೆದರು. ಟೋಪಿ ಧರಿಸಿ ನಾವು ಯಾರಿಗೂ ಕಮ್ಮಿಯಿಲ್ಲ ಎಂಬಂತೆ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಗೋಮಟೇಶ ವಿದ್ಯಾಪೀಠದಿಂದ ಆರಂಭವಾದ ಸಾರಿ ವಾಕ್ಥಾನ್ ನವಹಿಂದ್ ಸೊಸೆ„ಟಿ ಮುಖ್ಯ ಕಚೇರಿ, ಆರ್ಪಿಡಿ ಕ್ರಾಸ್ ಮಾರ್ಗದಿಂದ ಗೋಮಟೇಶ ವಿದ್ಯಾಪೀಠದವರೆಗೆ ಸಾಗಿತು. ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಬಾಗವಹಿಸಿದ್ದರು. 70ಕ್ಕೂ ಅಧಿಕ ವಯಸ್ಸಿನ ಅಜ್ಜಿಯರೂ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಮಾರವಾಡಿ ಯುವ ಮಂಚ್ ಮಹಿಳಾ ವಿಭಾಗ ಪಂಖ ಅಧ್ಯಕ್ಷೆ ಮನೀಷಾ ಉಪಾಧ್ಯಾಯ ಮಾತನಾಡಿ, ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಸೀರೆ ಮರೆಯಾಗುತ್ತಿರುವ ಇಂದಿನ ದಿನಮಾನದಲ್ಲಿ ಸಾರಿ ವಾಕ್ಥಾನ್ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ,
ಭಾರತೀಯ ಮಹಿಳೆಯರು ಸೀರೆಯಲ್ಲಿ ಅಂದ-ಚಂದವಾಗಿ ಕಾಣುತ್ತಾರೆ. ಸೀರೆ ಭಾರತೀಯ ಮಹಿಳೆಯರ ಸಂಸ್ಕೃತಿಯ ಪ್ರತೀಕ. ಇದನ್ನು ಸಂರಕ್ಷಿಸಲು ಈ ವಾಕ್ಥಾನ್ ಹಮ್ಮಿಕೊಳ್ಳಲಾಗಿದೆ. ಸೀರೆ ಉಡುವ ಸಂಪ್ರದಾಯವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಪೊಲೀಸ್ ಕಮಿಷನರೆಟ್ದಿಂದ ಮ್ಯಾರಥಾನ್
ಬೆಳಗಾವಿ ಮಹಾನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ ಹಿನ್ನೆಲೆಯಲ್ಲಿ ಮಾದಕ ವ್ಯಸನ ವಿರುದ್ಧ ಜಾಗೃತಿಯ ಮ್ಯಾರಥಾನ್ ನಡೆಯಿತು. ನಗರ ಪೊಲೀಸ್ ಕಮಿಷನರ್ ಕಚೇರಿಯಿಂದ ಆರಂಭವಾದ ಮ್ಯಾರಥಾನ್ ನಲ್ಲಿ ಪೊಲೀಸ್ ಅ ಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ಸೇರಿ 500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.