ಬೆಳಗಾವಿ: ಗಮನಸೆಳೆದ ಮಹಿಳೆಯರ ಸಾರಿ ವಾಕ್‌ಥಾನ್‌‌

ಸೀರೆ ಭಾರತೀಯ ಮಹಿಳೆಯರ ಸಂಸ್ಕೃತಿಯ ಪ್ರತೀಕ

Team Udayavani, Mar 11, 2024, 10:46 AM IST

ಬೆಳಗಾವಿ: ಗಮನಸೆಳೆದ ಮಹಿಳೆಯರ ಸಾರಿ ವಾಕ್‌ಥಾನ್‌‌

ಉದಯವಾಣಿ ಸಮಾಚಾರ
ಬೆಳಗಾವಿ: ಸೀರೆಯುಟ್ಟ ಯುವತಿಯರು, ಮಹಿಳೆಯರು, ವೃದ್ಧೆಯರು ಸೇರಿದಂತೆ ಎಲ್ಲ ವಯೋಮಾನದ ಸುಮಾರು 500ಕ್ಕೂ ಹೆಚ್ಚು ಜನ ಸುಮಾರು 3 ಕಿ.ಮೀ. ಸಾರಿ ವಾಕ್‌ಥಾನ್‌ನಲ್ಲಿ ಪಾಲ್ಗೊಂಡು ಗಮನಸೆಳೆದರು. ರೋಟರಿ ಕ್ಲಬ್‌ ಆಫ್‌ ಬೆಳಗಾವಿ ಎಲೈಟ್‌, ಮಾರವಾಡಿ ಯುವ ಮಂಚ್‌ ಮಹಿಳಾ ವಿಭಾಗ ಪಂಖ್‌ ವತಿಯಿಂದ ರವಿವಾರ ಹಮ್ಮಿಕೊಂಡಿದ್ದ ಸಾರಿ ವಾಕಥಾನ್‌ ನಗರದ ಹಿಂದವಾಡಿಯ ಗೋಮಟೇಶ ವಿದ್ಯಾಪೀಠದಿಂದ 3 ಕಿ.ಮೀ. ನಡೆಯಿತು.

ಸೀರೆಯುಟ್ಟ ನಾರಿಯರು ವಾಕ್‌ಥಾನ್‌ನಲ್ಲಿ ಪಾಲ್ಗೊಂಡಿದ್ದರು. ಸೀರೆಯುಟ್ಟು ಬೂಟ್‌ ಹಾಕಿದ ಮಹಿಳೆಯರು, ಮಡಿಲಲ್ಲಿ ಮಗುವನ್ನು ಕಟ್ಟಿಕೊಂಡಿದ್ದ ಮಹಿಳೆ, ದೇಶದ ವಿವಿಧ ಭಾಗಗಳ ವಿಶಿಷ್ಟ ಸಾಂಪ್ರದಾಯಿಕ ಶೈಲಿಯಲ್ಲಿ ಸೀರೆಯುಟ್ಟಿದ್ದ ನಾರಿಯರು ಗಮನಸೆಳೆದರು. ಟೋಪಿ ಧರಿಸಿ ನಾವು ಯಾರಿಗೂ ಕಮ್ಮಿಯಿಲ್ಲ ಎಂಬಂತೆ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು.

ಗೋಮಟೇಶ ವಿದ್ಯಾಪೀಠದಿಂದ ಆರಂಭವಾದ ಸಾರಿ ವಾಕ್‌ಥಾನ್‌ ನವಹಿಂದ್‌ ಸೊಸೆ„ಟಿ ಮುಖ್ಯ ಕಚೇರಿ, ಆರ್‌ಪಿಡಿ ಕ್ರಾಸ್‌ ಮಾರ್ಗದಿಂದ ಗೋಮಟೇಶ ವಿದ್ಯಾಪೀಠದವರೆಗೆ ಸಾಗಿತು. ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಬಾಗವಹಿಸಿದ್ದರು. 70ಕ್ಕೂ ಅಧಿಕ ವಯಸ್ಸಿನ ಅಜ್ಜಿಯರೂ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಮಾರವಾಡಿ ಯುವ ಮಂಚ್‌ ಮಹಿಳಾ ವಿಭಾಗ ಪಂಖ ಅಧ್ಯಕ್ಷೆ ಮನೀಷಾ ಉಪಾಧ್ಯಾಯ ಮಾತನಾಡಿ, ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಸೀರೆ ಮರೆಯಾಗುತ್ತಿರುವ ಇಂದಿನ ದಿನಮಾನದಲ್ಲಿ ಸಾರಿ ವಾಕ್‌ಥಾನ್‌ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ,

ಭಾರತೀಯ ಮಹಿಳೆಯರು ಸೀರೆಯಲ್ಲಿ ಅಂದ-ಚಂದವಾಗಿ ಕಾಣುತ್ತಾರೆ. ಸೀರೆ ಭಾರತೀಯ ಮಹಿಳೆಯರ ಸಂಸ್ಕೃತಿಯ ಪ್ರತೀಕ. ಇದನ್ನು ಸಂರಕ್ಷಿಸಲು ಈ ವಾಕ್‌ಥಾನ್‌ ಹಮ್ಮಿಕೊಳ್ಳಲಾಗಿದೆ. ಸೀರೆ ಉಡುವ ಸಂಪ್ರದಾಯವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಪೊಲೀಸ್‌ ಕಮಿಷನರೆಟ್‌ದಿಂದ ಮ್ಯಾರಥಾನ್‌
ಬೆಳಗಾವಿ ಮಹಾನಗರ ಪೊಲೀಸ್‌ ಕಮಿಷನರೇಟ್‌ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ ಹಿನ್ನೆಲೆಯಲ್ಲಿ ಮಾದಕ ವ್ಯಸನ ವಿರುದ್ಧ ಜಾಗೃತಿಯ ಮ್ಯಾರಥಾನ್‌ ನಡೆಯಿತು. ನಗರ ಪೊಲೀಸ್‌ ಕಮಿಷನರ್‌ ಕಚೇರಿಯಿಂದ ಆರಂಭವಾದ ಮ್ಯಾರಥಾನ್‌ ನಲ್ಲಿ ಪೊಲೀಸ್‌ ಅ ಧಿಕಾರಿಗಳು, ಪೊಲೀಸ್‌ ಸಿಬ್ಬಂದಿ, ಸಾರ್ವಜನಿಕರು ಸೇರಿ 500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.