ಸಹಕಾರಿಯಲ್ಲಿ ಮುಂಚೂಣಿ ಸಾಧಿಸಿದ ಬೆಳಗಾವಿ


Team Udayavani, Nov 15, 2019, 12:37 PM IST

bg-tdy-1

ಬೆಳಗಾವಿ: ರಾಜ್ಯದ ಸಹಕಾರ ಕ್ಷೇತ್ರದಲ್ಲಿ ಗಡಿನಾಡು ಬೆಳಗಾವಿಗೆ ವಿಶಿಷ್ಠ ಸ್ಥಾನ. ರಾಜ್ಯಕ್ಕೆ ಮಾದರಿಯಾಗಿರುವ ಸಹಕಾರಿ ಸಂಸ್ಥೆಗಳನ್ನು ಹೊಂದಿ ಮುಂಚೂಣಿಯಲ್ಲಿರುವ ಜಿಲ್ಲೆ. 1959 ರ ಕಾಯ್ದೆಯಡಿ 4500 ಕ್ಕೂ ಅಧಿಕ ಹಾಗೂ ಸೌಹಾರ್ದ ಸಹಕಾರಿ ಕಾಯ್ದೆಯಡಿ 1200ಕ್ಕೂ ಹೆಚ್ಚು ಸೇರಿದಂತೆ ಒಟ್ಟು 5500 ಕ್ಕೂ ಅಧಿಕ ಸಹಕಾರಿ ಸಂಸ್ಥೆಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ.

1904 ರಲ್ಲಿ ಪ್ರಥಮ ಸಹಕಾರ ಸಂಘಗಳ ಕಾಯ್ದೆ ಜಾರಿಯಾದಾಗಲೇ ಜಿಲ್ಲೆಯಲ್ಲಿ ಸಹಕಾರ ಚಳವಳಿಯ ಜನ್ಮವಾಯಿತು. ಅದರ ವ್ಯಾಪ್ತಿ ಕೇವಲ ಕೃಷಿ ಸಾಲ ನೀಡಲು ಸೀಮಿತವಾಗಿತ್ತು. 1905 ರಲ್ಲಿ ಹುಕ್ಕೇರಿ ತಾಲೂಕಿನ ಬೆಲ್ಲದಬಾಗೇವಾಡಿಯಲ್ಲಿ ಪ್ರಥಮ ಪ್ರಾಥಮಿಕ ಕೃಷಿ ಪತ್ತಿನ ಸಂಘ ಸ್ಥಾಪನೆಯಾಯಿತು. ಮುಂದೆ 1912 ರ ಸಹಕಾರ ಸಂಘಗಳ ಕಾಯಿದೆಯೂ ಕೃಷಿಯೇತರ ಸಾಲ ನೀಡುವ ಹಾಗೂ ಇತರ ಸಹಕಾರಿ ಸಂಘಗಳ ಸ್ಥಾಪನೆಗೆ ಅವಕಾಶ ನೀಡಿದ್ದರಿಂದ ಜಿಲ್ಲೆಯ ಸಹಕಾರಿ ಚಳವಳಿ ಇನ್ನಷ್ಟು ಚುರುಕುಗೊಂಡಿತು.

1918 ರಲ್ಲಿ ಜಿಲ್ಲೆಯ ಮಾತೃಸಂಸ್ಥೆಯಾಗಿ ಸ್ಥಾಪನೆಗೊಂಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಜಿಲ್ಲೆಯಲ್ಲಿ ಸಹಕಾರ ಆಂದೋಲನವು ಪರಿಣಾಮಕಾರಿಯಾಗಿ ಸಾಗಲು ಎಲ್ಲ ಸಹಕಾರ ಸಂಘಗಳಿಗೆ ಸಾಲಸೌಲಭ್ಯ ನೀಡಿ ನೆರವಾಗಿದೆ. ಸಹಕಾರಿ ಕ್ಷೇತ್ರದಲ್ಲಿ ಜಿಲ್ಲೆ ಮುಂಚೂಣಿಯಲ್ಲಿದ್ದರೂ ಮೊದಲಿನಂತೆ ಸದೃಢತೆ ಈಗ ಕಾಣುತ್ತಿಲ್ಲ. ಹತ್ತಾರು ಸಮಸ್ಯೆಗಳು ಈ ಕ್ಷೇತ್ರವನ್ನು ಕಾಡುತ್ತಿವೆ. ಈಗಿನ ಡಿಜಿಟಲ್‌ ಯುಗದಲ್ಲಿ ಆರ್ಥಿಕ ಹೊರೆ ಹೆಚ್ಚಾಗುತ್ತಿವೆ. ಸರಕಾರದ ಸಾಲಮನ್ನಾ ಯೋಜನೆಗಳು ಸಹಕಾರ ಸಂಘಗಳು ಮೇಲೇಳದಂತೆ ಮಾಡಿವೆ. ಅದರಲ್ಲೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗಿಂತ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗಳ ಸ್ಥಿತಿ ಬಹಳ ಶೋಚನೀಯವಾಗಿವೆ. ಹೆಚ್ಚು ಹೆಚ್ಚು ಗ್ರಾಹಕರನ್ನು ಆಕರ್ಷಿಸಲು ಈ ಕ್ರೆಡಿಟ್‌ ಸೊಸೈಟಿಗಳು ಸಾಲದ ಮೇಲೆ ಸಾಲ ಕೊಡುತ್ತವೆ. ಆದರೆ ಅದರ ಮರುಪಾವತಿ ಬಹಳ ಕಷ್ಟವಾದ ನಂತರ ಈ ಸೊಸೈಟಿಗಳು ಸಂಕಷ್ಟಕ್ಕೆ ಸಿಲುಕುತ್ತಿವೆ.

ಇದಕ್ಕೆ ಸರಕಾರವೇ ಒಂದು ಸದೃಢ ಕಾನೂನು ರಚಿಸಬೇಕು ಎಂಬುದು ಸಹಕಾರಿ ಮುಖಂಡರ ಅಭಿಪ್ರಾಯ. ಜಿಲ್ಲೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು, ಎಪಿಎಂಸಿ ಪಿಎಲ್‌ಡಿ ಬ್ಯಾಂಕ್‌ ಕ್ಷೇತ್ರಗಳಲ್ಲಿ ಸಮಸ್ಯೆ ಇಲ್ಲ. ಒಳ್ಳೆಯ ವ್ಯವಸ್ಥಿತ ವಾತಾವರಣ ಇದೆ. ಆದರೆ ಸೌಹಾರ್ದ ಸೊಸೈಟಿಗಳಲ್ಲಿ ಇದು ಕಾಣುತ್ತಿಲ್ಲ. ಸಹಕಾರಿ ಹೆಸರಿನಲ್ಲಿ ಬ್ಯಾಂಕ್‌ಗಳನ್ನು ಆರಂಭ ಮಾಡಿರುವ ವ್ಯಕ್ತಿಗಳಿಂದ ಜನರಿಗೆ ಸಹಾಯ ಸೌಲಭ್ಯ ಸಿಗುತ್ತಿಲ್ಲ. ಬದಲಾಗಿ ಅವರ ಹೆಸರಿನಲ್ಲಿ ಕ್ಷೇತ್ರದ ದುರುಪಯೋಗವಾಗುತ್ತಿದೆ ಎಂಬುದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಮೇಶ ಕತ್ತಿ ಅಭಿಪ್ರಾಯ.

ನಮ್ಮಲ್ಲಿ ಅಕ್ಷರಸ್ಥರ ಸಂಖ್ಯೆ ಬಹಳ ಕಡಿಮೆ. ತಿಳಿವಳಿಕೆ ಕೊರತೆ ಸಹ ಇದೆ. ಬ್ಯಾಂಕ್‌ ನೋಡಿದ ತಕ್ಷಣ ವಿಚಾರ ಮಾಡದೇ ಹಣ ಹಾಕುತ್ತಾರೆ. ಆದರೆ ಒಂದು ದಿನ ಈ ದುಡ್ಡು ಸಂಗ್ರಹ ಮಾಡಿದವರು ನಾಪತ್ತೆಯಾಗುತ್ತಾರೆ. ಒಂದರ್ಥದಲ್ಲಿ ಸಹಕಾರಿ ಕ್ಷೇತ್ರದ ಮೂಲಕ ಕಾಯ್ದೆ ಬದ್ಧವಾಗಿ ಲೂಟಿ ಮಾಡುವ ಕೆಲಸ ನಡೆದಿದೆ. ಇದರ ಬಗ್ಗೆ ಸರಕಾರ ಎಚ್ಚರ ವಹಿಸಬೇಕು ಎಂಬುದು ರಮೇಶ ಕತ್ತಿ ಅವರ ಆಗ್ರಹ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಂತ್ರಣದಲ್ಲಿರುವುದರಿಂದ ಅವುಗಳ ಸ್ಥಿತಿ ಅಷ್ಟು ಕೆಟ್ಟದಾಗಿಲ್ಲ. ಆದರೆ ಇದೇ ರೀತಿಯ ನಿಯಂತ್ರಣ ಅಥವಾ ನಿರ್ವಹಣೆ ಕ್ರೆಡಿಟ್‌ ಸೌಹಾರ್ದ ಸಂಘಗಳ ಮೇಲೆ ಇಲ್ಲ. ಇದು ಸಮಸ್ಯೆಯ ಮೂಲ ಕಾರಣ ಎಂಬುದು ಕರ್ನಾಟಕ ಸಹಕಾರ ಸೌಹಾರ್ದ ಮಹಾಮಂಡಳ ಉಪಾಧ್ಯಕ್ಷ ಜಗದೀಶ ಕವಟಗಿಮಠ ಅನಿಸಿಕೆ. ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿಯಲ್ಲಿ ಸಹಕಾರಿ ಸಂಘಗಳು ಬಹಳ ಒಳ್ಳೆಯ ಕೆಲಸ ಮಾಡುತ್ತಿವೆ.

ಈ ಸಂಘಗಳಿಂದ ಗ್ರಾಮೀಣ ಪ್ರದೇಶದ ಜನರಿಗೆ ಬಹಳಷ್ಟು ಅನುಕೂಲವಾಗಿದೆ. ಜಿಲ್ಲೆಯಲ್ಲಿ 5500 ಸಹಕಾರಿ ಸಂಘಗಳು ಹಾಗೂ 1200 ಕ್ಕೂ ಅಧಿಕ ಸೌಹಾರ್ದ ಸೊಸೈಟಿಗಳು ಕಾರ್ಯನಿರ್ವಹಿಸುತ್ತಿವೆ. ಸಹಕಾರಿ ಸಂಘಗಳನ್ನು ಸ್ಥಾಪನೆ ಮಾಡಿದ ಮೇಲೆ ವಿವಿಧ ಕಾರಣಗಳಿಂದ ಅವುಗಳನ್ನು ನಡೆಸಲು ಸಾಧ್ಯವಾಗಿರುವುದಿಲ್ಲ, ಅಂತಹ ಸುಮಾರು 270 ಸೊಸೈಟಿಗಳು ತಮ್ಮ ಕಾರ್ಯವನ್ನು ಸ್ಥಗಿತಗೊಳಿಸಿವೆ ಎಂದು ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀನಿವಾಸ ಹೇಳಿದರು.

 

-ಕೇಶವ ಆದಿ

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.