ಬೆಳಗಾವಿ: ಶುರುವಾಯ್ತು ಮತ್ತದೇ ದುರಸ್ತಿ-ಶಿಕ್ಷಕರ ಸಮಸ್ಯೆ


Team Udayavani, May 29, 2023, 11:33 AM IST

ಬೆಳಗಾವಿ: ಶುರುವಾಯ್ತು ಮತ್ತದೇ ದುರಸ್ತಿ-ಶಿಕ್ಷಕರ ಸಮಸ್ಯೆ

ಬೆಳಗಾವಿ: ಸರಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚುತ್ತಿದ್ದರೂ ಶಾಲೆಗಳ ಸ್ಥಿತಿ ಮಾತ್ರ ಇನ್ನೂ ಬದಲಾಗಿಲ್ಲ. ವರ್ಷಗಳ ಮೇಲೆ ವರ್ಷಗಳು ಉರುಳಿದರೂ ಶಾಲೆಗಳ ದುರಸ್ತಿಯಾಗಬೇಕು ಎಂಬ ಕೂಗು ಇನ್ನೂ ಕೇಳಿಸುತ್ತಲೇ ಇದೆ. ಹೊಸ ಶೆ„ಕ್ಷಣಿಕ ವರ್ಷದಲ್ಲಿ ಈ ಕೂಗು ಮತ್ತಷ್ಟು ಹೆಚ್ಚಾಗಿದೆ.

ಈ ಸಮಸ್ಯೆಗಳಿಂದ ಗಡಿ ಜಿಲ್ಲೆ ಬೆಳಗಾವಿ ಹೊರತಾಗಿಲ್ಲ. ಜಿಲ್ಲೆಯಲ್ಲಿ ಉಂಟಾದ ಸತತ ಪ್ರವಾಹ ಹಾಗೂ ಅತಿಯಾದ ಮಳೆಯಿಂದ ಶಾಲೆಗಳ ಸ್ಥಿತಿ ಶೋಚನೀಯವಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಶಾಲೆಗಳ ದುರಸ್ತಿ ಮತ್ತು ಮರು ನಿರ್ಮಾಣ ಕಾರ್ಯ ನಿರಂತರವಾಗಿ ನಡೆದಿರುವದೇ ಇದಕ್ಕೆ ನಿದರ್ಶನ. ಶಿಕ್ಷಣಕ್ಕೆ ನಮ್ಮ ಮೊದಲ ಆದ್ಯತೆ ಎಂದು ಹೇಳುವ ಸರಕಾರ ಕೊಠಡಿಗಳ ನಿರ್ಮಾಣ ಮತ್ತು ಶಿಕ್ಷಕರ ನೇಮಕಾತಿ ವಿಷಯದಲ್ಲಿ ಮಾತ್ರ ಮೀನಾಮೇಷ ಎಣಿಸುತ್ತಿರುವದು ಅಚ್ಚರಿ ಎನಿಸಿದರೂ ಸತ್ಯ.

ಬೇಸಿಗೆ ರಜೆ ಮುಗಿದು ಮಕ್ಕಳು ಸಂತೋಷದಿಂದ ಶಾಲೆಗೆ ಮರಳಿದರೆ ಶಿಥಿಲಾವಸ್ಥೆಯಲ್ಲಿರುವ ಸರಕಾರಿ ಶಾಲೆಗಳ ಕೊಠಡಿಗಳು ಆತಂಕದಿಂದ ನೋಡುವಂತೆ ಮಾಡಿವೆ. ಶಾಲೆಯ ಆರಂಭದ ಖುಷಿ, ಸೌಲಭ್ಯಗಳ ವಿಷಯದಲ್ಲಿ ಕಾಣುತ್ತಿಲ್ಲ. ಸಣ್ಣಪುಟ್ಟ ದುರಸ್ತಿ ಇದ್ದರೂ ಸಕಾಲಕ್ಕೆ ಸರಕಾರದಿಂದ ಅನುದಾನ ಬರದೇ ಇರುವದು ನಿರಾತಂಕ ಶಿಕ್ಷಣಕ್ಕೆ ಸಮಸ್ಯೆ ತಂದೊಡ್ಡಿದೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಜಿಲ್ಲೆಯಲ್ಲಿ ಒಟ್ಟು 1617 ಶಾಲಾ ಕೊಠಡಿಗಳ ದುರಸ್ತಿಯಾಗಬೇಕಾಗಿದೆ. ಕೆಲ ಕೊಠಡಿಗಳಲ್ಲಿ ಚಾವಣಿ ಹಾಳಾಗಿದ್ದರೆ, ಇನ್ನೂ ಕೆಲವೆಡೆ ನೆಲಹಾಸು, ಕಿಟಕಿ, ಬಾಗಿಲು ಮೊದಲಾದವು ಸರಿ ಇಲ್ಲ. ಸ್ವಲ್ಪ ಮಳೆಯಾದರೂ ಸಾಕು ಸೋರುತ್ತವೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ಕಲಿಸುವುದು ಬೇಡ ಎಂಬ ನಿರ್ಧಾರಕ್ಕೆ ಶಿಕ್ಷಣ ಇಲಾಖೆ ಬಂದಿದೆ.

ಅಂಕಿ ಅಂಶಗಳ ಪ್ರಕಾರ ದುರಸ್ತಿಯಾಗಬೇಕಿರುವ ಶಾಲಾ ಕೊಠಡಿಗಳ ಸಂಖ್ಯೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹೆಚ್ಚಿದೆ. ಅತಿಯಾದ ಮಳೆ ಹಾಗೂ ಕೃಷ್ಣಾ,, ಘಟಪ್ರಭಾ, ಹಿರಣ್ಯಕೇಶಿ ನದಿಗಳ ಪ್ರವಾಹದಿಂದ ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ, ರಾಯಬಾಗ, ಹುಕ್ಕೇರಿ, ಗೋಕಾಕ ಮತ್ತು ಮೂಡಲಗಿ ಈ ಎಂಟು ವಲಯಗಳಲ್ಲಿ ಅತೀ ಹೆಚ್ಚು ಹಾನಿಯಾಗಿದ್ದು 1200 ಕ್ಕೂ ಹೆಚ್ಚು ಕೊಠಡಿಗಳ ದುರಸ್ತಿ ಮತ್ತು ಮರು ನಿರ್ಮಾಣ ಕಾರ್ಯ ನಡೆಯಬೇಕಿದೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಸುಮಾರು 417 ಶಾಲಾ ಕೊಠಡಿಗಳು ದುರಸ್ತಿಯ ನಿರೀಕ್ಷೆಯಲ್ಲಿವೆ. ಜಿಲ್ಲೆಯಲ್ಲಿ 2019-20 ರಲ್ಲಿ ಶಾಲಾ ಕಟ್ಟಡಗಳ ದುರಸ್ತಿಗೆ 152 ಲಕ್ಷ ರೂ ಮತ್ತು ಮರು ನಿರ್ಮಾಣಕ್ಕೆ 633 ಲಕ್ಷ ರೂ ಅನುದಾನ ಬಿಡುಗಡೆಯಾಗಿತ್ತು. ಎನ್‌ ಡಿ ಆರ್‌ ಎಫ್‌ ದಲ್ಲಿ ದುರಸ್ತಿಗೆ 2496.87 ಲಕ್ಷ ರೂ ಅನುದಾನ ಬಂದಿತ್ತು. 2022-23 ರಲ್ಲಿ ದುರಸ್ತಿಗೆ 200 ಲಕ್ಷ ರೂ., ವಿವೇಕ ಶಾಲಾ ಯೋಜನೆಯಡಿ ದುರಸ್ತಿಗೆ 127.50 ಲಕ್ಷ ಮತ್ತು ಮರು ನಿರ್ಮಾಣಕ್ಕೆ 1761.60 ಲಕ್ಷ ರೂ. ಅನುದಾನ ಬಿಡುಗಡೆಯಾಗಿತ್ತು.

ಬಿಡುಗಡೆಯಾದ ಅನುದಾನದಲ್ಲಿ 2019 ರಲ್ಲಿ 39 ಕಟ್ಟಡಗಳ ದುರಸ್ತಿ, 58 ಕಟ್ಟಡಗಳ ಮರು ನಿರ್ಮಾಣ, ಎಸ್‌ ಡಿ ಆರ್‌ ಎಫ್‌ ಅಡಿಯಲ್ಲಿ 807 ಕಟ್ಟಡಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. 2022-23 ರಲ್ಲಿ 11 ಕಟ್ಟಡಗಳ ದುರಸ್ತಿ ಕಾರ್ಯ ಮತ್ತು ಆರು ಕಟ್ಟಡಗಳ ಮರು ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿವೆ. 211 ಕಟ್ಟಡಗಳ ದುರಸ್ತಿ ಮತ್ತು 254 ಕಟ್ಟಡಗಳ ಮರು
ನಿರ್ಮಾಣ ಕಾರ್ಯ ಪ್ರಾರಂಭದ ಹಂತದಲ್ಲಿವೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಶಾಲೆಗಳ ದುರಸ್ತಿ ಮತ್ತು ಮರು ನಿರ್ಮಾಣಕ್ಕಾಗಿ ಮೂರು ಕೋಟಿ ರೂ ಗಳ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿದ್ದು ಅದರಲ್ಲಿ 30 ಲಕ್ಷ ರೂ. ಬಿಡುಗಡೆಯಾಗಿದೆ.

ಇದಲ್ಲದೆ ಮೂರು ಕೋಟಿ ರೂ ಗಳ ಮತ್ತೂಂದು ಪ್ರಸ್ತಾವನೆಯನ್ನು ಸಹ ಸರಕಾರಕ್ಕೆ ಸಲ್ಲಿಸ ಲಾಗಿದೆ. ಇದರ ಹೊರತಾಗಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ನ 15 ನೇ ಹಣಕಾಸು ಯೋಜನೆಯಡಿ ಮೂರು ಕೋಟಿ ರೂ ಗಳನ್ನು ಕೊಠಡಿಗಳ ದುರಸ್ತಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸರಕಾರಿಂದ 300 ಕೊಠಡಿಗಳ ದುರಸ್ತಿ ಮತ್ತು ಮರು ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು ಇದರ ಕಾಮಗಾರಿ ಪ್ರಗತಿಯಲ್ಲಿದೆ ಎಂಬುದು ಶಿಕ್ಷಣ ಇಲಾಖೆ ಉಪನಿರ್ದೇಶಕರ ಹೇಳಿಕೆ.

ಬಗೆಹರಿಯದ ಶಿಕ್ಷಕರ ಕೊರತೆ: ಮುಖ್ಯವಾಗಿ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಬಹಳವಾಗಿ ಕಾಡುತ್ತಿದೆ. ಚಿಕ್ಕೋಡಿ ವಿಭಾಗದಲ್ಲಿ ಈಗ 6500 ಕ್ಕೂ ಹೆಚ್ಚು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು ಇನ್ನೂ 3000 ಶಿಕ್ಷಕರ ಕೊರತೆ ಇದೆ. ಕೊರತೆ ಇದ್ದರೂ ಮಕ್ಕಳಿಗೆ ತೊಂದರೆಯಾಗದಂತೆ 1670 ಪ್ರಾಥಮಿಕ ಮತ್ತು 350 ಪ್ರೌಢಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಸರಕಾರ ಅನುಮತಿ ನೀಡಿದೆ ಎಂಬುದು ಶಿಕ್ಷಣ ಇಲಾಖೆ ಅಧಿಕಾರಿಗಳ ಹೇಳಿಕೆ.

ಅದೇ ರೀತಿ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 6200 ಕ್ಕೂ ಹೆಚ್ಚು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು 2279 ಹುದ್ದೆಗಳು ಖಾಲಿ ಇವೆ. ಸುಮಾರು 1046 ಅತಿಥಿ ಶಿಕ್ಷಕರ ಸೇವೆ ಪಡೆಯಲು ಮಂಜೂರಾತಿ ದೊರೆತಿದೆ. ಸೌಲಭ್ಯಗಳ ಕೊರತೆಯ ನಡುವೆಯೂ ಸರಕಾರಿ ಶಾಲೆಗಳ ಬೇಡಿಕೆ ಮಾತ್ರ ಕಡಿಮೆಯಾಗಿಲ್ಲ. ಬದಲಾಗಿ ಮಕ್ಕಳ ಪ್ರವೇಶಾತಿಯಲ್ಲಿ ಸುಧಾರಣೆ ಕಾಣುತ್ತಿದೆ.

ಪ್ರತಿ ವರ್ಷ ಎದುರಾಗುವ ಸಮಸ್ಯೆಗಳಿಗೆ ಶಾಶ್ವತ ಮುಕ್ತಿ ಕೊಟ್ಟರೆ ಸರಕಾರಿ ಶಾಲೆಗಳ ಗುಣಮಟ್ಟ ಯಾರಿಗೂ ಕಡಿಮೆ ಇಲ್ಲ ಎನ್ನುವಂತೆ ಬದಲಾವಣೆ ಕಾಣಲಿದೆ. ಹೊಸ ಸರಕಾರದಲ್ಲಿ ಜಿಲ್ಲೆಯ ಸಾರಥ್ಯ ವಹಿಸಿರುವ ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಟಾಳಕರ ಅವರ ಮುಂದೆ ಈ ಸವಾಲಿದೆ. ಸಚಿವದ್ವಯರು ಶೈಕ್ಷಣಿಕ ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡಬೇಕು ಎಂಬುದು ಎಲ್ಲರ ಆಶಯ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಂಟು ವಲಯಗಳಲ್ಲಿ ಶಾಲಾ ಕೊಠಡಿಗಳ ದುರಸ್ತಿಗೆ ಕ್ರಮವಹಿಸಲಾಗಿದೆ. ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳಲ್ಲಿ ಯಾವುದೇ ಕಾರಣಕ್ಕೂ ಮಕ್ಕಳನ್ನು ಕೂಡಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕೊಠಡಿಗಳ ದುರಸ್ತಿಗೆ ಬೇಕಾದ ಅನುದಾನದ ಕ್ರಿಯಾಯೋಜನೆ ರೂಪಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತಿದೆ.
ಮೋಹನಕುಮಾರ ಹಂಚಾಟೆ,
ಡಿಡಿಪಿಐ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ

ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಕೊಠಡಿಗಳ ದುರಸ್ತಿ ಅಷ್ಟೊಂದು ಗಂಭೀರವಾಗಿಲ್ಲ. ಆದರೆ ಅಗತ್ಯವಿರುವ ಕಡೆಗಳಲ್ಲಿ ಈಗಾಗಲೇ
ದುರಸ್ತಿ ಮತ್ತು ಮರುನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೊಠಡಿಗಳ ದುರಸ್ತಿಗೆ ಬೇಕಾಗಿರುವ ಅನುದಾನಕ್ಕೆ ಸರಕಾರಕ್ಕೆ ಹೊಸ
ಪ್ರಸ್ತಾವನೆ ಸಲ್ಲಿಸಲಾಗಿದೆ. ಮಕ್ಕಳ ಸುರಕ್ಷತೆಗೆ ಹೆಚ್ಚಿನ ಗಮನಹರಿಸಲಾಗಿದೆ.
ಬಸವರಾಜ ನಾಲ್ವತವಾಡ,
ಬೆಳಗಾವಿ ಜಿಲ್ಲೆ ಉಪನಿರ್ದೇಶಕರು

*ಕೇಶವ ಆದಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.