Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!

ಪ್ರಯಾಣಿಕರ ಪರದಾಟ...ಬೇಜವಾಬ್ದಾರಿಗೆ ಹಿಡಿಶಾಪ... ಮಾಜಿ ಸಿಎಂ ಬೊಮ್ಮಾಯಿ ಕೂಡ ಆಗಮಿಸಿದ್ದರು...!

Team Udayavani, Apr 21, 2024, 10:26 PM IST

1-wqeqeewq

ಬೆಳಗಾವಿ: ಬೆಂಗಳೂರಿನಿಂದ ಬೆಳಗಾವಿಗೆ ಭಾನುವಾರ ಸಂಜೆ ಬಂದ ಇಂಡಿಗೋ ವಿಮಾನ ಸಿಬ್ಬಂದಿ ಸುಮಾರು 22 ಹೆಚ್ಚು ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದಿದ್ದು ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ವಿಮಾನದಲ್ಲಿ ಆಗಮಿಸಿದ್ದು, ಅವರ ಬ್ಯಾಗ್ ಕೂಡ ವಿಮಾನದಲ್ಲಿ ಇರಲಿಲ್ಲ ಎನ್ನಲಾಗಿದೆ.

ಬೆಳಗಾವಿಗೆ ಬಂದು ಇಳಿಯುವವರೆಗೆ ಬ್ಯಾಗ್ ತಂದಿಲ್ಲ ಎಂಬುದರ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ.
ಭಾನುವಾರ ಸಂಜೆ 5.55ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ ಮಲೇಷಿಯನ್ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ವಿಮಾನ ರಾತ್ರಿ 7.30 ಗಂಟೆಗೆ ಬೆಳಗಾವಿಗೆ ಬಂದಿಳಿಯುತ್ತಿದ್ದಂತೆ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿತ್ತು.ನಂತರ ಪರಿಶೀಲನೆ ನಡೆಸಿದಾಗ ಸುಮಾರು 22 ಕ್ಕೂ ಹೆಚ್ಚು ಪ್ರಯಾಣಿಕರ ಬ್ಯಾಗ್ ಗಳು ಬಂದಿರಲಿಲ್ಲ.

ಈ ಕುರಿತು ಇಂಡಿಗೋ ವಿಮಾನ ಸಿಬ್ಬಂದಿಯನ್ನು ಪ್ರಯಾಣಿಕರು ವಿಚಾರಿಸಿದಾಗ ಮಲೇಷಿಯನ್ ವಿದ್ಯಾರ್ಥಿಗಳ ಬ್ಯಾಗ್ ಗಳು ಬಹಳ ದೊಡ್ಡದಿದ್ದವು. ಹಾಗಾಗಿ ಬೇರೆ ಪ್ರಯಾಣಿಕರ ಬ್ಯಾಗ್ ಗಳನ್ನು ತರಲು ಸಾಧ್ಯವಾಗಿಲ್ಲ. ನಿಮ್ಮ ಬ್ಯಾಗ್ ಗಳನ್ನು ನಾಳೆ ತರಿಸಿಕೊಡುತ್ತೇವೆ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ವಿಮಾನ ಸಿಬ್ಬಂದಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಪ್ರತಿಭಟನೆ ನಡೆಸಿದ್ದಾರೆ.

ಮಲೇಷಿಯನ್ ವಿದ್ಯಾರ್ಥಿಗಳ ಬ್ಯಾಗ್ ದೊಡ್ಡದಿದ್ದರೆ ಅವರ ಬ್ಯಾಗ್ ಬಿಡಬಹುದಿತ್ತು. ಅಥವಾ ನಮಗೆ ಮೊದಲೇ ಮಾಹಿತಿ ನೀಡಬೇಕಿತ್ತು. ನಮ್ಮಲ್ಲಿ ಬೇರೆ ಊರಿನ ಪ್ರಯಾಣಿಕರಿದ್ದಾರೆ. ಹಲವರ ಔಷಧಿಗಳು ಸೇರಿದಂತೆ ಅಗತ್ಯ ವಸ್ತುಗಳು ಬ್ಯಾಗ್ ನಲ್ಲಿವೆ. ಅಂತವರು ಈಗ ಏನು ಮಾಡಬೇಕು ಎಂದು ಪ್ರಯಾಣಿಕರು ಪ್ರಶ್ನಿಸಿದರು.

ತೂಕ ಸೇರಿದಂತೆ ಎಲ್ಲ ಪರಿಶೀಲನೆಯ ನಂತರವೇ ಲಗೇಜ್ ಪಡೆದು, ವಿಮಾನಕ್ಕೆ ಹಾಕಲಾಗುತ್ತದೆ. ಆದರೂ ಈ ರೀತಿಯ ಅಚಾತುರ್ಯ ಹೇಗಾಯಿತು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಪ್ರಯಾಣಿಕರು ವಿಮಾನ ಸಿಬ್ಬಂದಿಗಳ ಬೇಜವಾಬ್ದಾರಿಗೆ ಹಿಡಿಶಾಪ ಹಾಕಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.