ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕರ ಬರ್ಬರ ಹತ್ಯೆ
Team Udayavani, Oct 6, 2022, 9:55 PM IST
ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಛತ್ರಪತಿ ಶಿವಾಜಿ ಮಹಾರಾಜ ಪ್ರತಿಮೆ ಎದುರು ಗುರುವಾರ ರಾತ್ರಿ ಹಳೆಯ ದ್ವೇಷ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಸುಳೇಭಾವಿ ಗ್ರಾಮದ ರಣಧೀರ ಮಹೇಶ ಅಲಿಯಾಸ್ ರಾಮಚಂದ್ರ ಮುರಾರಿ(26) ಹಾಗೂ ಪ್ರಕಾಶ ನಿಂಗಪ್ಪ ಹುಂಕರಿ ಪಾಟೀಲ(24) ಎಂಬ ಯುವಕರನ್ನು ಹತ್ಯೆ ಮಾಡಲಾಗಿದೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ. ಶಿವಾಜಿಮಹಾರಾಜರ ಪ್ರತಿಮೆ ಎದುರು ಕೊಲೆ ಮಾಡಲಾಗಿದೆ. ಕೊಲೆ ಯಾರು ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ. ಮಾತೀಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಮಾರಿಹಾಳ ಇನ್ಸ್ಪೆಕ್ಟರ್ ಬಸ್ಸಾಪೂರೆ ಸೇರಿ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ