ನೆರೆ ಮಧ್ಯೆಯೂ ಬೆನಕನ ಸಂಭ್ರಮ


Team Udayavani, Sep 2, 2019, 12:12 PM IST

bg-tdy-1

ಬೆಳಗಾವಿ: ಪ್ರತಿಷ್ಠಾಪನೆಗೆ ಸಿದ್ಧಗೊಂಡಿರುವ ಗಣೇಶ ಮೂರ್ತಿ.

ಬೆಳಗಾವಿ: ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುವ, ರಾಜ್ಯದಲ್ಲಿಯೇ ಮಾದರಿ ಎನಿಸಿಕೊಂಡ ವಿಘ್ನ ನಿವಾರಕ ಶ್ರೀ ಗಣೇಶನ ಹಬ್ಬಕ್ಕೆ ಬೆಳಗಾವಿ ಸಕಲ ರೀತಿಯಿಂದ ಸಜ್ಜಾಗಿದೆ. ಪ್ರವಾಹದ ಕಾರ್ಮೋಡದಲ್ಲಿಯೂ ಗಣಪನನ್ನು ಬರಮಾಡಿಕೊಳ್ಳಲು ಜನರು ಕಾತರರಾಗಿದ್ದಾರೆ.

ಮನೆ-ಮನಗಳಲ್ಲಿ ಗಣಪನನ್ನು ಪ್ರತಿಷ್ಠಾಪಿಸಲು ಕುಂದಾನಗರಿ ಸಜ್ಜುಗೊಂಡಿದೆ. ಮುಂಬೈ ಹಾಗೂ ಪುಣೆ ನಂತರ ಬೆಳಗಾವಿಯ ಗಣೇಶೋತ್ಸವ ಎಲ್ಲೆಡೆ ಪ್ರಖ್ಯಾತಿ ಪಡೆದುಕೊಂಡಿದೆ. ಬೇರೆ ಬೇರೆ ಜಿಲ್ಲೆ, ರಾಜ್ಯಗಳ ಜನರೂ ಗಣೇಶನ ಹಬ್ಬ ವೀಕ್ಷಿಸಲು ಬೆಳಗಾವಿಗೆ ಆಗಮಿಸುತ್ತಾರೆ. ಇಂತಹ ವಿಶೇಷ ಮೆರಗು ನೀಡುವ ಬೆನಕನ ಹಬ್ಬಕ್ಕೆ ಈ ಬಾರಿ ಪ್ರವಾಹದ ಕಾರ್ಮೋಡ ಕವಿದಿದ್ದರೂ ಸಂಪ್ರದಾಯದಲ್ಲಿ ಯಾವುದೇ ಕಡಿಮೆ ಕಂಡು ಬರುತ್ತಿಲ್ಲ.

ಗಣೇಶ ಹಬ್ಬಕ್ಕಾಗಿ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ತಯಾರಿ ಜೋರಾಗಿ ನಡೆದಿದೆ. ಸಾರ್ವಜನಿಕ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಮಂಟಪಗಳನ್ನು ಹಾಕಿ ವಿದ್ಯುತ್‌ ಅಲಂಕಾರಗಳ ತಯಾರಿ ನಡೆದಿದೆ. ನಗರದಲ್ಲಿ 380ಕ್ಕೂ ಹೆಚ್ಚು ಸೇರಿದಂತೆ ಜಿಲ್ಲೆಯಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ಮೂರ್ತಿಗಳು ಪ್ರತಿಷ್ಠಾಪನೆ ಆಗುತ್ತವೆ. ಬಹುತೇಕ ಗಣೇಶ ಮಂಡಳಿಯವರು ಸರಳವಾಗಿ ಹಬ್ಬ ಆಚರಿಸಿ ಹೆಚ್ಚುವರಿ ಹಣವನ್ನು ನೆರೆ ಸಂತ್ರಸ್ತರಿಗೆ ನೀಡಲು ಮುಂದಾಗಿದ್ದಾರೆ.

ನಗರದ ಝಂಡಾ ಚೌಕೌದಲ್ಲಿ ಮೊದಲ ಸಾರ್ವಜನಿಕ ಗಣಪತಿಯನ್ನು ಲೋಕಮಾನ್ಯ ಬಾಲಗಂಗಾಧರ ಟಿಳಕರು ಪ್ರತಿಷ್ಠಾಪನೆ ಮಾಡಿದ್ದು, ಈಗಲೂ ಪ್ರತಿ ವರ್ಷ ಈ ಸ್ಥಳದಲ್ಲಿ ಗಣಪನನ್ನು ಪ್ರತಿಷ್ಠಾಪಿಸುವ ಸಂಪ್ರದಾಯ ಮುಂದುವರಿದುಕೊಂಡು ಬಂದಿದೆ. ಶ್ರೀಮಂತಿಕೆಯಿಂದ ಬೆಳೆದು ಬಂದಿರುವ ಹಬ್ಬ ಈಗಲೂ ತನ್ನ ಗತವೈಭವವನ್ನು ಕಡಿಮೆ ಆಗಿಲ್ಲ.

ಜಿಲ್ಲೆಯ ಬಹುತೇಕ ಹಳ್ಳಿಗಳು ಪ್ರವಾಹದಿಂದ ನಲುಗಿದ್ದು, ನೆರೆಯಲ್ಲಿ ಮುಳುಗಡೆಯಾದ ಹಳ್ಳಿಗಳಲ್ಲಿ ಕೆಲವು ಸಂಘ-ಸಂಸ್ಥೆಗಳು ಸಹಾಯ ಮಾಡಿ ಸಂತ್ರಸ್ತರೊಂದಿಗೆ ಹಬ್ಬ ಆಚರಿಸಲು ಸಿದ್ಧತೆ ಮಾಡಿಕೊಂಡಿವೆ. ಇನ್ನೂ ಕೆಲವು ಹಳ್ಳಿಗಳ ಓಣಿ ಓಣಿಗಳಲ್ಲಿ ಪ್ರತಿಷ್ಠಾಪನೆ ಆಗುವ ಗಣೇಶ ಮೂರ್ತಿ ಸಣ್ಣ ಪ್ರಮಾಣದಲ್ಲಿ ಮಾಡಲಾಗುತ್ತಿದೆ. ಮಹಾರಾಷ್ಟ್ರದಿಂದ ತರುತ್ತಿದ್ದ ಗಣಪತಿ ಮೂರ್ತಿಗಳ ಪ್ರಮಾಣದಲ್ಲಿ ಈ ಬಾರಿ ಗಣನೀಯವಾಗಿ ಇಳಿಕೆ ಕಂಡಿದೆ. ಸ್ಥಳೀಯವಾಗಿ ಮೂರ್ತಿಕಾರರಿಂದ ಗಣೇಶನನ್ನು ಖರೀದಿಸಿ ಪ್ರತಿಷ್ಠಾಪಿಸಲಾಗುತ್ತಿದೆ.

ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಹಾಗೂ ಗೋಕಾಕ ತಾಲೂಕಿನ ಕೊಣ್ಣೂರದಲ್ಲಿ ಅತಿ ಹೆಚ್ಚು ಗಣಪತಿ ಮೂರ್ತಿಗಳು ತಯಾರಾಗುತ್ತವೆ. ಈ ಭಾಗದಲ್ಲಿ ಅತಿ ಹೆಚ್ಚು ಪ್ರವಾಹ ಬಂದು ಎಷ್ಟೋ ಗಣಪತಿ ಮೂರ್ತಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮೂರ್ತಿಗಳೇ ಇಲ್ಲದಂಥ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಬೇರೆ ಬೇರೆ ಪ್ರದೇಶಗಳಿಂದ ಜನರು ಮೂರ್ತಿಗಳನ್ನು ಖರೀದಿಸಿ ಪ್ರತಿಷ್ಠಾಪಿಸುತ್ತಿದ್ದಾರೆ.

ಗಣಪತಿ ಮೂರ್ತಿ ಪ್ರತಿಷ್ಠಾಪನೆಗಾಗಿ ಅಗತ್ಯ ಇರುವ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಭಕ್ತರು ನಗರದ ಮಾರುಕಟ್ಟೆಯಲ್ಲಿ ಮುಗಿ ಬಿದ್ದಿದ್ದಾರೆ. ಹೂ-ಹಣ್ಣು, ಮಾಲೆಗಳನ್ನು ಖರೀದಿಸುತ್ತಿದ್ದಾರೆ. ಈ ಸಲ ಹೂವಿನ ದರ ಹೆಚ್ಚಾಗಿದ್ದು, ಜನರ ಜೇಬಿಗೆ ಕತ್ತರಿ ಬೀಳುತ್ತಿದೆ. ಗಣೇಶನ ಮೂರ್ತಿ ಅಲಂಕಾರಕ್ಕೆ ಚಿಕ್ಕ ಚಿಕ್ಕ ಥರ್ಮಾಕೋಲ್ ಮಂಟಪಗಳು, ವಿದ್ಯುತ್‌ ದೀಪಗಳು, ಅಲಂಕಾರಿಕ ವಸ್ತುಗಳನ್ನು ಜನರು ಖರೀದಿಸುತ್ತಿದ್ದಾರೆ.

ಸೆ.2ರಂದು ಪ್ರತಿಷ್ಠಾಪನೆ ಆಗುವ ಗಣಪನಿಗೆ 5,7, 9 ಹಾಗೂ 11 ದಿನಗಳವರೆಗೆ ಪೂಜಿಸಲಾಗುತ್ತದೆ. ಬಹುತೇಕ ಮನೆಯಲ್ಲಿ ಪ್ರತಿಷ್ಠಾಪನೆ ಆಗುವ ಗಣಪನ ಮೂರ್ತಿಗಳನ್ನು ಐದನೇ ದಿನಕ್ಕೆ ವಿಸರ್ಜನೆ ಮಾಡಲಾಗುತ್ತದೆ. 11ನೇ ದಿನಕ್ಕೆ ಅತಿ ಹೆಚ್ಚು ಮೂರ್ತಿಗಳ ಪ್ರತಿಷ್ಠಾಪನೆ ಆಗುತ್ತವೆ.

ಪ್ರವಾಹದ ಬಿಸಿ: ಜಿಲ್ಲೆಯಾದ್ಯಂತ ಪಟಾಕಿ-ಮನರಂಜನೆಗೆ ಬ್ರೇಕ್‌

ಈ ಬಾರಿ ಪ್ರವಾಹದ ಬಿಸಿ ಎಲ್ಲೆಡೆಯೂ ತಟ್ಟಿದ್ದರಿಂದ ಜಿಲ್ಲೆಯಾದ್ಯಂತ ಈ ಬಾರಿ ಗಣೇಶೋತ್ಸವಕ್ಕೆ ಪಟಾಕಿ ಸಿಡಿ ಮದ್ದುಗಳ ಅಬ್ಬರಕ್ಕೆ ಕಡಿವಾಣ ಹಾಕಲಾಗಿದೆ. ಜನತೆಗೆ ಸಾರ್ವಜನಿಕ ಗಣೇಶ ಮಂಡಳದವರು ಹಮ್ಮಿಕೊಳ್ಳುತ್ತಿದ್ದ ಸಾಂಸ್ಕೃತಿಕ ಹಾಗೂ ಮನರಂಜನೆ ಕಾರ್ಯಕ್ರಮಗಳಿಗೆ ಬಾರಿ ಬ್ರೇಕ್‌ ಹಾಕಲಾಗಿದೆ. ಭಕ್ತರಿಂದ ಸಂಗ್ರಹವಾಗುವ ಕಾಣಿಕೆ ಹಣವನ್ನು ಹಾಗೂ ಸರಳ ಆಚರಣೆ ಮಾಡಿ ಹೆಚ್ಚುವರಿ ಆಗಿ ಉಳಿಯುವ ಹಣವನ್ನು ಸಂತ್ರಸ್ತರ ನೆರವಿಗೆ ನೀಡಲು ಮಂಡಳದವರು ನಿರ್ಧರಿಸಿದ್ದಾರೆ.
•ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.